ಚಾಮರಾಜನಗರ : ಬಿಎಸ್ ವೈ ವಿರುದ್ಧ ಗೋಬ್ಯಾಕ್ ಅಭಿಯಾನ
ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದರೂ ಜಿಲ್ಲೆ ಕೇಂದ್ರಕ್ಕೆ ಭೇಟಿ ನೀಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಚಾಮರಾಜನಗರ ಜಿಲ್ಲೆಯ ಮಂದಿ ಆಕ್ರೋಶ ವ್ಯಕ್ತಪಿಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬಿ.ಎಸ್.ಯಡಿಯೂರಪ್ಪ ನಡೆಯನ್ನು ಖಂಡಿಸಿ ಗೋ ಬ್ಯಾಕ್ ಸಿಎಂ ಅಭಿಯಾನ ಶುರುವಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ಮೂಢನಂಬಿಕೆಗೆ ಜೋತು ಬಿದ್ದು ಚಾಮರಾಜನಗರಕ್ಕೆ ಕಾಲಿಡದೆ ಶಾಪಗ್ರಸ್ತ ಜಿಲ್ಲೆ ಎಂಬ ಹಣೆಪಟ್ಟಿ ಮತ್ತೆ ಹಂಟಿಸಲು ಹೊರಟಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಹತ್ತಕ್ಕೂ ಹೆಚ್ಚು ಬಾರಿ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಯಶಸ್ವಿಯಾಗಿ ಐದು ವರ್ಷ ಕಾಲ ರಾಜ್ಯವನ್ನಾಳಿದ್ದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯವನ್ನು ಅಳಿಸಿದ್ದರು. ಆದರೆ ಯಡಿಯೂರಪ್ಪ ಮಾತ್ರ ಅಧಿಕಾರ ವಹಿಸಿಕೊಂಡು 15 ತಿಂಗಳಾದರೂ ನಗರಕ್ಕೆ ಬರಲು ಮನಸ್ಸು ಮಾಡುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಿಪಟೂರಿನಲ್ಲಿ `ಮಹಾನಾಯಕ’ ಫ್ಲೆಕ್ಸ್ ಗೆ ಸಗಣಿ ಎರಚಿದ ಕಿಡಿಗೇಡಿಗಳು!
ಅಧಿಕಾರಿ ಹೋಗುತ್ತೆ ಎಂದು ಚಾಮರಾಜನಗರಕ್ಕೆ ಬರಲು ಹಿಂದೇಟು ಹಾಕುತ್ತಿರುವ ಸಿಎಂ ಯಡಿಯೂರಪ್ಪ ವಿರುದ್ಧ ಕೆಲ ನೆಟ್ಟಿಗರು ಗೋಬ್ಯಾಕ್ ಸಿಎಂ ಅಭಿಯಾನ ನಡೆಸುತ್ತಿದ್ದಾರೆ.
ಜಿಲ್ಲಾ ಕೇಂದ್ರಕ್ಕೆ ಬರದೇ ಮೌಢ್ಯಕ್ಕೆ ಜೋತುಬಿದ್ದು ಜಿಲ್ಲೆಯ ಜನರಿಗೆ ಅವಮಾನಿಸಬೇಡಿ. ಜಿಲ್ಲೆಗೆ ಬರಬೇಕೆಂದರೇ ಪುಣ್ಯ ಮಾಡಿರಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಎರಡು ದಿನ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಿಎಂ ಬಿಎಸ್ ವೈ ಚಾಮರಾಜನಗರಕ್ಕೆ ಭೇಟಿ ನೀಡಿಲ್ಲ ಇದು ಜನಾಕ್ರೋಶಕ್ಕೆ ಕಾರಣರಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel