ಬಳ್ಳಾರಿ ಬಂದ್ : ಗಣಿನಾಡಲ್ಲಿ ಪ್ರತಿಭಟನೆಯ ಕಿಚ್ಚು
ಬಳ್ಳಾರಿ : ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಜನರು ರಸ್ತೆಗಳಿದಿದ್ದಾರೆ.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಇಂದು ನಡ್ಡಾ-ಜಾರಕಿಹೊಳಿ ಭೇಟಿ; ಸಂಪುಟ ವಿಸ್ತರಣೆಯೋ, ಮಹಾ ಆಪರೇಶನ್ ಕಮಲ ಪ್ಲಾನ್..?
ಅದರಂತೆ ಇಂದು ಮುಂಜಾನೆಯೇ ಹೋರಾಟಕ್ಕಿಳಿದಿರುವ ನಾನಾ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿಎಸ್ ವೈ ಭಾವಚಿತ್ರ ದಹನ ಮಾಡೋ ಮುಖೇನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಇಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಹತ್ತಾರು ಮುಖಂಡರು ಬೆಳ್ಳಂಬೆಳಿಗ್ಗೆ ಟೈಯರ್ ಗೆ ಬೆಂಕಿ ಹಚ್ಚಿದರು.
ಜೊತೆಗೆ ಸಿಎಂ ಬಿಎಸ್ ವೈ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಭಾವಚಿತ್ರ ದಹನ ಮಾಡಿ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
ಕೊರೋನಾ 2ನೇ ಅಲೆ ಭೀತಿ: ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಗಡಿಗಿ ಚನ್ನಪ್ಪ ವೃತ್ತದಲ್ಲೇ ಅಂದಾಜು 52 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೇವಲ ಬಳ್ಳಾರಿ ನಗರದಲ್ಲಿ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದ ಕೌಲಬಜಾರ್, ಸುಧಾಕ್ರಾಸ್, ರೇಡಿಯೋ ಪಾರ್ಕ್, ಕುವೆಂಪು ನಗರ ರಸ್ತೆ, ತಿಲಕನಗರದಲ್ಲಿ ಕೂಡ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.
ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಆದ್ರೆ ಅಗತ್ಯ ವಸ್ತುಗಳನ್ನು ಕೊಳ್ಳಲು ಹೂ-ಹಣ್ಣು , ತರಕಾರಿ, ಹಾಲು, ಮೆಡಿಕಲ್, ಕಿರಾಣಿ ಅಂಗಡಿಗಳು ತೆರೆದಿದ್ದವು.
.Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










