ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ : ರಾಜನಾಥ್ ಸಿಂಗ್ ಜತೆ ಅಶ್ವತ್ಥ ನಾರಾಯಣ ಚರ್ಚೆ

admin by admin
February 13, 2021
in Mumbai Karnataka, Newsbeat, ಮುಂಬೈ ಕರ್ನಾಟಕ
Ashwatha Narayan
Share on FacebookShare on TwitterShare on WhatsappShare on Telegram

ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ : ರಾಜನಾಥ್ ಸಿಂಗ್ ಜತೆ ಅಶ್ವತ್ಥ ನಾರಾಯಣ ಚರ್ಚೆ

ನವದೆಹಲಿ: ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಸುಮಾರು 750 ಎಕರೆ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡುವಂತೆ ರಾಜ್ಯದ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಕೋರಿದ್ದಾರೆ.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ರಾಜನಾಥ್ ಸಿಂಗ್ ಅವರನ್ನು ಶನಿವಾರ ನವದೆಹಲಿಯ ಅವರ ಮನೆಯಲ್ಲಿ ಭೇಟಿಯಾಗಿ ಈ ಬಗ್ಗೆ ಪ್ರಸ್ತಾಪಿಸಿದರು. ಈ ಜಾಗವನ್ನು ಕರ್ನಾಟಕ ಸರ್ಕಾರಕ್ಕೆ ಬಿಟ್ಟುಕೊಟ್ಟರೆ ಐಟಿ ಉದ್ಯಮದ ಜೊತೆಗೆ ಎಲೆಕ್ಟ್ರಾನಿಕ್ ಹಾರ್ಡ್ ವೇರ್, ವೈಮಾಂತರಿಕ್ಷ ಹಾಗೂ ಇತರ ತಯಾರಿಕಾ ಉದ್ಯಮಗಳ ಬೆಳವಣಿಗೆಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುವುದು ರಾಜನಾಥ್ ಅವರಿಗೆ ತಿಳಿಸಿದರು.

Ashwatha Narayan

ದಾಖಲೆಗಳ ಪ್ರಕಾರ ಬೆಳಗಾವಿ ಗ್ರಾಮದ ಆರ್.ಎಸ್. ನಂಬರ್ 1304ರಿಂದ 1397ರವರೆಗಿನ ಜಾಗಗಳಲ್ಲಿರುವ ಈ ಭೂಮಿಯು ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ ಇದೆ. ಹೀಗಾಗಿ ಉದ್ದೇಶಿತ ಐ.ಟಿ.ಪಾರ್ಕ್ ಸ್ಥಾಪನೆಗೆ ಅನುಕೂಲಕರವಾಗಿದೆ. ಈ ಭೂಮಿಯನ್ನು ರಾಜ್ಯ ಸರ್ಕಾರ ಪುನರ್ ಸ್ವಾಧೀನಕ್ಕೆ ತೆಗೆದುಕೊಳ್ಳಲು 2012ರ ನವೆಂಬರ್ ನಲ್ಲೇ ಆದೇಶ ಹೊರಡಿಸಿದೆ. ಆದರೆ ಇದು ರಕ್ಷಣಾ ಇಲಾಖೆ ಸ್ವಾಧೀನದಲ್ಲೇ ಮುಂದುವರಿದಿದೆ ಎಂಬ ಅಂಶವನ್ನು ಅಶ್ವತ್ಥ ನಾರಾಯಣ ಅವರು ಮನವರಿಕೆ ಮಾಡಿಕೊಟ್ಟರು.

ಕರ್ನಾಟಕ ರಾಜ್ಯವು ಐ.ಟಿ./ಐಟಿಇಎಸ್ ಉದ್ಯಮದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಈ ಅಗ್ರಶ್ರೇಯಾಂಕ ಕಾಯ್ದುಕೊಳ್ಳುವ ದಿಸೆಯಲ್ಲಿ ಇತ್ತೀಚೆಗೆ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಪ್ರಕಟಿಸಲಾಗಿದೆ. ಜೊತೆಗೆ, ಬೆಂಗಳೂರಿಗೆ ಹೊರತಾದ ಬೇರೆ ಪ್ರದೇಶಗಳಲ್ಲೂ ಐಟಿ/ಐಟಿಇಎಸ್ ಹಾಗೂ ಎಲೆಕ್ಟ್ರಾನಿಕ್ ಉದ್ಯಮಗಳನ್ನು ಬೆಳೆಸಿ, ರಾಜ್ಯದಲ್ಲಿ ಸಮತೋಲನದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಿದೆ. ಹೀಗಾಗಿ, ಈ ಜಾಗ ಬಿಟ್ಟುಕೊಟ್ಟರೆ ಉದ್ಯಮದ ಬೆಳವಣಿಗೆಗೆ ಅನುವು ಮಾಡಿಕೊಟ್ಟಂತೆ ಆಗುತ್ತದೆ ಎಂದರು.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಬೆಳಗಾವಿಯು ಉತ್ತಮ ಶೈಕ್ಷಣಿಕ ವಲಯವಾಗಿದೆ. ಪಕ್ಕದ ಧಾರವಾಡದಲ್ಲಿ ಐಐಟಿ-ಧಾರವಾಡ, ಐಐಐಟಿ-ಧಾರವಾಡ, ಕೆ.ಎಲ್.ಇ.ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಇರುವುದರಿಂದ ಪ್ರತಿವರ್ಷ ಪ್ರತಿಭಾವಂತ ಪದವೀಧರರು ಹೊರಬರುತ್ತಿದ್ದಾರೆ. ಜೊತೆಗೆ ಇಲ್ಲಿ ಐಟಿ/ಐಟಿಇಎಸ್ ಉದ್ಯಮಕ್ಕೆ ಸೂಕ್ತವಾದ ಪರ್ಯಾವರಣವಿದೆ. ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣದಿಂದ ಈ ಕ್ಷೇತ್ರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ. ಈ ಐಟಿ ಪಾರ್ಕ್ ನಿರ್ಮಾಣವು ಭಾರತದ ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದ ಶೇ 30ರಷ್ಟು ಕೊಡುಗೆಗೆ ಪೂರಕವಾಗಿರಲಿದೆ  ಎಂದು ಅಶ್ವತ್ಥ ನಾರಾಯಣ ಮನವರಿಕೆ ಮಾಡಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಅವರೂ ಡಿಸಿಎಂ ಜತೆ ಸಿಂಗ್ ಅವರನ್ನು ಭೇಟಿ ಮಾಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Ashwatha NarayanBelagamrajnath singh
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram