ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತುಳಸಿ ಪೂಜೆಯ ವೈಶಿಷ್ಠ್ಯತೆ, ವಿಧಿ- ವಿಧಾನ, ಪುರಾಣ – ಇತಿಹಾಸ

Namratha Rao by Namratha Rao
November 27, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

tulasi pooja

ತುಳಸಿ ಪೂಜೆಯ ವೈಶಿಷ್ಠ್ಯತೆ, ವಿಧಿ- ವಿಧಾನ, ಪುರಾಣ – ಇತಿಹಾಸ

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ತುಳಸಿ ಪೂಜೆ.. ಪ್ರತಿ ವರ್ಷ ದೀಪಾವಳಿಯ ಜೊತೆಗೂಡಿ ಬರುವ, ಆಚರಿಸಲಾಗುವ ಹಬ್ಬ. ತುಳಸಿ ಹಬ್ಬವನ್ನ ಹಿಂದೂಗಳು ಅತ್ಯಂತ ಶ್ರದ್ಧೆ ಭಕ್ತಿ ಸಂಭ್ರಮದಿಂದ ಆಚರಣೆ ಮಾಡ್ತಾರೆ. ಮನೆಮುಂದೆ ತುಳಸಿ ಗಿಡಕ್ಕೆ ಅಲಂಕಾರ ಮಾಡಿ ಅದಕ್ಕೆ ಪೂಜೆ ಮಾಡಿ ಮಹಿಳೆಯರು ಮುತ್ತೈದೆಯರನ್ನ ಕರೆಸಿ ಅರಿಶಿಣ ಕುಂಕುಮ ಕೊಡುವ ಸಂಪ್ರದಾಯವಿದೆ. ಅಂದ್ಹಾಗೆ ತುಳಿಸ ಪೂಜೆ ಮಾಡುವುದರಿಂದ ಮನೆಗೆ ಲಕ್ಷ್ಮಿ ಒಲಿಯುತ್ತಾಳೆ ಎಂಬ ನಂಬಿಕೆಯಿದೆ. ದೀಪಾವಳಿ ಜೊತೆಗೂಡಿ ಬರುವ ತುಳಸಿ ಹಬ್ಬಕ್ಕೆ ಅನೇಕ ವೈಶಿಷ್ಠ್ಯವಿದೆ.

ಇನ್ನೂ  ಜಗತ್ ಪಾಲಕ ಶ್ರೀ ವಿಷ್ಣು ಹಾಗೂ ತುಳಿಸಿಯ ವಿವಾಹದಂತೆ ತುಳಸಿ ಹಬ್ಬ ಆಚರಿಸಲಾಗುತ್ತದೆ. ಚಾಂದ್ರಮಾನ ಕಾರ್ತಿಕಮಾಸ ಶುಕ್ಲಪಕ್ಷದ 19ನೇ ದಿನವಾದ ದ್ವಾದಶಿಯಂದು ಈ ಹಬ್ಬವನ್ನು ಆಚರಣೆ ಮಾಡಲಾಗುತ್ತೆ.  ಕಾರ್ತಿಕ ಮಾಸ ಶ್ರೀ ಹರಿಗೆ ಪ್ರಿಯವಾದ ಮಾಸ. ಅದಕ್ಕಾಗಿ ತಾಯಿ ಲಕ್ಷ್ಮಿ ದೇವಿಗೂ ಈ ಮಾಸ ಪ್ರಿಯವಾದದ್ದು. ಈ ತಿಂಗಳಲ್ಲಿ ವಿಷ್ಣು ಯೋಗ ನಿದ್ರೆಯಿಂದ ಎಚ್ಚರವಾಗ್ತಾನೆ. ಆಗ ಜಗತ್ತಿನಲ್ಲಿ ಸಂತೋಷ ಮತ್ತು ಕೃಪೆಯ ಮಳೆಯಾಗುತ್ತದೆ. ತಾಯಿ ಲಕ್ಷ್ಮಿ ಭೂಮಿಗೆ ಬಂದು ಭಕ್ತರಿಗೆ ಕೃಪೆ ತೋರುತ್ತಾಳೆಂಬ ನಂಬಿಕೆಯಿದೆ.

ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಸಾವಯವ ನುಗ್ಗೆ ಪೌಡರ್

ಪೂಜಾ ವಿಧಾನ

ಬೆಳಿಗ್ಗೆ ದೀಪ ಬೆಳಗಿಸಿ ತುಳಸಿ ಪೂಜೆ ಮಾಡಬೇಕು. ಪೂಜೆ ಮಾಡಿದ ನಂತರ ಕುಟುಂಬದ ಸಂತೋಷಕ್ಕೆ ಪ್ರಾರ್ಥನೆ ಮಾಡಬೇಕು. ತುಳಸಿಗಿಡದೊಂದಿಗೆ ಬೆಟ್ಟದನೆಲ್ಲಿಕಾಯಿ ಗಿಡವನ್ನೂ ನೆಟ್ಟು ಪೂಜಿಸುವ ಸಂಪ್ರದಾಯ ಹಿಂದಿನಿಂದಲೂ ಇದೆ.  ಉತ್ಥಾನ ದ್ವಾದಶೀ ದಿವಸ ಬೆಳಗ್ಗೆ ಕಾಯಿಸಹಿತವಾದ ಬೆಟ್ಟದನೆಲ್ಲಿಗಿಡವನ್ನು ನೆಟ್ಟು ಅಲ್ಲಿ ಭಗವಂತನನ್ನು ಕೂರಿಸಿ ನೀರಾಜನಾದಿಗಳಿಂದ ಪುಜಿಸುತ್ತಾರೆ. ರಾತ್ರಿಯಲ್ಲಿ ಬೃಂದಾವನವನ್ನು ಪುಷ್ಪಾದಿಗಳಿಂದಲಂಕರಿಸಿ ಭಗವಂತನನ್ನು ಆ ಬೃಂದಾವನ ದಲ್ಲಿಟ್ಟು ಉತ್ಸವಮಾಡುತ್ತಾರೆ. ಮನೆಗಳಲ್ಲಿ ಬೃಂದಾವನವನ್ನು ಪುಜಿಸಿ ದೀಪಗಳಿಂದ ಅಲಂಕರಿಸಿ ಪುಜಿಸುತ್ತಾರೆ. ರಾತ್ರಿ ಭಗವಂತನಿಗೆ ಕ್ಷೀರಾನ್ನನಿವೇದನ ಒಂದು ವಿಶೇಷ. ಹೊಸ ನೆಲ್ಲಿಕಾಯನ್ನು ಈ ದ್ವಾದಶಿಯಿಂದ ಉಪಯೋಗಿಸಲು ಪ್ರಾರಂಭಿಸುತ್ತಾರೆ. ಕ್ಷೀರಾಬ್ಧಿ ಯಲ್ಲಿ ಶಯನಿಸಿದ ಭಗವಂತ ಈ ದ್ವಾದಶಿಯಲ್ಲಿ ತುಲಸೀ ಆವಾಸವಾದ ಬೃಂದಾವನದಲ್ಲಿ ತುಲಸೀ ಲಕ್ಷ್ಮಿಯರೊಡನೆ ಏಳುವುದರ ಸಂಕೇತವಾಗಿ ಈ ಪೂಜೆ ಇಂದಿಗೂ ನಡೆಯುವ ರೂಢಿಯಿದೆ.tulasi pooja

ಪುರಾಣ , ಇತಿಹಾಸ

ಇನ್ನೂ ತುಳಸಿ ಹಬ್ಬ ಆಚರಣೆ ಹಿಂದೆ ಪೌರಾಣಿಕ ಕಥೆಗಳು ಇವೆ. ಪುರಾಣಗಳ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತಕಲಶ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದಬಾಷ್ಪಗಳು ಆ ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ ಇಲ್ಲವಾದ್ದರಿಂದ,ತುಳಸಿ ಎಂದು ಹೆಸರಿಟ್ಟು, ಲಕ್ಷ್ಮಿಯೊಂದಿಗೆ ತುಳಸಿಯನ್ನೂ ವಿಷ್ಣುವು ಮದುವೆಯಾದನು ಎಂದೂ ಸಹ ಹೇಳಲಾಗುತ್ತೆ.

