ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತುರ್ತುಪರಿಸ್ಥಿತಿಗೆ 45, ಇಂದಿರಾ..ಆ ಕರಾಳ ನೆನಪು..!

admin by admin
June 25, 2020
in International, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

saaksha special..

ಅದು ಎಪ್ಪತ್ತರ ದಶಕ. ಆಗಷ್ಟೇ ಇಂದಿರಾ ಗಾಂಧಿಯನ್ನು ಪಕ್ಷವಿರೋಧಿ ಚಟುವಟಿಕೆಯ ಆಪಾದನೆ ಮೇಲೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಎದೆಗುಂದದ ಇಂದಿರಾಗಾಂಧಿ, ಕಾಂಗ್ರೆಸ್ ಐ ಅನ್ನುವ ಹೊಸ ಪಕ್ಷವನ್ನು ಹುಟ್ಟು ಹಾಕಿದ್ದರು. ದೇಶದಲ್ಲಿ ಸ್ವಾತಂತ್ರ ನಂತರ 1971 ರ ಸಾರ್ವತ್ರಿಕ ಚುನಾವಣೆಯಲ್ಲಿ, ಇಂದಿರಾ ಗಾಂಧಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರು, ಕಾಂಗ್ರೆಸ್ 518 ರಲ್ಲಿ 352 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಈ ಸಮಯದಲ್ಲಿಯೇ ಒಮ್ಮೆ ಗುಂಗಿ ಗುಡಿಯಾ ಎಂದು ಕರೆಯಲ್ಪಡುತ್ತಿದ್ದ ಇಂದಿರಾ ಗಾಂಧಿ ಅವರ ಚಿತ್ರಣವನ್ನು ಮಾರ್ಪಡಿಸಿಕೊಂಡರು. ನಂತರ ಇಂದಿರಾ ಅವರನ್ನು `ಮಾ ದುರ್ಗಾ’ ಮತ್ತು ‘ಐರನ್ ಲೇಡಿ’ ಎಂದು ಕರೆಯಲಾಗುತ್ತಿತ್ತು. ಇದಕ್ಕೆ ಪರೋಕ್ಷವಾಗಿ ಬಾಂಗ್ಲಾವನ್ನು ಪಾಕಿಸ್ತಾನದ ಕಪಿ ಮುಷ್ಠಿಯಿಂದ ವಿಮೋಚನೆ ಗೊಳಿಸಿದ್ದಲ್ಲದೆ ಪಾಕಿಸ್ತಾನವನ್ನು ನಮ್ಮ ಸೈನಿಕರು ಹಿಮ್ಮೆಟಿಸಿದ್ದು ಕಾರಣ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಜೂನ್ 12, 1975 ರಂದು, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಜಗ್ಮೋಹನ್ ಲಾಲ್ ಸಿನ್ಹಾ ಅವರು ರಾಯ್ ಬರೇಲಿಯ ಯುನೈಟೆಡ್ ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿ ರಾಜನಾರಾಯಣ್ ಅವರು ಸಲ್ಲಿಸಿದ್ದ ಅರ್ಜಿಯ ಮೇಲೆ ತೀರ್ಪು ನೀಡಿದರು. ಅರ್ಜಿಯಲ್ಲಿ, ರಾಜನಾರಾಯಣ್ ಅವರು ಇಂದಿರಾ ಗಾಂಧಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದರಲ್ಲಿ ಮತದಾರರಿಗೆ ಮದ್ಯ, ಲಂಚ ನೀಡುವುದು, ವಾಯುಪಡೆಯ ವಿಮಾನಗಳನ್ನು ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಂಡರು ಎಂದು ಆಪಾದನೆ ಮಾಡಿದ್ದರು.
ಅದೇಕೋ ಇಂದಿರಾ ಮನಸ್ಸಿನಲ್ಲಿ ಇದ್ದ ಗೊಂದಲ ಅನುಮಾನ ನಿಜವಾಗಲೂ ಜಾಸ್ತಿ ಸಮಯ ಬೇಕಾಗಿರಲಿಲ್ಲ. ಆದರೆ ಕಾನೂನಿನ ಸಂಕೋಲೆ ಇಂದಿರಾಗೆ ಯಾವುದೇ ವಿನಾಯಿತಿ ದೊರೆಯಲಿಲ್ಲ. ಚುನಾವಣೆಯಲ್ಲಿ ಸರ್ಕಾರಿ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ನ್ಯಾಯಮೂರ್ತಿ ಸಿನ್ಹಾ ಅವರು ಇಂದಿರಾ ಗಾಂಧಿ ಆಯ್ಕೆಯನ್ನು ಅಸಿಂಧುಗೊಳಿಸಿ ತೀರ್ಪು ನೀಡಿದರು. ಅಲ್ಲದೆ ಗಾಂಧಿಯನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಿದರು. ಹೈಕೋರ್ಟ್ ತೀರ್ಪಿನ ಪ್ರಕಾರ ಇಂದಿರಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತೊರೆಯಬೇಕಾಗಿತ್ತು. ಪ್ರಧಾನ ಮಂತ್ರಿಯ ಅಧಿಕೃತ ನಿವಾಸವಾದ 1 ಸಫ್ದರ್ಜಂಗ್ ರಸ್ತೆಯಲ್ಲಿ ತುರ್ತು ಸಭೆ ಕರೆಯಲಾಯಿತು ಮತ್ತು ಇಂದಿರಾ ಗಾಂಧಿ ಎಲ್ಲ ಮುಖಂಡರಿಂದ ಸಲಹೆ ಪಡೆದರು.

