ಚಾಮುಂಡೇಶ್ವರಿಯಲ್ಲಿ ಜನರ ಎದುರು ನೋವು ತೋಡಿಕೊಂಡ ಸಿದ್ದರಾಮಯ್ಯ
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎದುರು ನೋವು ತೋಡಿಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಇಷ್ಟೊಂದು ಕೆಟ್ಟದಾಗಿ ಸೋಲನುಭವಿಸುತ್ತೇನೆ ಎಂದುಕೊಂಡಿರಲಿಲ್ಲ.
ನಾನು ಪ್ರತೀ ಹಳ್ಳಿಗಳಿಗೆ ಹೋದಾಗ ಜನರೆಲ್ಲ ತುಂಬಾ ಪ್ರೀತಿ ತೋರಿಸಿದರು. ಆದರೆ ನನ್ನ ಸೋಲಿಗೆ ನಮ್ಮ ಪಕ್ಷದವರೂ ಕೂಡ ಕಾರಣರಾದರು. ಪಕ್ಷ ಅಂದರೆ ತಾಯಿ ಇದ್ದ ಹಾಗೆ. ಕ್ಷುಲ್ಲಕ ಕಾರಣಕ್ಕೆ ಪಕ್ಷ ದ್ರೋಹ ಮಾಡಬಾರದು.
ಅವರಿಗೆ ಇಷ್ಟ ಇಲ್ಲ ಅಂದರೆ ಪಕ್ಷ ಬಿಟ್ಟು ಹೋಗಬೇಕು. ಪಕ್ಷ ಮುಖ್ಯವೇ ಹೊರತು ವ್ಯಕ್ತಿಗಳಲ್ಲ. ಪಕ್ಷಕ್ಕೆ ಯಾವುದೇ ವ್ಯಕ್ತಿಗಳು ಅನಿವಾರ್ಯವಲ್ಲ ಎಂದು ಸೋಲಿನ ಬೇಸರ ತೋಡಿಕೊಂಡರು.
ನನಗೆ ಆರ್ ಎಸ್ ಎಸ್ ಅಲರ್ಜಿ : ಸಿಎಂ ಇಬ್ರಾಹಿಂ
ಇನ್ನು ಇದೇ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕುರಿತು ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯವಾಗಿ ಪುನರ್ಜನ್ಮ ಜನ್ಮ ಕೊಟ್ಟಂತಹ ಕ್ಷೇತ್ರ. ಅದೇ ರೀತಿ ರಾಜಕೀಯವಾಗಿ ಅತಿಯಾದ ವೇದನೆ ನೀಡಿದ ಕ್ಷೇತ್ರವೂ ಹೌದು.
ನನ್ನ ಸೋಲಿಗೆ ಇನ್ನೂ ಅನೇಕ ಕಾರಣಗಳಿವೆ, ಅದನ್ನು ಈಗ ಹೇಳುವುದಿಲ್ಲ. ನನ್ನನ್ನು ಸೋಲಿಸುವುದಕ್ಕೆಂದೇ ಜೆಡಿಎಸ್ ಮತ್ತು ಬಿಜೆಪಿಯವರು ಒಳ ಒಪ್ಪಂದ ಮಾಡಿಕೊಂಡರು.
ನನ್ನ ವಿರುದ್ದ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಯನ್ನು ಹಾಕಿದರು. ಅಷ್ಟೇ ಅಲ್ಲದೇ ನಮ್ಮವರಲ್ಲೇ ಕೆಲವರಿಗೆ ನಾನು ಮತ್ತೆ ಮುಖ್ಯಮಂತ್ರಿ ಆಗುವುದು ಬೇಕಿರಲಿಲ್ಲ. ಹೀಗಾಗಿ ನನ್ನನ್ನು ಸೋಲುವಂತೆ ಮಾಡಿದರು ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel