ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಿಸಿಬಿ ಮತ್ತೆ ನೋಟಿಸ್ ನೀಡಿದೆ.
ಆದ್ರೆ ಸಂಪತ್ ರಾಜ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಅವರು ವಿಚಾರಣೆಗೆ ಹಾಜರಾಗುವುದು ಅನುಮನವಾಗಿದೆ.
ಸಿಸಿಬಿ ಪೊಲೀಸರು ನಿನ್ನೆ ನೋಟಿಸ್ ನೀಡಲು ಸಂಪತ್ ರಾಜ್ ಅವರ ಮನೆ ಬಳಿ ಹೋಗಿದ್ದರು.
ಈ ವೇಳೆ ಅವರು ಮನೇಲಿ ಇಲ್ಲದ ಕಾರಣ ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸಿಕೊಡಲಾಗಿದೆ.
ಆದ್ರೆ ಈವರೆಗೂ ಸಂಪತ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.
ಸಿಸಿಬಿ ಪೊಲೀಸರು ನಾಳೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಸದ್ಯ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಸಂಪತ್ ರಾಜ್ ಸೋಂಕಿನಿಂದ ಗುಣಮುಖರಾದ ಬಳಿಕ ವಿಚಾರಣೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗಲಭೆ ಪ್ರಕರಣದಲ್ಲಿ ಕಳೆದ ಆಗಸ್ಟ್ 18ರಂದು ಸಂಪತ್ ರಾಜ್ ಹಾಗೂ ಫ್ರೇಜರ್ ಟೌನ್ ವಾರ್ಡ್ ಕಾರ್ಪೋರೇಟರ್ ಜಾಕೀರ್ ಹುಸೇನ್?ಗೆ ಸಿಸಿಬಿ ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದ್ದರು.