ಆಹಾರ ಸಚಿವರಿಗೆ ಪರಿಜ್ಞಾನ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗ : ಐದು ಎಕರೆ ಭೂಮಿ ಹೊಂದಿದವರು ಬಿಪಿಎಲ್ ಕಾರ್ಡ್ ವಾಪಸ್ ನೀಡಬೇಕು ಎಂಬ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನಿಜಕ್ಕೂ ಬಾಲಿಶ, ಜನ ವಿರೋಧಿ ತೀರ್ಮಾನ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸಚಿವರಿಗೆ ಪರಿಜ್ಞಾನ ಇಲ್ಲ.. ಇದು ಅತ್ಯಂತ ಕೆಟ್ಟ ತೀರ್ಮಾನ. ಸಚಿವರಾಗಿ ಒಂದು ತಿಂಗಳಾಯ್ತ. ಬಡವರ ಕಷ್ಟ ಅವರಿಗೆ ಗೊತ್ತಿಲ್ಲ. ಐದು ಎಕರೆ ಜಾಸ್ತಿ ಇರೋರು ಬಿಪಿಎಲ್ ಕಾರ್ಡ್ ವಾಪಾಸ್ಸ್ ನೀಡಿ ಎಂದು ಹೇಳಿದ್ದಾರೆ.
ಅವರು ಬಡ ರೈತನ ಕಬ್ಬಿನ ಹಣ ನೀಡದೆ ಟೋಪಿ ಹಾಕಿದ ಹಾಗೆ ಅಂದುಕೊಂಡಿರಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ, ಅದು ಯಡಿಯೂರಪ್ಪ ಕುಟುಂಬದ ಸರ್ಕಾರ ಅಂತ ಅವರ ಪಕ್ಷದವರೇ ಹೇಳ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದರು.
ಕಳೆದ ಒಂದು ವರ್ಷದಿಂದ ಕೊರೊನಾ ಇದ್ದ ಕಾರಣ ವೈದ್ಯರ ಸಲಹೆ ಮೇರೆಗೆ ರಾಜ್ಯ ಪ್ರವಾಸ ಮಾಡಲು ಆಗಲಿಲ್ಲ. ಈಗ ಮತ್ತೆ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಮಾಡುತ್ತೇನೆ.
ನಾನು ಸಿಎಂ ಸ್ಥಾನದಿಂದ ಕೆಳಗೆ ಇಳಿದ ನಂತರ ರಾಜ್ಯದಲ್ಲಿ ಪ್ರವಾಹ ಬಂದು ಬೆಳೆಹಾನಿ ಆಗಿದೆ. ಭಗವಂತನ ದಯೆಯಿಂದ ನಾನು ಸಿಎಂ ಸ್ಥಾನದಲ್ಲಿ ಇರಲಿಲ್ಲ.
ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ, ಎರಡು ವರ್ಷದಲ್ಲಿ ಮಾಡಿರುವ ಘೋಷಣೆ, ಜನ ಸಾಮಾನ್ಯರಿಗೆ ಹೇಗೆ ಸ್ಪಂದಿಸಿದ್ದಾರೆ ಎಂಬುದನ್ನು ನೋಡಿದ್ದೇನೆ.
ಈ ದೇಶದ ವ್ಯವಸ್ಥೆಯು ಕಾಪೆರ್Çರೇಟ್ ಹಾಗೂ ಶ್ರೀಮಂತರಿಗೆ ಅನುಕೂಲವಾಗುವಂಥ ವ್ಯವಸ್ಥೆಯಾಗಿದೆ.
2018 ರಿಂದ ಇದುವರೆಗೂ ಮಳೆಯಿಂದ ಹಾನಿಯಾದವರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









