ವಿಷ್ಣುವರ್ಧನ್ ಬಗ್ಗೆ ಮಾತಾಡಿದ ವ್ಯಕ್ತಿ ಕ್ಷಮೆಗೆ ಅರ್ಹರಲ್ಲ : ಸುಮಲತಾ
ಚಂದನವನದ ಯಜಮಾನ ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಟ ವಿಜಯ್ ರಂಗರಾಜು ಕ್ಷಮೆಗೆ ಅರ್ಹರಲ್ಲ ಅಂತಾ ನಟಿ, ಸಂಸದೆ ಸುಮಲತಾ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ.ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನೆತೆ ಏನೆಂಬುವುದು ಚೆನ್ನಾಗಿಯೇ ಗೊತ್ತು.
ಇತ್ತೀಚಿನ ದಿನಗಳಲ್ಲಿ ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಲ್ಲ ಸಲ್ಲದ ವಿವಾದ್ಮಕ ಹೇಳಿಕೆ ನೀಡಿ ಬಿಟ್ಟಿ ಪ್ರಚಾರ ಪಡೆಯುವುದೇ ಕೆಲವರಿಗೆ ಹವ್ಯಾಸವಾಗಿ ಹೋಗಿದೆ. ಇಡೀ ದೇಶವೇ, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರ ರಸಿಕರಿಗೆ ನಮ್ಮ ಕರ್ನಾಟಕದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಘನೆತೆ ಏನೆಂಬುವುದು ಚೆನ್ನಾಗಿಯೇ ಗೊತ್ತು.
ಅದು ಕೇವಲ ಅಂತಹ ಬಾಯಿಬಡುಕ ವ್ಯಕ್ತಿಯ ಕೆಟ್ಟ ಗುಣ ಹಾಗು ನೀಚ ಬುದ್ದಿಯ ಅನಾವರಣವಲ್ಲದೆ ಬೇರೇನಲ್ಲ. ಅದರಲ್ಲೂ ನಮ್ಮನ್ನು ಅಗಲಿದ ವ್ಯಕ್ತಿಯ ಬಗ್ಗೆ ಈ ರೀತಿಯ ತುಚ್ಛವಾಗಿ ಮಾತನಾಡುವುದು ಕ್ಷಮಿಸಲಾಗದ ದೊಡ್ಡ ಅಪರಾಧ.
ಅದು ಕೇವಲ ಅಂತಹ ಬಾಯಿಬಡುಕ ವ್ಯಕ್ತಿಯ ಕೆಟ್ಟ ಗುಣ ಹಾಗು ನೀಚ ಬುದ್ದಿಯ ಅನಾವರಣವಲ್ಲದೆ ಬೇರೇನಲ್ಲ. ಅದರಲ್ಲೂ ನಮ್ಮನ್ನು ಅಗಲಿದ ವ್ಯಕ್ತಿಯ ಬಗ್ಗೆ ಈ ರೀತಿಯ ತುಚ್ಛವಾಗಿ ಮಾತನಾಡುವುದು ಕ್ಷಮಿಸಲಾಗದ ದೊಡ್ಡ ಅಪರಾಧ.
ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ವರ್ಚಸ್ಸು ಅವರನ್ನು ಪ್ರೀತಿಸುವ ಅಸಂಖ್ಯಾತ ಅಭಿಮಾನಿಗಳಿಗೆ ಗೊತ್ತು. ನಾಯಿ ಬೊಗಳಿದರೆ ದೇವಲೋಕ ಹಾಳಾಗದು ಎಂಬುದಕ್ಕೆ ಇದೊಂದು ಸರಿಯಾದ ಉದಾಹರಣೆ. ಇಂತಹ ‘ಚೀಪ್ ಪಬ್ಲಿಸಿಟಿ’ ಗಾಗಿ ಮನಬಂದಂತೆ ಬಾಯಿ ಹರಟುವ ವ್ಯಕ್ತಿಗಳು ಕ್ಷಮೆ ಕೇಳಲು ಅರ್ಹರಲ್ಲ. ಕ್ಷಮಿಸಲು ಆಗದು, ಕ್ಷಮಿಸಲು ಬಾರದು ಎಂದು ಆಕ್ರೋಶ ಹೊರಹಾಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








