ಉತ್ತರಾಖಂಡ್ ಹಿಮ ದುರಂತ : 12 ಮಂದಿ ಬಲಿ, 170 ಮಂದಿ ನಾಪತ್ತೆ
ಡೆಹ್ರಾಡೂನ್ : ಉತ್ತರಾಖಂಡ್ ನ ಚಮೋಲಿಯಲ್ಲಿ ಭಾನುವಾರ ಸಂಭವಿಸಿ ದುರಂತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 170ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಸಾವು ನೋವುಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿಯಿಂದ ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದ್ದು, ಎನ್ ಡಿಆರ್ ಎಫ್ ಸಿಬ್ಬಂದಿ ಈವರೆಗೂ 16 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದ್ದು, ಎರಡನೇ ಸುರಂಗದಲ್ಲಿ 60 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರು ಕೂಡ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ಬಂದಿದೆ.
ಇನ್ನು ಹಿಮ ಕುಸಿತದಿಂದ ಶ್ರೀನಗರ, ಹರಿದ್ವಾರ, ಋಷಿಕೇಶದಲ್ಲಿ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಐದು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರವಾಹದಲ್ಲಿ ಐದು ಸೇತುವೆಗಳು ಕೊಚ್ಚಿಹೋಗಿದ್ದು, ಮನೆಗಳು ಮತ್ತು ಎನ್ ಟಿಪಿಸಿ ವಿದ್ಯುತ್ ಯೋಜನೆಯು ಕೊಚ್ಚಿ ಹೋಗಿದೆ. ಎನ್ ಟಿಪಿಸಿ ಸ್ಥಾವರದಲ್ಲಿ 148 ಮತ್ತು ಋಷಿಗಂಗಾದಲ್ಲಿ ಕೆಲಸ ಮಾಡುತ್ತಿದ್ದ 22 ಮಂದಿ ಂಉದ್ಯೀಗಿಗಳು ಸೇರಿ ಒಟ್ಟು 170 ಜನರು ನಾಪತ್ತೆಯಾಗಿದ್ದಾರೆ.
ಇನ್ನೊಂದೆಡೆ ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel