ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಸೋಲು : ಗೆಲುವು ನಮ್ಮದೆ ಎಂದ ಬಿಎಸ್ ವೈ
ಮಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ.
ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಾವು 40,000 ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ.
ಶಿರಾದಲ್ಲಿ ನಾವು 25,000 ಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಎಸ್ ವೈ, 18 ಮಂದಿಯ ಸಹಾಯದಿಂದ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದೇವೆ.
ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ. ಬಿಜೆಪಿ ಪಕ್ಷದ ಬಲವರ್ಧನೆಯೇ ನಮ್ಮ ಗುರಿಯಾಗಿದೆ.
ಯಾವುದೇ ಚುನಾವಣೆಯನ್ನು ನಾವು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಬರುವಂತಹ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರಬೇಕು, ಅಧಿಕಾರದ ಮೂಲಕ ಜನರ ಸೇವೆ ಮಾಡಬೇಕು ಎಂದು ಕರೆ ಕೊಟ್ಟರು.
ಇದನ್ನೂ ಓದಿ : ವಿನಯ್ ಕುಲಕರ್ಣಿ ಬಿಜೆಪಿ ಸೇರೋದು ಶುದ್ಧ ಸುಳ್ಳು: ಸಿಎಂ ಬಿಎಸ್ವೈ ಸ್ಪಷ್ಟನೆ
ಇದೇ ವೇಳೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದ ಸಿಎಂ, ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಲಿದೆ.
ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ನಾವು 40,000 ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ.
ಹಾಗೇ ಶಿರಾದಲ್ಲೂ ನಾವು 25,000 ಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲವ್ ಜಿಹಾದ್ ಬಗ್ಗೆ ಮಾತನಾಡಿ, ದೇಶದಲ್ಲಿ ರಾಜ್ಯ ಮಾದರಿಯಾಗಿ ಬೆಳೆಯುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕುತ್ತಿದ್ದೇವೆ.
`ರಾಜರಾಜೇಶ್ವರಿ ನಗರ ನಮ್ಮದೇ’ ಎನ್ನುತ್ತಿರುವುದೇಕೆ ಕಾಂಗ್ರೆಸ್..?
ಅದರಂತೆ ಹಣದ ಆಮಿಷ, ಪ್ರೀತಿ ಪ್ರೇಮದಲ್ಲಿ ನಡೆಯುವ ಮತಾಂತರಕ್ಕೆ ಬ್ರೇಕ್ ಹಾಕುತ್ತೇವೆ. ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಸೇರಿ ಹತ್ತು ಪಾಲಿಕೆಗಳಿಗೆ ತಲಾ 50 ಕೋಟಿ.ರೂ ಮಂಜೂರು ಮಾಡಲಾಗುವುದು ಎಂದು ಘೋಷಿಸಿದ ಸಿಎಂ, ಸಮುದ್ರದ ಅಲೆಗಳಿಂದ ವಿದ್ಯುತ್ ತಯಾರಿಕೆಗೂ ಆದ್ಯತೆ ಹಾಗೂ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಯೋಜನೆ ಸೇರಿದಂತೆ ಉದ್ಯೋಗ ಅವಕಾಶಗಳನ್ನು ಸಿಗುವಂತೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










