ಹೇಡಿಗಳ ರಾಜಕೀಯ ಮಾಡುವುದು ಬಿಜೆಪಿಯ ಚಾಳಿ : ಕಾಂಗ್ರೆಸ್
ಬೆಂಗಳೂರು : ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಐಎಎಸ್ ಅಧಿಕಾರಿ ಡಿ.ಕೆ ರವಿ ಆತ್ಮಹತ್ಯೆಯಲ್ಲಿ ಕರ್ನಾಟಕ ಬಿಜೆಪಿ ನಾಯಕರು ಸುಳ್ಳಿನ ರಾಜಕೀಯ ಮಾಡಿದರು, ಸಿಬಿಐ ತನಿಖೆಯಲ್ಲಿ ಸತ್ಯ ಗೆದ್ದಿತು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆಯಲ್ಲಿ ಕುತಂತ್ರ ರಾಜಕೀಯ ಮಾಡಿದರು ಹೈಕೋರ್ಟಿನಲ್ಲಿ ಸತ್ಯ ಗೆದ್ದಿದೆ. ಈಗ ವಿನಯ್ ಕುಲಕರ್ಣಿ ಅವರನ್ನು ಗುರಿಯಾಗಿಸಿದ್ದಾರೆ, ಸತ್ಯ ಗೆಲ್ಲುವ ವಿಶ್ವಾಸವಿದೆ ಎಂದಿದೆ.
ಸಮಾಜಮುಖಿ, ಅಭಿವೃದ್ಧಿಪರ ಚಿಂತನೆಗಳರಿಯದ ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ದಿಕ್ಕುತಪ್ಪಿಸುವ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುವುದು.
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವೇ..! ಕೈ,ಕಮಲ,ದಳ ನಾಯಕರು ಹೇಳಿದ್ದೇನು..!
ಬಿಜೆಪಿ ಮೊದಲಿಂದಲೂ ಮೇಲಿನಿಂದ ಕೆಳಗಿನ ನಾಯಕರವರೆಗೂ ರೂಢಿಸಿಕೊಂಡು ಬಂದ ಚಾಳಿ. ಪ್ರತಿ ಬಾರಿಯೂ ಮುಗ್ಗರಿಸಿ ಬಿದ್ದಿದ್ದಾರೆ, ನ್ಯಾಯ ನಮ್ಮದಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಹಿನ್ನೆಲೆ
ಜಿಲ್ಲಾಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದಾರೆ.
ಗುರುವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದರು. ಸತತ 9 ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಯಿತು.
ವಿನಯ್ ಕುಲಕರ್ಣಿ ಅವರನ್ನು ಬಂಧಿಸುತ್ತಿದ್ದಂತೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲಾಯಿತು.
ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ವಿನಯ್ ಕುಲಕರ್ಣಿ ಅವರನ್ನು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ವೇಳೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಕಷ್ಟಡಿಗೆ ನೀಡುವಂತೆ ಸಿಬಿಐ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದರು.
ಎರಡೂ ಕಡೆಗಳ ವಾದ ಆಲಿಸಿದ ನ್ಯಾಯಾಧೀಶರು ವಿನಯ್ ಕುಲಕರ್ಣಿ ಅವರನ್ನು ಶುಕ್ರವಾರ ಸಂಜೆವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel