ಧಾರವಾಡ : ದೇಶದಲ್ಲಿ ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವಂತ ಕಾನೂನು ಬರಬೇಕು ಎಂದು ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ (Basava Prakash Swamiji) ಆಗ್ರಹಿಸಿದ್ದಾರೆ.
ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣ ನಡೆದ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಶ್ರೀಗಳು, ಪೊಲೀಸರು ಬಂಧಿಸೋದು, ಜಾಮೀನು ಕೊಡವುದು ಆಗಬಾರದು.
ಅತ್ಯಾಚಾರಿಗಳ ಜನನಾಂಗ ಕಟ್ ಮಾಡುವ ಕಾನೂನು ಬರಬೇಕು. ಈ ರೀತಿ ಮಾಡಿದರೆ ಮಾತ್ರ ಭಾರತದಲ್ಲಿ ಅತ್ಯಾಚಾರ ಕಡಿಮೆ ಆಗುತ್ತವೆ ಎಂದು ಅಭಿಪಾಯಪಟ್ಟರು.
ಇದನ್ನೂ ಓದಿ : ಪಾಲಿಕೆ ಆಯುಕ್ತೆ ಮೇಲೆ ಭ್ರಷ್ಟಾಚಾರ ಆರೋಪ : ಹಣ ಪಡೆಯುತ್ತಿರೋ ವಿಡಿಯೋ ಬಿಡುಗಡೆ
ಇನ್ನು ಇದೇ ವೇಳೆ ಹೆಣ್ಣು ಮಕ್ಕಳು ಉಡುಗೆ ತೊಡುಗೆ ಬಗ್ಗೆಯೂ ಕಾಳಜಿ ವಹಿಸಬೇಕು ಎಂದ ಶ್ರೀಗಳು, ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ ತಲೆ ಮೇಲೆ ಸೆರಗು ಹಾಕಿಕೊಂಡು ಯುದ್ಧ ಮಾಡಿದ್ದಾರೆ.
ಆದರೆ ನಮ್ಮ ಯುವತಿಯರು ಹೊಸ ವರ್ಷ ಬಂದರೆ ಎಂಜಿ, ಬ್ರಿಗೆಡ್ ರೋಡ್ ನಲ್ಲಿ ತುಂಡು ಬಟ್ಟೆ ಹಾಕಿಕೊಂಡು ಕುಣಿಯುತ್ತಾರೆ. ಇದರಿಂದ ಪುರುಷರ ಮನುಷ್ಯ ಪ್ರಚೋದನೆಗೊಳಗಾಗಿ ಕೆಲ ಸಂದರ್ಭಗಳಲ್ಲಿ ಅತ್ಯಾಚಾರ ಆಗುತ್ತಿವೆ.
ಸ್ತ್ರೀಯರಿಗೆ ಮೊದಲು ತಾವು ಹೇಗೆ ಇರಬೇಕು ಅನ್ನೋದು ಗೊತ್ತಿರಬೇಕಲ್ವ. ಉಡುಗೆ, ತೊಡುಗೆಯಲ್ಲಿ ಎಚ್ಚೆತ್ತುಕೊಳ್ಳಬೇಕಲ್ಲ ಎಂದು ಶ್ರೀಗಳು Basava Prakash Swamiji ಪ್ರಶ್ನೆ ಮಾಡಿದರು.
ಇದನ್ನೂ ಓದಿ : ಪುತ್ತೂರಿನ ಬೊಳುವಾರು ವೃತ್ತದಲ್ಲಿದ್ದ ಅಂಗಡಿಗಳು ಬೆಂಕಿಗಾಹುತಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel