ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಬೇಕೆಂದು ಗುಂಪುಗಾರಿಕೆ ಮಾಡಲ್ಲ : ಸೋಮಶೇಖರ್ ರೆಡ್ಡಿ
ಬಳ್ಳಾರಿ : ಬಿ.ಶ್ರೀರಾಮುಲು ಅವರನ್ನ ಉಪಮುಖ್ಯಮಂತ್ರಿ ಮಾಡಿ ಎಂದು ಕೇಳಿ ಕೊಳ್ಳುತ್ತೇವೆಯೇ ಹೊರತು ಆ ವಿಚಾರವಾಗಿ ಗುಂಪುಗಾರಿಕೆ ಮಾಡೋಲ್ಲ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.
ಬಳ್ಳಾರಿ ನಗರದ ಸರ್ಕಾರಿ ಅತಿಥಿ ಗೃಹದ ಹಿಂಭಾಗದಲ್ಲಿರುವ ಸರ್ಕಾರಿ ನೌಕರರ ವಸತಿ ಗೃಹಗಳ ನಿರ್ಮಾಣ ಕಾರ್ಯಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಸುದ್ದಿಗರರೊಂದಿಗೆ ಮಾತನಾಡುತ್ತಾ ರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಗುಂಪುಗಾರಿಕೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್, ನಾವಂತೂ ಗುಂಪುಗಾರಿಕೆ ನಡೆಸಿಲ್ಲ.
ಅಧಿಕಾರ ದುರುಪಯೋಗ ವಿಷಯದಲ್ಲಿ ಕಾಂಗ್ರೆಸ್ ನಂಬರ್ ಒನ್ : ಸಿ.ಟಿ.ರವಿ
ಆದರೆ, ಎಸ್ ಟಿ ಸಮುದಾಯದ ಪ್ರಬಲ ನಾಯಕರಾದ ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಬೇಕೆಂಬ ವಿಚಾರವನ್ನ ಪ್ರಸ್ತಾಪಿಸಲು ನಿರ್ಧರಿಸಿದ್ದೇವೆ ಹೊರತು, ಗುಂಪುಗಾರಿಕೆ ಮಾತ್ರ ನಡೆಸಿಲ್ಲ. ಅದು ನಮ್ಮ ಸಂಸ್ಕøತಿಯಲ್ಲ ಎಂದರು.
ಇದೇ ವೇಳೆ ಸಚಿವ ಸ್ಥಾನದ ಬಗ್ಗೆ ಮಾತನಾಡಿದ ಅವರು, ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆ ಭಗವಂತನ ಕೃಪೆ ಮತ್ತು ಆರ್ಶೀವಾದ ಇದ್ದರೆ ನನಗೆ ಸಚಿವ ಸ್ಥಾನ ಸಿಗುತ್ತೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel