ವಿದ್ಯುತ್ ಬೆಲೆ ಏರಿಕೆ : ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಕಾಂಗ್ರೆಸ್
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಉಪಚುನಾವಣೆ ಮತದಾನ ಮುಗಿಯುತ್ತಿದ್ದಂತೆ ವಿದ್ಯುತ್ ದರ ಏರಿಕೆ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.
ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ದರ ಏರಿಕೆಯ ಆದೇಶ ಹಿಂಪಡೆಯುವಂತೆ ಒಂದು ವಾರ ಗಡುವು ಕೊಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಡೀ ದೇಶ ಕೊರೊನಾದಿಂದ ನರಳುತ್ತಿದೆ.
ಮಾನವೀಯ ಕಾರಣಕ್ಕೆ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇವೆ. ದೇಶದ ಎಲ್ಲಾ ವರ್ಗದ ಜನರೂ ಲಾಕ್ ಡೌನ್ ಗೆ ಸಹಕಾರ ನೀಡಿದರು. ಆದರೆ ರೈತರು, ಕಾರ್ಮಿಕರು, ವ್ಯಾಪಾರಿಗಳು, ಉದ್ಯೋಗಿಗಳು, ಉದ್ಯೋಗದಾತರು ಯಾರೂ ನೆಮ್ಮದಿಯಿಂದ ಇಲ್ಲ. ಸರ್ಕಾರದಿಂದ ಯಾರಿಗೂ ಸೂಕ್ತ ನೆರವು ದೊರೆಯಲಿಲ್ಲ ಎಂದು ದೂರಿದ್ದಾರೆ.
ಅಲ್ಲದೆ ಈ ಬಾರಿ ಉತ್ತಮ ಮಳೆಯಾಗಿದೆ, ಆದರೂ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ನಮ್ಮ ಅಧ್ಯಕ್ಷ ದಕ್ಷ.. ನಿಮ್ಮ ಅಧ್ಯಕ್ಷ ವಿದೂಷಕ : ಕೈ-ಬಿಜೆಪಿ ಮಧ್ಯೆ ಟ್ವಿಟ್ಟರ್ ವಾರ್
ಇದು ಎಲ್ಲ ವರ್ಗದ ಜನರ ವಿರೋಧಿ, ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕಿಡಿಕಾರಿದ ಡಿಕೆಶಿ, ವಿದ್ಯುತ್ ದರ ಹೆಚ್ಚಳನ್ನು ಕೂಡಲೇ ಹಿಂಪಡೆಯಬೇಕು. ಒಂದೂವರೆ ವರ್ಷಗಳ ಕಾಲ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಇನ್ನು ವಿದ್ಯುತ್ ಬೆಲೆ ಏರಿಕೆಯ ಹೊರೆಯನ್ನು ಸರ್ಕಾರವೇ ಹೊರಬಹುದು. ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ಬೇಡ.ಸರ್ಕಾರ ಒಂದು ವಾರದಲ್ಲೇ ತನ್ನ ಈ ಆದೇಶವನ್ನು ಹಿಂಪಡೆಯಬೇಕು.
ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಜನರ ಧ್ವನಿಯಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲಿದೆ ಎಂದು ರಾಜ್ಯ ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಹೊಡೆಯೋಕೆ ಬಂದಾಗ ನಾನು ತೋಳು ತಟ್ಟಿದ್ದು ನಿಜ : ಭೀಮಾನಾಯ್ಕ್
ಇನ್ನು ಈ ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರುಗಳಾದ ಬಿ.ಎಲ್ ಶಂಕರ್, ವಿ.ಆರ್ ಸುದರ್ಶನ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಫಿ ಉಲ್ಲಾ ಉಪಸ್ಥಿತಿ ಇದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel