ಉಪಚುನಾವಣೆ : ತಪ್ಪದೇ ಮತ ಚಲಾಯಿಸಿ ಎಂದು ಸಿಎಂ ಮನವಿ
ಬೆಂಗಳೂರು : ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಮತದಾನ ಶುರುವಾಗಿದೆ.
ನಿಧಾನವಾಗಿ ಜನರು ಮತಗಟ್ಟೆಗಳತ್ತ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಈ ಮಧ್ಯೆ ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ ಎಂದು ಮತದಾರರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ.
ಇದನ್ನೂ ಓದಿ : ಆರ್.ಆರ್ ನಗರ, ಶಿರಾದಲ್ಲಿ ಬಿರುಸಿನ ಓಟಿಂಗ್; ಕೊರೊನಾ ಅಲರ್ಟ್..ಗೊಂದಲ, ಅವ್ಯವಸ್ಥೆ..!
ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ.
ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.
ಶಿರಾ ಉಪಕಣದಲ್ಲಿ 17 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಕ್ಷೇತ್ರದಾದ್ಯಂತ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel