ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಂಚಮಸಾಲಿ ಸಮಾಜದ ಹಿತಾಸಕ್ತಿಗೆ ಮೊದಲ ಆದ್ಯತೆ  : ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

admin by admin
February 22, 2021
in Newsbeat, State, ರಾಜ್ಯ
Jagadguru Shri Vachananda Swamiji
Share on FacebookShare on TwitterShare on WhatsappShare on Telegram

ಪಂಚಮಸಾಲಿ ಸಮಾಜದ ಹಿತಾಸಕ್ತಿಗೆ ಮೊದಲ ಆದ್ಯತೆ  : ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

ಬೆಂಗಳೂರು : ಮೊದಲಿನಿಂದಲೂ ರಾಜ್ಯದ ಎಂಬತ್ನಾಲ್ಕು ಲಕ್ಷ ಕ್ಕಿಂತ ಅಧಿಕವಿರುವ ಪಂಚಮಸಾಲಿ ಅಮೃತಬಂಧುಗಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವುದು ನಮ್ಮ ನಿಲುವಾಗಿದೆ. ಒಬ್ಬ ವ್ಯಕ್ತಿ ಅಥವಾ ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವ ಅವಶ್ಯಕತೆ ಇಲ್ಲ. ಯಾರದೋ ತೇಜೋವಧೆಯಿಂದ ಯಾರು ಏನು ಸಾಧಿಸಲು ಸಾಧ್ಯವಿಲ್ಲ.ತೇಜಸ್ಸು ಮತ್ತು ವರ್ಚಸ್ಸುಗಳಿಂದ ಮಾತ್ರ ಸಾಧನೆ ಸಾಧ್ಯವಿದೆ. ಹೋರಾಟದಲ್ಲಿ ರಾಜಕಾರಣ ಬಂದಾಗ ನಾವು ಹಿಂದೆ ಸರಿಯುತ್ತೇವೆ, ಸಮುದಾಯದ ವಿಷಯ ಬಂದಾಗ ನಾವು ಮುಂಚೂಣಿಯಲ್ಲಿರುತ್ತೇವೆ ಎಂದು ಹರಿಹರ ಪಂಚಮಸಾಲಿ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಹೇಳಿದ್ದಾರೆ.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ನಿನ್ನೆಯ ಘಟನಾವಳಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಾವು ಯಾರೋ ಒಬ್ಬರು ಹೇಳಿದ ಹಾಗೆ ಕೇಳುವುದಿಲ್ಲ. ಅಖಂಡ ಪಂಚಮಸಾಲಿ ಸಮುದಾಯ ಹೇಳಿದ ಹಾಗೆ ಕೇಳುತ್ತೇವೆ.

ನಮ್ಮ ಎಲ್ಲ ನಿರ್ಧಾರಗಳು ನಮ್ಮ ಸಮುದಾಯದ ಅಮೃತಬಂಧುಗಳಾದ ಅಖಂಡ ಪಂಚಮಸಾಲಿಗಳ ಒಕ್ಕೊರಲಿನ ನಿರ್ಧಾರವಾಗಿರಬೇಕು. ಯಾವುದೋ ಹಿತಾಸಕ್ತಿಯನ್ನು ಪೂರೈಸಿಕೊಳ್ಳುವುದಕ್ಕಾಗಿ ಸಮುದಾಯವನ್ನು ಬಲಿಕೊಡುವಂತಹದ್ದಾಗಿರಬಾರದು. 1994 ರಿಂದ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಪ್ರಥಮ ರಾಜ್ಯಾಧ್ಯಕ್ಷರಾದ ಡಾ.ಶ್ರೀ ಬಿ.ಎಂ.ಹನುಮನಾಳ ಗುರುಗಳವರು ಆರಂಭದಿಂದಲೂ ಇಂದಿನವರೆಗೂ ಸಂಘದ ಹಿರಿಯರು ಮತ್ತು ನಾವು ಸಮುದಾಯಕ್ಕೆ 2ಎ ಸ್ಥಾನಮಾನ ನೀಡಬೇಕು ಎನ್ನುವ ಒತ್ತಾಯ ಮಾಡುತ್ತಾ ಬಂದ್ದಿದ್ದೇವೆ. ಈ ನಿರ್ಧಾರದ ಹಿಂದೆ ಅಖಂಡ ಪಂಚಮಸಾಲಿ ಸಮುದಾಯದ ಮುಖಂಡರು, ಭಕ್ತರು ಹಾಗೂ ಸಮಾನಮನಸ್ಕರ ಸಲಹೆಗಳನ್ನು ತಗೆದುಕೊಂಡಿದ್ದೇವೆ.

ಪಾದಯಾತ್ರೆಯ ನಂತರ ಧರಣಿ ಅಥವಾ ಸತ್ಯಾಗ್ರಹದಂತಹ ಹೋರಾಟಕ್ಕೆ ಮುಂದಾಗುವುದು ಸರಿಯಲ್ಲ. ಅದರಲ್ಲೂ ಸಾರ್ವಜನಿಕರ ಹಿತಾಸಕ್ತಿಗೆ, ಆಸ್ತಿಗೆ ಹಾನಿ ತರುವಂತಹ ಘಟನೆಗಳಿಗೆ ಅವಕಾಶ ಮಾಡಿಕೊಡುವ ವಿಷಯಗಳಿಗೆ ಆಸ್ಪದ ನೀಡಬಾರದ ಎನ್ನುವ ನಿಲುವು ನಮ್ಮದಾಗಿತ್ತು. ಲಕ್ಷಾಂತರ ಜನರು ಒಗ್ಗೂಡಿದ್ದಾಗ ಜನರ ಭಾವನೆಗಳನ್ನು ಕೆರಳಿಸದೆ ಸಮಾಧಾನವಾಗಿ ಸರಕಾರದ ಮೂಗನ್ನು ಹಿಡಿದು ಕೆಲಸ ಮಾಡಿಸುವ ನಿಟ್ಟಿನಲ್ಲಿ ಸಲಹೆಯನ್ನು ನೀಡಿದ್ದೇವೆ.

ಆದರೆ,ನಿನ್ನೆ ಸಮಾವೇಶ ನಡೆದ ನಂತರ ನಡೆದ ಘಟನೆಗಳು ಹೇಳಿಕೆಗಳು ಜನನಾಯಕರ ಹಿತಾಸಕ್ತಿಗೆ ಇಂಬು ನೀಡುವಂತಹದ್ದಾಗಿದ್ದವು. ಆದ್ದರಿಂದ ಆ ನಿರ್ಧಾರಗಳಿಗೆ ನಾವು ಬೆಂಬಲ ನೀಡಲಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಬೆಳಗಿನ ಪಾದಯಾತ್ರೆಯನ್ನು ರದ್ದುಗೊಳಿಸಿದ್ದೆವು. ನಗರದ ಒಳಗೆ ಪಾದಯಾತ್ರೆ ಮಾಡುವ ಸಂಧರ್ಭದಲ್ಲಿ ಯಾರೋ ಕಿಡಿಗೇಡಿಗಳು ನಮ್ಮ ಹೋರಾಟವನ್ನು ಹಾಳು ಮಾಡುವ ಉದ್ದೇಶದಿಂದ ಗಲಾಟೆ ಪ್ರಾರಂಭಿಸಿದ್ದರೆ, ನಮ್ಮ ಸಮುದಾಯದ ಮೇಲೆ ಕಪ್ಪು ಚುಕ್ಕೆ ಬೀಳುವ ಅವಕಾಶ ಇರುತ್ತಿತ್ತು. ಆ ಹಿನ್ನಲೆಯಲ್ಲಿ ವಿಧಾನಸೌದದ ಕಡೆಗೆ ಪಾದಯಾತ್ರೆಯಂತಹ ನಿರ್ಧಾರಗಳಿಗೆ ಬೆಂಬಲ ನೀಡಲಿಲ್ಲ.

Jagadguru Shri Vachananda Swamiji

ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇದೆ. ಹಿಂದಿನ ರಾತ್ರಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ನಾಗನಗೌಡರು ಹಾಗೂ ಹಿರಿಯರೊಂದಿಗೆ ಸಭೆಯನ್ನು ಮಾಡಿದ್ದೇವು. ಆ ಸಭೆಯಲ್ಲಿ ಧರಣಿ ಅಥವಾ ಸತ್ಯಾಗ್ರಹದಂತಹ ನಿರ್ಧಾರಗಳಿಗೆ ಹೋಗಬಾರದು, ಒಂದು ತಾರ್ಕಿಕ ಅಂತ್ಯಕ್ಕೆ ಬರಬೇಕು ಎನ್ನುವ ನಿರ್ಧಾರ ತಗೆದುಕೊಳ್ಳಲಾಗಿತ್ತು. ಅವರ ಸಲಹೆಯನ್ನು ನಾವು ಪಾಲಿಸಿದ್ದು, ಸಮುದಾಯದ ಭಾವನೆಗಳಿಗೆ ಒತ್ತಾಸೆಯಾಗಿದ್ದೇವೆ.

ಸಮುದಾಯಕ್ಕೆ ಹಾಗೂ ಸಮುದಾಯದ ನಿರ್ಧಾರಗಳಿಗೆ ನಾನು ಪ್ರಾಣ ನೀಡಲು ಸಿದ್ದನಾಗಿದ್ದೇನೆ. ಸಮುದಾಯಕ್ಕೆ ಏನು ಬೇಕು ಅದನ್ನು ಮಾಡುತ್ತೇನೆ. ಸಮುದಾಯದ ಜನರು ಸೇರಿಕೊಂಡು ಮುಂದಿನ ಹೋರಾಟಕ್ಕೆ ಅಣಿಯಾಗೋಣ. ಸರಕಾರ ನಮಗೆ ಭರವಸೆ ನೀಡಿದೆ, ಸರಕಾರ ಕಾರ್ಯನಿರ್ವಹಣೆಗೆ ಅದರದ್ದೇ ಆದಂತಹ ಸಮಯ ಬೇಕು. ಸರಕಾರಕ್ಕೇ ನೇರವಾಗಿ ಕಿವಿ ಹಿಂಡಿ, ಮೂಗು ಹಿಡಿದು ಕೆಲಸ ಮಾಡಿಸಬೇಕು. ಯಾರದ್ದೋ ಕಾಲು ಹಿಡಿಯುವುದು ಬೇಕಾಗಿಲ್ಲ. ಸಮುದಾಯದ ಹೋರಾಟದಲ್ಲಿ ನಾವು ಪ್ರಾಣವಾಯು ನೀಡುವ ಕೆಲಸ ಮಾಡಿದ್ದೇವೆ.

ಆದರೆ, ಮೂಗು ಹಿಡಿಯುವ ಭರಾಟೆಯಲ್ಲಿ ಯಾರದ್ದೋ ಪ್ರಾಣ ತಗೆಯುವುದಿಲ್ಲ.ಸರಕಾರವನ್ನು ನಿತ್ರಾಣಗೊಳಿಸುವುದಿಲ್ಲ. ನಾವು ಸಮುದಾಯಕ್ಕೆ ಪ್ರಾಣ ಕೂಡಾ ನೀಡಲು ಸಿದ್ದರಾಗಿದ್ದೇವೆ.

ಸಮುದಾಯದ ಹಿತಾಸಕ್ತಿ ನನ್ನ ಮೊದಲ ಆಯ್ಕೆ. ಜನನಾಯಕರ ಹಿತಾಸಕ್ತಿಗೆ ನಾವು ಸೊಪ್ಪು ಹಾಕುವ ಅವಶ್ಯಕತೆ ಇಲ್ಲ. ಸಮಾಜದ ವಿಷಯ ಬಂದಾಗ ಜನನಾಯಕ ಜನರ ಒಂದು ಭಾಗ ಮಾತ್ರ. ಹೋರಾಟಕ್ಕೆ ಕೈಜೋಡಿಸಿದಾಗ ನನ್ನ ನಿಲುವು ಸ್ಪಷ್ಟವಾಗಿದ್ದು, ಸಮಾಜದ ನಿರ್ಧಾರಕ್ಕೆ ಬಂದಾಗ ಬೇರೆ ಯಾರ ಮಾತು ಕೇಳಿಲ್ಲ.

ಬೆಣ್ಣೆ ಸರಕಾರದ ಕೈಯಲ್ಲಿ ಇದೆ. ಅದು ನಮ್ಮ ಕೈಯಲ್ಲಿ ಬಂದು ನಮ್ಮ ಆಹಾರ ಆಗಬೇಕು. ಅದನ್ನು ಹಾಳು ಮಾಡುವುದು ಸರಿಯಲ್ಲ. ನಮ್ಮ ಸಮುದಾಯದ ಯುವಕರಿಗೆ ಮೀಸಲಾತಿಯ ಮೂಲಕ ಶೈಕ್ಷಣಿಕ ಹಾಗೂ ಉದ್ಯೋಗ ಅವಕಾಶ ಒದಗಿಸುವುದು ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಬಸವಣ್ಣನವರ ವಚನ ಬಹಳ ಅರ್ಥಗರ್ಭಿತವಾಗಿದೆ

ಭೇರುಂಡನ ಪಕ್ಷಿಗೆ ದೇಹ ಒಂದೆ,
ತಲೆಯೆರಡರ ನಡುವೆ ಕನ್ನಡವ ಕಟ್ಟಿ
ಒಂದು ತಲೆಯಲ್ಲಿ ಹಾಲನೆರೆದು
ಒಂದು ತಲೆಯಲ್ಲಿ ವಿಷವನೆರೆದಡೆ
ದೇಹವೊಂದೇ, ವಿಷ ಬಿಡುವುದೇ ಅಯ್ಯಾ
ಲಿಂಗದಲ್ಲಿ ಪೂಜೆಯ ಮಾಡಿ ಜಂಗಮದಲ್ಲಿ ನಿಂದೆಯ ಮಾಡಿದಡೆ
ನಾನು ಬೆಂದೆ ಕಾಣಾ, ಕೂಡಲಸಂಗಮದೇವಾ.

Tags: bangaloreJagadguru Shri Vachananda Swamijipanchamasali
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram