ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಶುಭಕೋರಿದ ರಾಜಕೀಯ ಗಣ್ಯರು..!

Namratha Rao by Namratha Rao
March 11, 2021
in Newsbeat, Politics, ರಾಜಕೀಯ
Saakshatv astrology mahashivaratri vrutha
Share on FacebookShare on TwitterShare on WhatsappShare on Telegram

ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಶುಭಕೋರಿದ ರಾಜಕೀಯ ಗಣ್ಯರು..!

ಇಂದು ರಾಜ್ಯ ಹಾಗೂ ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಯಿಂದ ಮಹಾಶಿವರಾತ್ರಿ ಹಬ್ಬವನ್ನ ಆಚರಣೆ ಮಾಡಲಾಗ್ತಿದೆ. ಶಿವನ ದೇವಾಲಯಗಳು ಭಕ್ತರಿಂದ ತುಂಬಿಹೋಗಿದೆ. ಇನ್ನೂ ರಾಜ್ಯ ಗಣ್ಯರು ಹಾಗೂ ರಾಜಕೀಯ ಮುಖಂಡರು ನಾಡಿನ  ಸಮಸ್ತ ಜನರಿಗೆ ಶಿವರಾತ್ರಿಯ ಶುಭಾಷಯಗಳನ್ನ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.

Related posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026

ಸಿಎಂ ಬಿಎಸ್ ಯಡಿಯೂರಪ್ಪ  

‘ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ’ ಎಂದು ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.b. s yadiyurappa saaksha tv.com

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

‘ವಿಶ್ವದ ಸಕಲವೂ ಆಗಿರುವ ಶಿವನ ಆರಾಧನೆಯ ದಿನವಾದ ಈ ದಿನ ಎಲ್ಲರಿಗೂ ಶುಭಾಶಯ ಕೋರುತ್ತೇನೆ. ವಿಶ್ವದ ಹಿತಕ್ಕಾಗಿ ನಂಜನ್ನೇ ಉಂಡ ನಂಜುಂಡನ ಆಶಿರ್ವಾದ ಎಲ್ಲರಿಗೂ ಸಿಗಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ’ ಎಂದಿದ್ದಾರೆ.kumaraswami saaksha tv.com

ಮಾಜಿ ಸಿಎಂ ಸಿದ್ದರಾಮಯ್ಯ

‘ಮಂಗಳಕರವಾದ ಮಹಾ ಶಿವರಾತ್ರಿಯು ಜನರ ಸಂಕಷ್ಟಗಳನ್ನು ಕಳೆದು ಕಲ್ಯಾಣವನ್ನುಂಟು ಮಾಡಲಿ. ಕಲ್ಯಾಣವೆಂಬುದು ಬಸವನಿಳೆಯ ಬೆಳೆಯಾಗಲಿ. ನಾಡ ಬಾಂಧವರಿಗೆ ಮಹಾ ಶಿವರಾತ್ರಿಯ ಶುಭಹಾರೈಕೆಗಳು’ ಎಂದಿದ್ದಾರೆ.

siddaramaih saaksha tv.com

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

‘ಶಿವ ಸರಳತೆ, ಪ್ರಾಮಾಣಿಕತೆ, ನಿಷ್ಕಲ್ಮಶ ಮನಸ್ಸಿನ ಪ್ರತೀಕವಾಗಿದ್ದು, ಎಲ್ಲಾ ಆಡಂಬರಗಳಿಂದ ಮುಕ್ತವಾಗಿರುವ ಅಮೋಘ ಶಕ್ತಿ ಸ್ವರೂಪಿಯಾಗಿದ್ದು, ಈ ಮಹಾ ಶಿವರಾತ್ರಿಯಂದು ಎಲ್ಲರಿಗೂ ಶಿವನ ಆಶೀರ್ವಾದ ದೊರಕಲಿ. ಸರ್ವರಿಗೂ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

hd devegowda saaksha tv.com

ಮಾಜಿ ಸಚಿವ ರಾಮಲಿಂಗಾರೆಡ್ಡಿ

‘ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು. ಮೃತ್ಯುಂಜಯ ಎಂದೇ ಕರೆಸಿಕೊಳ್ಳುವ ಶಿವ ಜಗತ್ತಿನ ಪ್ರತಿ ಜೀವಿಯ ಬದುಕಿಗೆ ಅಂತ್ಯ ನೀಡುವವನು. ಭಾರತೀಯ ಪುರಾಣಗಳು ಶಿವನನ್ನು ಅರ್ಧನಾರೀಶ್ವರನಾಗಿ ಕಂಡು ಸ್ತ್ರೀ ಶಕ್ತಿಯ ಮಹತ್ವ ಸಾರುತ್ತದೆ.  ಈ ಮಹಾಶಿವರಾತ್ರಿ ನಾಡಿನ ಜನರ ಬಾಳಲ್ಲಿ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಸಂಸದೆ ಸುಮಲತಾ

‘ಶಿವ ಶಿವ ಎಂದರೆ ಭಯವಿಲ್ಲ, ಶಿವನಾಮಕೆ ಸಾಟಿ ಬೇರಿಲ್ಲ… ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರಿಗೂ ಆ ಭಗವಂತ ಸನ್ಮಂಗಳವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ .

ಸಂಸದ ಬಿವೈ ರಾಘವೇಂದ್ರ

ಓಂಕಾರಂ ಬಿಂದುಸಂಯುಕ್ತಂ ನಿತ್ಯಂ ಧ್ಯಾಯಂತಿ ಯೋಗಿನಃ|| ||ಕಾಮದಂ ಮೋಕ್ಷದಂ ಚೈವ ಓಂಕಾರಾಯ ನಮೋ ನಮಃ||. ಶಿವನನ್ನು ಭಕ್ತಿಯಿಂದ ಸಂಭ್ರಮದಿಂದ ಆರಾಧಿಸೋಣ , ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಗಳು ಎಂದು ಶುಭಕೋರಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್

‘ಓಂ ನಮೋ ಭಗವತೇ ರುದ್ರಾಯ! ನಾಡಿನ ಸಮಸ್ತ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು’ ಎಂದು ಶುಭಕೋರಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

‘ಸರ್ವರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು’ ಎಂದಿದ್ದಾರೆ.

ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್

ಅಧಿಕಾರ ಉಂಡು ಬೆನ್ನಿಗೆ ಚೂರಿ ಹಾಕುವುದು ಹೊಸದೇನಲ್ಲ : ಹೆಚ್ ಡಿ ಕೆ

ದೇವೇಗೌಡರು ನಂಬಿದವರೇ ಅವರ ಬೆನ್ನಿಗೆ ಚಾಕು ಹಾಕಿದ್ದಾರೆ : ಕುಮಾರಸ್ವಾಮಿ..!

ಕುಕ್ಕೆ ಸುಬ್ರಮಣ್ಯದಲ್ಲಿ ಹಿಂದಿನ ಸಂಪ್ರದಾಯದಂತೆ ಮಹಾಶಿವರಾತ್ರಿ ಆಚರಣೆ : ಹೈಕೋರ್ಟ್‌..!

 

 

Tags: BJPBSYCongressHDKJDSshivarathrisiddaramaih
ShareTweetSendShare
Join us on:

Related Posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram