ಮೇಲ್ಮನೆ : ನಾಲ್ಕು ಕ್ಷೇತ್ರ.. 40 ಅಭ್ಯರ್ಥಿಗಳು.. ಇಂದು ಮತದಾನ ( Voting beginning )
ಬೆಂಗಳೂರು : ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ ( Voting beginning ). ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದೆ.
ಇಂದಿನ ಮತದಾನಕ್ಕಾಗಿ ಒಟ್ಟು 549 ಮತಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಚುನಾವಣಾ ಕಣದಲ್ಲಿ 40 ಅಭ್ಯರ್ಥಿಗಳಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.
ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಹಾವೇರಿ, ಗದಕ, ಉತ್ತರಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಬೆಳಗ್ಗೆಯಿಂದ ಮತದಾನ ಪ್ರಾರಂಭವಾಗಿದೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 146 ಮತ ಕೇಂದ್ರಗಳು, ಆಗ್ನೇಯ ಪದವೀದರ ಕ್ಷೇತ್ರದಲ್ಲಿ 187 ಮತಕೇಂದ್ರಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 69 ಮತಕೇಂದ್ರಗಳು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 147 ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಆರ್.ಎಂ.ಕುಬೇರಪ್ಪ ಅವರು ರಾಣೆಬೆನ್ನೂರ ನಗರದ ನಗರಸಭಾ ಪ್ರೌಢಶಾಲೆಯ ಮತಗಟ್ಟೆ 102 ರಲ್ಲಿ ಮತ ಚಲಾಯಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಶಿಕ್ಷಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.
ಕಲಬುರಗಿಯಲ್ಲಿ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ನಿಧಾನಗತಿಯಲ್ಲಿ ಮತದಾರರು ಮತ ಕೇಂದ್ರಗಳತ್ತ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ : ಬಿಹಾರ ಎಲೆಕ್ಷನ್ : ಮೊದಲ ಹಂತದ ಮತದಾನ ಆರಂಭ
ಇನ್ನು ಮತಕೇಂದ್ರಗಳ ಸುತ್ತ 6 ಜನ DYSP, 12 CPI, 28 PSI, 76 ASI, 106 HC, 192 PC, 29 WPC, 11 DAR 02 KSRP ತುಕಡಿಗಳ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳಿದ್ದರೇ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳಿದ್ದಾರೆ. ಇನ್ನು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿ ಕಣದಲ್ಲಿದ್ದರೇ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.
ಈ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್,ಜೆಡಿಎಸ್ ತಲಾ ನಾಲ್ಕು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇನ್ನುಳಿದಂತೆ ನೋಂದಾಯಿತ ಪಕ್ಷದಿಂದ 6 ಅಭ್ಯರ್ಥಿಗಳು ಮತ್ತು 22 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಎಲ್ಲಿ ಹೇಗೆ ಮತ ಎಣಿಕೆ
ನವೆಂಬರ್ 2 ರಂದು ಇಂದಿನ ಮತದಾನದ ಮತ ಎಣಿಕೆ ನಡೆಯಲಿದ್ದು, ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪದವೀಧರ ಕ್ಷೇತ್ರದ ಮತ ಎಣಿಕೆಯು ನಡೆಯಲಿದೆ.ಇಲ್ಲಿ ಒಂದು ಹಾಲ್’ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ನಡೆಯಲಿದೆ. ಇಲ್ಲಿ ಒಂದು ಹಾಲ್’ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ : ಸಿದ್ದರಾಮಯ್ಯ ವಾಗ್ದಾಳಿ
ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಮತ ಕ್ಷೇತ್ರದ ಮತ ಎಣಿಕೆಯು ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಇಲ್ಲಿ ಮತ ಎಣಿಕೆಗೆ ಪ್ರತ್ಯೇಕವಾಗಿ ಎರಡು ಹಾಲ್ ನಲ್ಲಿ ತಲಾ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