ಇನ್ನೊಂದು ಪುರಾಣದ ಪ್ರಕಾರ ತುಳಸಿ, ಜಲಂಧರನ ಹೆಂಡತಿಯಾದ ವೃಂದ. ರಾಕ್ಷಸನಾದ ಜಲಂಧರನ ಕಿರುಕುಳ ತಾಳಲಾರದೇ ದೇವತೆಗಳು ವಿಷ್ಣುವಿನ ಸಹಾಯಕ್ಕೆ ಮೊರೆ ಹೋಗಿದ್ದ ಸಂದರ್ಭದಲ್ಲಿ  ಪತಿವ್ರತೆಯಾದ ವೃಂದಳ ತಪೋಶಕ್ತಿಯಿಂದ ಜಲಂಧರನು ಅತ್ಯಂತ ಶಕ್ತಿಶಾಲಿಯಾದನಂತೆ. ಆಗ ವಿಷ್ಣು ಜಲಂಧರನ ವೇಷ ಧರಿಸಿ ವೃಂದಳ ಪಾತಿವ್ರತ್ಯ ಶಕ್ತಿಯನ್ನು ಭಂಗ ಮಾಡಿದನಂತೆ. ಈ ಸಂದರ್ಭದಲ್ಲಿ ಜಲಂಧರನು ರಣಭೂಮಿಯಲ್ಲಿ ಮರಣಹೊಂದಿದ್ದನು. ಇದೇ ಕೋಪಕ್ಕೆ ವಿಷ್ಣುವಿಗೆ ವೃಂದ ಶಾಪ ನೀಡಿ , ತನ್ನ ಪತಿಯ ಶವದೊಂದಿಗೆ ಬೂದಿಯಾದಳಂತೆ. ಮುಂದೆ ಆ ವೃಂದಳೇ ತುಳಸಿಯಾಗಿ ಪಾರ್ವತಿ ತಯಾರಿಸಿದ ಬೃಂದಾವನದಲ್ಲಿ  ಜನ್ಮತಾಳಿ , ನಂತರ ಇವಳೇ ರುಕ್ಮಿಣಿಯಾಗಿ ಜನ್ಮ ಪಡೆದು ಕಾರ್ತಿಕ ಶುದ್ಧ ದ್ವಾದಶಿಯಂದು ಕೃಷ್ಣನನ್ನು ಮದುವೆಯಾದಳೆಂಬ ಪ್ರತೀತಿಯಿದೆ.

ವೈಶಿಷ್ಠ್ಯತೆ

ತುಳಸಿ ಪೂಜೆ ದಿವಸದಲ್ಲಿ ದೀಪೋತ್ಸವ ವಿಶೇಷ ಪುಣ್ಯಪ್ರದ. ಈ ದ್ವಾದಶಿಯಲ್ಲಿ ಧಾತ್ರೀ ತುಲಸೀ ಸಹಿತ ಲಕ್ಷ್ಮೀನಾರಾಯಣನನ್ನು ಪುಜಿಸುವುದರಿಂದ ಸರ್ವವಿಧವಾದ ಪಾತಕಗಳೂ ನಶಿಸುತ್ತವೆ ಎಂಬ ನಂಬಿಕೆಯಿದೆ. ತಾಯಿ ಲಕ್ಷ್ಮಿ  ಕೃಪೆಗೆ ಪಾತ್ರರಾಗಲು ಈ ಮಾಸದಲ್ಲಿ ದೀಪಾವಳಿ, ಗೋಪೂಜೆ, ತಾಯಿ ಲಕ್ಷ್ಮಿ ಪೂಜೆ ಮಾಡಲಾಗುತ್ತದೆ.

tulassi pooja

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #god vishnuHinduismtulasi pooja
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram