ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
December 23, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಡುವೆ, ಯುನೈಟೆಡ್ ಕಿಂಗ್ ಡಮ್ ನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯು.ಕೆ.ಯಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸುದೀರ್ಘ ಸಭೆ ನಡೆಸಿದರು. ನಂತರ ಸಚಿವರು ಗೃಹಕಚೇರಿ ಕೃಷ್ಣಾಗೆ ತೆರಳಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಭೆಯಲ್ಲಾದ ಚರ್ಚೆ ಕುರಿತು ಮಾಹಿತಿ ನೀಡಿದರು.

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

August 2, 2026

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ನೈಟ್ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಇಡೀ ರಾಜ್ಯದಲ್ಲಿ ಕರ್ಫ್ಯೂ ವಿಧಿಸಲಾಗುತ್ತದೆ. ಜನರು ರಾತ್ರಿ 10 ರೊಳಗೆ ತಮ್ಮ ಎಲ್ಲ ಚಟುವಟಿಕೆಗಳನ್ನು ಮುಗಿಸಿ ಮನೆಗೆ ಮರಳಬೇಕು. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತುರ್ತು ಸೇವೆಗಳು ಹೇಗಿರಬೇಕು, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗುತ್ತದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಯಿಂದ ನಿಗಾ

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ರಾಜ್ಯಕ್ಕೆ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಯು.ಕೆ.ಯಿಂದ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಬೇಕು. ಮೊದಲ 14 ದಿನಗಳ ಕಾಲ ಅವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸುತ್ತಾರೆ. ನಂತರದ 14 ದಿನ ಅವರೇ ಸ್ವತಃ ನಿಗಾ ಇರಿಸಿಕೊಳ್ಳಬೇಕು ಎಂದು ವಿವರಿಸಿದರು.

ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ಯು.ಕೆ.ಯಿಂದ ರಾಜ್ಯಕ್ಕೆ 2,500 ಜನರು ಬಂದಿದ್ದಾರೆ. ಪ್ರತಿ ದಿನ ಯು.ಕೆ.ಯಿಂದ ಎರಡೇ ವಿಮಾನ ಬಂದಿದೆ. ಯಾವ ವಿಮಾನದಲ್ಲಿ ಎಷ್ಟು ಜನ ಬಂದಿದ್ದಾರೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗುವುದು. ಇಷ್ಟೂ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುವುದು. ಯಾರಲ್ಲಾದರೂ ರೋಗ ಲಕ್ಷಣ ಕಂಡುಬಂದರೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಲಾಗುವುದು ಎಂದು ತಿಳಿಸಿದರು.

Dr K Sudhakar

ನಿಮ್ಹಾನ್ಸ್, ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ವೈರಸ್ ಬಗ್ಗೆ ಅಧ್ಯಯನ ಮಾಡುವ ನಾಲ್ಕು ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಪಾಸಿಟಿವ್ ಆದವರ ಮಾದರಿಯನ್ನು ಈ ಸಂಸ್ಥೆಗಳಿಗೆ ನೀಡಿ ಹೊಸ ಪ್ರಭೇದದ ವೈರಸ್ ಬಗ್ಗೆ ಅಧ್ಯಯನ ಮಾಡಲಾಗುವುದು. ಅಗತ್ಯವಿದ್ದರೆ ಜೀನ್ ಸೀಕ್ವೆನ್ಸ್ ಅಧ್ಯಯನ ಮಾಡಲಾಗುವುದು ಎಂದು ಹೇಳಿದರು.

ತಪ್ಪು ಮಾಹಿತಿ ನೀಡಬೇಡಿ

ರಾಜಕೀಯ ಮುಖಂಡರೊಬ್ಬರು ಯು.ಕೆ.ಯಿಂದ 14 ಸಾವಿರ ಜನರು ಬಂದಿದ್ದಾರೆ ಎಂದು ತಪ್ಪಾಗಿ ಹೇಳಿದ್ದಾರೆ. ನಮ್ಮ ಸರ್ಕಾರಕ್ಕೆ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ, ಪ್ರಯಾಣಿಕರ ಸಂಖ್ಯೆಯನ್ನು ಮರೆಮಾಚುವ ಅಗತ್ಯವಿಲ್ಲ. ಅಂಕಿ ಸಂಖ್ಯೆಯನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಇಲ್ಲ. ಯಾವುದೇ ರಾಜಕೀಯ ಮುಖಂಡರು ಸರಿಯಾದ ಮಾಹಿತಿ ಕಲೆಹಾಕಿ ಮಾತನಾಡಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಇದು ಅನಿವಾರ್ಯ

ಕರ್ಫ್ಯೂ ನಿರ್ಧಾರಕ್ಕೆ ಬಾರ್ ಮತ್ತು ಹೋಟೆಲ್ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, ರಾತ್ರಿ ಕರ್ಫ್ಯೂ ನಿರ್ಧಾರವನ್ನು ಸಂತೋಷದಿಂದೇನೂ ತೆಗೆದುಕೊಂಡಿಲ್ಲ. ಬಹಳ ಅನಿವಾರ್ಯ, ಅವಶ್ಯಕತೆ ಇರುವುದರಿಂದ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.

ನೈಟ್ ಕರ್ಫ್ಯೂ ಜಾರಿ ದಿನಾಂಕ, ಸಮಯ ಬದಲಾವಣೆ : ಡಿಸೆಂಬರ್ 24ರಿಂದ ಕರ್ಫ್ಯೂ

ರಾತ್ರಿ 10 ಗಂಟೆ ನಂತರ ಕರ್ಫ್ಯೂ ವಿಧಿಸಲಾಗಿದೆಯೇ ಹೊರತು ಅದಕ್ಕೂ ಮುಂಚೆ ಯಾವುದೇ ಚಟುವಟಿಕೆ ನಿಷೇಧ ಮಾಡಿಲ್ಲ. ಕೃಷಿ ಚಟುವಟಿಕೆಗಳಿಗೆ, ಸರಕು ಸಾಗಣಿಕೆಗೆ, ಮಾರಾಟಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದಲ್ಲಿ ಎಲ್ಲರಿಗೂ ಜವಾಬ್ದಾರಿ ಇದೆ. ಕೇವಲ ಹಣ ಸಂಪಾದನೆ ಹಾಗೂ ಆರ್ಥಿಕ ಚಟುವಟಿಕೆಯನ್ನು ಮಾತ್ರ ನೋಡದೆ, ಜನರ ಸುರಕ್ಷತೆ ಹಾಗೂ ಆರೋಗ್ಯವನ್ನು ಕೂಡ ನೋಡಬೇಕು. ಕೇವಲ ಒಂಬತ್ತು ದಿನಗಳು ಮಾತ್ರ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಹೊಸ ಪ್ರಭೇದದ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎಂದರು.

ಬೆಂಗಳೂರಿನ ಆರ್ಚ್ ಬಿಷಪ್ ನವರು ನನಗೆ ಮಾಹಿತಿ ಕಳುಹಿಸಿದ್ದಾರೆ. ಯಾವುದೇ ಸಮಾರಂಭ ಮಾಡುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದೇನೆ ಎಂದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CoronacurfewDr. K Sudhakar
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

by Shwetha
August 2, 2026
0

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ. ತಾನು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram