ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?

Mahesh M Dhandu by Mahesh M Dhandu
October 30, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಇಲ್ಲವೇ ಇಲ್ಲ ( Darshan Campaign)

ಬೆಂಗಳೂರು : ಆರ್ ಆರ್ ನಗರ ಮಿನಿ ಕುರುಕ್ಷೇತ್ರದಲ್ಲಿ ಸುಯೋಧನನ ಮಾಸ್ ಎಂಟ್ರಿ ಆಗಿದೆ. ಯಶವಂತಪುರದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತಬೇಟೆ ಶುರು ಮಾಡಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಇವರಿಗೆ ಕಂದಾಯ ಸಚಿವ ಆರ್.ಅಶೋಕ್, ಬಿಜೆಪಿ ಅಭ್ಯರ್ಥಿ ಮುನಿರತ್ನ ಸೇರಿದಂತೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.

ದರ್ಶನ್ ಪ್ರಚಾರಕ್ಕಾಗಿಯೇ ಬಿಜೆಪಿ ವಿಶೇಷ ವಾಹನವನ್ನು ಸಿದ್ಧ ಮಾಡಿತ್ತು. ಈ ವಾಹನ ಹೇರಿ ಸಾರಥಿ ಮುನಿರತ್ನ ಪರ ಪ್ರಚಾರ ಮಾಡುತ್ತಿದ್ದಾರೆ.

ಸದ್ಯ ಯಶವಂತಪುರ ದಚ್ಚುಮಯವಾಗಿದ್ದು, ದಾಸನ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.Darshan Campaign

ದರ್ಶನ್ ರೋಡ್ ಶೋ ಆರಂಭಿಸುತ್ತಿದ್ದಂತೆ ಅಲ್ಲಿದ್ದ ಕೇಸರಿ ಪಡೆ ಕಾರ್ಯಕರ್ತರು ಜೋರಾಗಿ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಇತ್ತ ದಚ್ಚು ಅಭಿಮಾನಿಗಳು ಕೂಡ ನೆಚ್ಚಿನ ನಟನ ಪರ ಘೋಷಣೆಗಳನ್ನು ಕೂಗಿದರು.

ಮಾಸ್ಕ್ ತೆಗೆದ ದಾಸ

ಹೌದು..! ವಿಶೇಷ ವಾಹನ ಹೇರಿ ದರ್ಶನ್ ಮುನಿರತ್ನ ಪರ ಪ್ರಚಾರ ಮಾಡುತ್ತಿದ್ದು, ಈ ವೇಳೆ ಒಮ್ಮೆ ಮಾಸ್ಕ್ ತೆಗೆದರು.

ದರ್ಶನ್ ಯಶವಂತಪುರದಿಂದ ಮುನಿರತ್ನ ಪರ ಪ್ರಚಾರ ಆರಂಭಿಸುತ್ತಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ದರ್ಶನ್ ಅಭಿಮಾನಿಗಳು ಅಲ್ಲಿಗೆ ಆಗಮಿಸಿದ್ದರು.

ಇದನ್ನೂ ಓದಿ : ಮಾನವೀಯತೆ ನೋಡಿ ಪ್ರಚಾರ : ನಟ ದರ್ಶನ್

10 ಗಂಟೆಗೆ ದರ್ಶನ್ ಯಶವಂತಪುರಕ್ಕೆ ಬರುತ್ತಾರೆ ಎಂದು 9 ಗಂಟೆಯಿಂದಲೇ ದಾಸ ಅಭಿಮಾನಿಗಳು ಕಾಯುತ್ತಿದ್ದರು.

ಆದ್ರೆ ದರ್ಶನ್ 11 ಗಂಟೆಗೆ ಯಶವಂತಪುರಕ್ಕೆ ಆಗಮಿಸಿ ಪ್ರಚಾರ ಶುರು ಮಾಡಿದರು. ಈ ವೇಳೆ ದರ್ಶನ್ ರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಇದನ್ನ ಗಮನಿಸಿದ ದರ್ಶನ್, ಮಾಸ್ಕ್ ತೆಗೆದು ಅಭಿಮಾನಿಗಳಿಗೆ ದರ್ಶನ ಕೊಟ್ಟರು.

ಟ್ರಾಫಿಕ್ ಜಾಮ್

ದರ್ಶನ್ ರೋಡ್ ಹಿನ್ನೆಲೆ ಯಶವಂತಪುರ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದಾರೆ.

ರಸ್ತೆ ತುಂಬೆಲ್ಲಾ ಬಿಜೆಪಿ ಕಾರ್ಯಕರ್ತರು, ದಚ್ಚು ಅಭಿಮಾನಿಗಳು ತುಂಬಿರುವ ಕಾರಣ ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?