ಸಂಜಯ್ ಗಾಂಧಿಯವರ ಸಲಹೆಯ ಮೇರೆಗೆ ಇಂದಿರಾ ಗಾಂಧಿ ಹೈಕೋರ್ಟ್ ಜೂನ್ 23 ರ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದರು. ಜೂನ್ 24, 1975 ರಂದು, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ವಿ.ಆರ್.ಕೃಷ್ಣ ಅಯ್ಯರ್ ಅವರು ಈ ನಿರ್ಧಾರಕ್ಕೆ ಸಂಪೂರ್ಣ ತಡೆಯಾಜ್ಞೆ ನೀಡುವುದಿಲ್ಲ ಎಂದು ಹೇಳಿದರು. ಸುಪ್ರೀಂ ಕೋರ್ಟ್ ಈ ಆದೇಶ ಇಂದಿರಾಗಾಂಧಿ ಪ್ರಧಾನಿಯಾಗಿ ಉಳಿಯಲು ಅವಕಾಶ ನೀಡಿತು. ಆದರೆ ಅಂತಿಮ ತೀರ್ಪು ಬರುವವರೆಗೂ ಸಂಸದರಾಗಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿತು. ಆದರೆ ಅದೇಕೋ ಇಂದಿರಾ ಗಾಂಧಿಗೆ ದೇಶದ ಹಿತಕ್ಕಿಂತ ತನ್ನ ಸ್ವಾರ್ಥನೆ ಮುಖ್ಯವಾಗಿತ್ತು. ತನ್ನ ಸ್ವಯಂ ಪ್ರತಿಷ್ಠೆಗೆ ಧಕ್ಕೆ ಆದಾಗ ತೋಚಿದ್ದು ಕಮ್ಯುನಿಸ್ಟ್ ದೇಶದ ದಬ್ಬಾಳಿಕೆ. ಯೋಚನೆ ಮಾಡದೇ ಜೂನ್ 25 ಮತ್ತು 26 ರ ಮಧ್ಯರಾತ್ರಿಯಲ್ಲಿ ತುರ್ತು ಪರಿಸ್ಥಿತಿಯನ್ನು ದೇಶಾದ್ಯಂತ ಹೇರಲಾಯಿತು. ಆದರೆ ಅದಕ್ಕೆ ಅಡಿಪಾಯವನ್ನು ಜೂನ್ 12, 1975 ರಂದು ಹಾಕಲಾಗಿತ್ತು ಅನ್ನುವುದು ಸುಳ್ಳಲ್ಲ.

ದೇಶಾದ್ಯಂತ ಪ್ರತಿಭಟನೆಗಳು ಮತ್ತು ಪ್ರದರ್ಶನಗಳು ಪ್ರಾರಂಭವಾದ ನಂತರ, ಇಂದಿರಾ ಗಾಂಧಿ ಅಂದಿನ ರಾಷ್ಟ್ರ ಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಮೇಲೆ ಒತ್ತಡ ಹೇರಿ ಜೂನ್ 25 ರ ಮಧ್ಯರಾತ್ರಿಯಲ್ಲಿ ತುರ್ತು ಘೋಷಣೆಗೆ ಸಹಿ ಮಾಡಿಸಿದರು. ಆಂತರಿಕ ಅಶಾಂತಿ ತುರ್ತು ಪರಿಸ್ಥಿತಿಯನ್ನು ಹೇರಲು ಹಿಂದಿನ ಕಾರಣವೆಂದು ಉಲ್ಲೇಖಿಸಲಾಗಿತ್ತು.

ಇದಾದ ನಂತರ ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಆರಂಭಿಸಿದ ಜಯಪ್ರಕಾಶ್ ನಾರಾಯಣ್, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮೊರಾರ್ಜಿ ದೇಸಾಯಿ ಸೇರಿದಂತೆ ಎಲ್ಲ ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಯಿತು. ರೇಡಿಯೊದಲ್ಲಿ ಮಾತನಾಡಿದ್ದ ಇಂದಿರಾ ಗಾಂಧಿ, ದೇಶದ ಜನರ ವಿರುದ್ಧ ಪಿತೂರಿ ನಡೆಸಲಾಗಿದೆ. ಅದಕ್ಕಾಗಿಯೇ ಸರ್ಕಾರಕ್ಕೆ ತುರ್ತು ಪರಿಸ್ಥಿತಿ ಹೇರಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪತ್ರಿಕಾ ಸ್ವಾತಂತ್ರ‍್ಯವನ್ನು ಕಸಿದುಕೊಂಡ ನಂತರ, ಅನೇಕ ಹಿರಿಯ ಪತ್ರಕರ್ತರನ್ನು ಜೈಲಿಗೆ ಕಳುಹಿಸಲಾಯಿತು. ಆ ಸಮಯದಲ್ಲಿ, ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಪ್ರತಿಯೊಬ್ಬರೂ ಜೈಲಿನಲ್ಲಿರುವ ಮೂಲಕ ಶಿಕ್ಷೆಗೆ ಗುರಿಯಾದರು. ಈ ಅವಧಿಯಲ್ಲಿ ಸುಮಾರು 11 ಲಕ್ಷ ಕ್ಕೂ ಅಧಿಕ ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸುಮಾರು ಎರಡು ವರ್ಷದ ನಂತರ ಅಂದರೆ ಮಾರ್ಚ್ 21, 1977 ರಂದು ತುರ್ತು ಪರಿಸ್ಥಿತಿ ಕೊನೆಗೊಂಡಿತು.

ಸAವಿಧಾನವು ಮೂರು ರೀತಿಯ ತುರ್ತುಸ್ಥಿತಿಯನ್ನು ಉಲ್ಲೇಖಿಸುತ್ತದೆ. ಮೊದಲನೆಯದು ರಾಷ್ಟ್ರೀಯ ತುರ್ತುಸ್ಥಿತಿ, ಎರಡನೆಯದು ರಾಷ್ಟ್ರಪತಿಗಳ ನಿಯಮ ಮತ್ತು ಮೂರನೆಯದು ಆರ್ಥಿಕ ತುರ್ತುಸ್ಥಿತಿ. ರಾಷ್ಟ್ರಪತಿಗಳ ಅನುಮೋದನೆ ಇಲ್ಲದೆ ಮೂರೂ ತುರ್ತು ಪರಿಸ್ಥಿತಿಗಳನ್ನು ವಿಧಿಸಲಾಗುವುದಿಲ್ಲ. ಸಂಸತ್ತಿನ ಲಿಖಿತ ಪ್ರಸ್ತಾವನೆಯ ಮೇರೆಗೆ ರಾಷ್ಟ್ರಪತಿಗಳು ಈ ಅನುಮೋದನೆಯನ್ನು ನೀಡಬಹುದು.

ತುರ್ತು ಪರಿಸ್ಥಿತಿ ಜಾರಿಗೆ ಬಂದ ನಂತರ ಅದನ್ನು ಪ್ರತಿ ಸಂಸತ್ತಿನ ಸದನಗಳಲ್ಲಿ ಇಡಲಾಗುತ್ತದೆ, ಅದನ್ನು ಅಲ್ಲಿ ವಿರೋಧಿಸದಿದ್ದರೆ, ಅದನ್ನು ಆರು ತಿಂಗಳವರೆಗೆ ವಿಸ್ತರಿಸಲಾಗುತ್ತದೆ. 1975 ರಲ್ಲಿ ತುರ್ತು ಪರಿಸ್ಥಿತಿ 21 ತಿಂಗಳುಗಳ ಕಾಲ ನಡೆಯಿತು. ಅಂದರೆ, ಇದನ್ನು ಸುಮಾರು ನಾಲ್ಕು ಬಾರಿ ವಿಸ್ತರಿಸಲು ಅನುಮೋದಿಸಲಾಯಿತು. ಅಂದರೆ ಇಂದಿರಾ ಗಾಂಧಿಯ ಕಾಂಗ್ರೆಸ್ ಹಿಡಿತ ಯಾವ ಮಟ್ಟದಲಿಬೇರೂರಿತ್ತು ಅನ್ನುವುದಕ್ಕೆ ಬೇರೆ ಸಾಕ್ಷಿ ಬೇಕಾಗಿಲ್ಲ.

ತುರ್ತು ಪರಿಸ್ಥಿತಿ ಭಾರತದ ಮತ್ತು ಕಾಂಗ್ರೆಸ್ ಪಕ್ಷದ ಇತಿಹಾಸದ ಕರಾಳ ಅಧ್ಯಾಯವಾಗಿದೆ. ಆದರೆ ತನ್ನ ಸ್ವಾರ್ಥಕ್ಕೆ ಇಂದಿರಾಗಾಂಧಿ ದೇಶದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡದ್ದು ನಿಜಕ್ಕೂ ವಿಪರ್ಯಾಸ.

Tags: cingressemergencyindiragandi
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram