ಗಂಗಾವತಿ : ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮಿ ವೆಂಕಟೇಶ್ವರ ಕಾಲೋನಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭಾಗಿಯಾಗಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಸವರಾಜ ವಿಜಯಪುರ, ಮತ್ತು ಸುರೇಶ್ ಸಿಂಧನೂರು, ಬಸವರಾಜ ತೋಟದ ಮಸ್ಕಿ ಎಂದು ಗುರುತಿಸಲಾಗಿದೆ.
ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ಕಾಲೋನಿಯ ಸಿದ್ದಲಿಂಗಯ್ಯ ಸಿದ್ದಪ್ಪ ಎನ್ನುವವರ ಮನೆಯನ್ನು ಬಸವರಾಜ ವಿಜಯಪುರ ಎಂಬ ವ್ಯಕ್ತಿ ಕಳೆದ ಫೆಬ್ರವರಿ 20 ರಂದು ಮನೆ ಬಾಡಿಗೆಗೆ ತಗೆದುಕೊಂಡು ವೈಶ್ಯವಾಟಿಕೆ ದಂಧೆ ನಡೆಸುತ್ತಿದ್ದಾನೆ ಎಂದು ಪೊಲೀಸರಿಗೆ ದೂರು ಬಂದಿದೆ.
ಬಳಿಕ ಖಚಿತ ಮಾಹಿತಿ ಮೇರೆಗೆ ಡಿಯೈಎಸ್ ಪಿ ರುದ್ರೇಶ ಉಜ್ಜನಿಕೊಪ್ಪ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಸವರಾಜ ವಿಜಯಪುರ ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದು, ಈತ ಮಹಾರಾಷ್ಟ್ರ, ಪುಣೆ ಹಾಗೂ ವಿಜಯಪುರದ ಕಡೆಯಿಂದ ಮಹಿಳೆಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಸದ್ಯ ಬಂಧಿತರದಲ್ಲಿ ಮಹಾರಾಷ್ಟ್ರ ಮೂಲದ ಮತ್ತು ವಿಜಯಪುರ ಜಿಲ್ಲೆಯ ಸಂತ್ರಸ್ತೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...
ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...