ಹೊಸಕೋಟೆ | ಅಂಬೇಡ್ಕರ್ ಭವನ ಜಾಗಕ್ಕಾಗಿ ಮಾರಾಮಾರಿ
ಹೊಸಕೋಟೆ : ಅಂಬೇಡ್ಕರ್ ಭವನ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹೊಸಕೋಟೆ ತಾಲೂಕಿನ ದೊಡ್ಡದೇನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಸರ್ವೇ ನಂಬರ್ 47 ಸರ್ಕಾರಿ ಖರಾಬು ಭೂಮಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒಂದು ಗುಂಪು ಮನವಿ ಮಾಡಿತ್ತು.
ಅದರಂತೆ ಸರ್ವೇ ನಂಬರ್ 47ರಲ್ಲಿ 4 ಎಕರೆ 37 ಗುಂಟೆ ಜಮೀನಿನಲ್ಲಿ 10 ಗುಂಟೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಸರ್ಕಾರಿ ಭೂಮಿ ಅಳತೆ ಮಾಡಿಸಲಾಗುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಮತ್ತೊಂದು ಗುಂಪು ಕ್ಯಾತೆ ತೆಗೆದು ಜಗಳಕ್ಕಿಳಿದಿದೆ.
ಈ ವೇಳೆ ಮಾತಿಗೆ ಮಾತು ಬೆಳೆದು ರಾಡ್ ಮತ್ತು ದೊಣ್ಣೆಗಳಿಂದ ಎರಡೂ ತಂಡದವರು ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವೀಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇತ್ತ ಹಲ್ಲೆಗೊಳಗಾದ ಗುಂಪಿನಿಂದ ಮತ್ತೊಂದು ಗುಂಪಿನವರ ಮೇಲೆ ದೂರು ದಾಖಲು ಮಾಡಿದ್ದಾರೆ. ಸದ್ಯ ಹಲ್ಲೆಗೊಳಗಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