Darshan Campaign

ದೇಶದಲ್ಲಿ ಕೊರೊನಾ ಸಂಕಷ್ಟ ಇನ್ನು ದೂರವಾಗಿಲ್ಲ. ಈಗಲೂ ಎಷ್ಟೊ ಮಂದಿ ಹೆಮ್ಮಾರಿ ವೈರಸ್ ಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಸರ್ಕಾರ ಕಟ್ಟು ನಿಟ್ಟಾಗಿ ಕೊರೊನಾ ನಿಯಮಗಳನ್ನು ಪಾಲಿಸಬೇಕೆಂದು ಸೂಚನೆಗಳನ್ನು ಹೊರಡಿಸಿದೆ. ಆದ್ರೆ ದರ್ಶನ್ ರ ಇಂದಿನ ಪ್ರಚಾರದಲ್ಲಿ ಯಾವುದೇ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ.

ಇದನ್ನೂ ಓದಿ : ಆರ್.ಆರ್ ನಗರಕ್ಕೆ ಚಕ್ರವರ್ತಿ `ಸುಂಟರಗಾಳಿ’

ಬಿಜೆಪಿ ಕಾರ್ಯಕರ್ತರು, ದಚ್ಚು ಅಭಿಮಾನಿಗಳು ಸಾಮಾಜಿಕ ಅಂತರವನ್ನು ಮರೆತು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಮಾಸ್ಕ್ ವಿಚಾರಕ್ಕೆ ಬಂದ್ರೆ ದರ್ಶನ್ ಹಿಂದೆ ನಿಂತಿರುವ ಬಿಜೆಪಿ ಮುಖಂಡರೇ ಸರಿಯಾಗಿ ಮಾಸ್ಕ್ ಹಾಕಿಕೊಂಡಿಲ್ಲ.

ದರ್ಶನ್ ರೋಡ್ ಶೋ ಎಲ್ಲೆಲ್ಲಿ?
ಯಶವಂತಪುರ ರೈಲ್ವೆ ನಿಲ್ದಾಣದ ಮುಂಭಾಗದಿಂದ ದರ್ಶನ್ ರೋಡ್ ಶೋ ಶುರು

ಬಳಿಕ ಜೆ.ಪಿ.ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ರೋಡ್ ಶೋ

 

ಮಧ್ಯಾಹ್ನ 1:15 ಗಂಟೆ ಜಾಲಹಳ್ಳಿ ವಿಲೇಜ್ ಮೂಲಕವಾಗಿ ರೋಡ್ ಶೋ

ಮಧ್ಯಾಹ್ನ 2:00 ಗಂಟೆ ಹೆಚ್ ಎಂಟಿ, ಪೀಣ್ಯಾ ಮಾರ್ಗವಾಗಿ ಗೊರಗುಂಟೆಪಾಳ್ಯದಲ್ಲಿ ಪ್ರಚಾರ

ಸಂಜೆ 4:00 ಗಂಟೆ ಲಕ್ಷ್ಮಿದೇವಿನಗರದ ಕೂಲಿನಗರ ಸೇತುವೆಯಿಂದ ರೋಡ್ ಶೋ

ಇದನ್ನೂ ಓದಿ : ಶಿರಾ ಅಖಾಡಕ್ಕೆ ಇಂದು ರಾಜಾಹುಲಿ `ಬಿಎಸ್‍ವೈ’ ಎಂಟ್ರಿ

ಸಂಜೆ 5:00 ಗಂಟೆ ಲಗ್ಗೆರೆಯ ಆಲದಮರ ಸರ್ಕಲ್, ಕೊಟ್ಟಿಗೆಪಾಳ್ಯದ ಪೈಪ್ ಲೈನ್, ಸುಂಕದಕಟ್ಟೆಗಳಲ್ಲಿ ರೋಡ್ ಶೋ

ಸಂಜೆ 6:00 ಗಂಟೆ ಕೊಟ್ಟಿಗೆಪಾಳ್ಯದ ಬಿಡಿಎ ಕಾಂಪ್ಲೆಕ್ಸ್ ವರೆಗೆ ರೋಡ್ ಶೋ

ರಾತ್ರಿ 8:15 ಗಂಟೆ ಜ್ಞಾನಭಾರತಿಯ ಕೆಂಗುಂಟೆ, ಮಲ್ಲತ್ತಹಳ್ಳಿಯಲ್ಲಿ ರೋಡ್ ಶೋ

ರಾತ್ರಿ 9:00 ಗಂಟೆ ರಾಜರಾಜೇಶ್ವರಿನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCoronaDarshanMunirathna
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram