ಬೆಂಗಳೂರು: ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಹಾಗೂ ಸಹೋದರ ಸಂಸದ ಡಿ.ಕೆ ಸುರೇಶ್ ಮನೆಗಳ ಮೇಲೆ ನಡೆದ ಸಿಬಿಐ ದಾಳಿಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಡೆಸಿರುವ ಸಿಬಿಐ ದಾಳಿ, ರಾಜಕೀಯ ದುಷ್ಟತನದ ಪರಮಾವಧಿಯಾಗಿದೆ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲು ಆಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
ಜನರ ಗಮನವನ್ನು ಬೇರೆಡೆ ಸೆಳೆಯುವ ರಾಜಕೀಯ ಪ್ರೇರಿತ ದಾಳಿಯನ್ನು ಸಿಬಿಐ ಮೂಲಕ ಬಿಜೆಪಿ ಮಾಡುತ್ತಿದೆ. ಡಿಕೆಶಿ ಸಹೋದರರ ಮನೆಗಳ ಮೇಲೆ ನಡೆದಿರುವ ಸಿಬಿಐ ದಾಳಿ ಉಪಚುನಾವಣೆಗೆ ಕಾಂಗ್ರೆಸ್ ಮಾಡಿರುವ ಸಿದ್ಧತೆಗಳ ದಿಕ್ಕು ತಪ್ಪಿಸಲು ನಡೆದಿರುವ ಪ್ರಯತ್ನವಾಗಿದೆ. ಹೀಗಾಗಿ ಸಿಬಿಐ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.