ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ನೈಟ್ ರೈಡರ್ಸ್ ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
mahendra singh dhoni csk ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ನಡೆಯದ ಧೋನಿಯ ಲೆಕ್ಕಾಚಾರ… ನೈಟ್ ರೈಡರ್ಸ್  ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್

rahul tripati  ipl 2020 kkr saakshatvಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 10 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪರಾಭವಗೊಳಿಸಿದೆ.
ಅಬುಧಾಬಿಯಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಶುಬ್ಮನ್ ಗಿಲ್ ಜೊತೆಗೆ ರಾಹುಲ್ ತ್ರಿಪಾಠಿ ಅವರು ಆರಂಭಿಕನಾಗಿ ಕಣಕ್ಕಿಳಿದ್ರು.

ಶುಬ್ಮನ್ ಗಿಲ್ 11 ರನ್ ಗಳಿಸುವಷ್ಟರಲ್ಲಿ ಬ್ರೇವೋ ಅವರಿಗೆ ವಿಕೆಟ್ ಒಪ್ಪಿಸಿದ್ರು. ಮತ್ತೊಂದೆಡೆ ರಾಹುಲ್ ತ್ರಿಪಾಠಿ ಅವರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡ್ರು. ಆದ್ರೆ ಕೆಕೆಆರ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮೆನ್ ಗಳು ಸರಿಯಾಗಿ ಸಾಥ್ ನೀಡಲಿಲ್ಲ.
ನಿತೀಶ್ ರಾಣಾ 9 ರನ್, ಸುನೀಲ್ ನರೇನ್ 17 ರನ್, ಇಯಾನ್ ಮೊರ್ಗಾನ್ 7 ರನ್, ಆಂಡ್ರೆ ರಸೆಲ್ 2 ರನ್ , ದಿನೇಶ್ ಕಾರ್ತಿಕ್ 12 ರನ್ ಗಳಿಸಿ ನಿರಾಸೆ ಮೂಡಿಸಿದ್ರು.
ಮತ್ತೊಂದೆಡೆ ಆರಂಭಿಕ ರಾಹುಲ್ ತ್ರಿಪಾಠಿ ಅವರು ಅಬ್ಬರದ ಬ್ಯಾಟಿಂಗ್ ನಡೆಸಿದ್ರು. ಚೆನ್ನೈ ಬೌಲರ್ ಗಳಿಗೆ ಸವಾಲಾಗಿ ಪರಿಣಮಿಸಿದ್ದ ರಾಹುಲ್ ತ್ರಿಪಾಠಿ ಅವರು 51 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ ಆಕರ್ಷಕ 81 ರನ್ ಸಿಡಿಸಿದ್ರು.

ಐಪಿಎಲ್ 2020- ಮಂಕಾಗುತ್ತಿರುವ ಈ ಐದು ಬ್ಯಾಟ್ಸ್ ಮೆನ್ ಗಳು.. ಫ್ರಾಂಚೈಸಿಗಳಿಗೆ ದೊಡ್ಡ ತಲೆನೋವು..!

ಇನ್ನುಳಿದಂತೆ ಬ್ರೇವೋ ಅವರ ಮಾರಕ ದಾಳಿಗೆ ಕಮಲೇಶ್ ನಾಗರ್ಕೋಟಿ, ಶಿವಮ್ ಮಾವಿ ಮತ್ತು ವರುಣ್ ಚಕ್ರವರ್ತಿ ಶೂನ್ಯ ಸುತ್ತಿದ್ರು. ಪ್ಯಾಟ್ ಕಮಿನ್ಸ್ ಅವರು ಅಜೇಯ 17 ರನ್ ಗಳಿಸಿದ್ರು. ಅಂತಿಮವಾಗಿ ಕೆಕೆಆರ್ ತಂಡ 20 ಓವರ್ ಗಳಲ್ಲಿ 167 ರನ್ ಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ravindra jadeja ipl 2020 csk saakshatvಗೆಲ್ಲಲು 168 ರನ್ ಗಳ ಸವಾಲನ್ನು ಸ್ವೀಕರಿಸಿದ್ದ ಚೆನ್ನೈ ತಂಡ ಪಂದ್ಯ 3.4 ನೇ ಓವರ್ ನಲ್ಲಿ ಫಾಪ್ ಡುಪ್ಲೇಸಸ್ 17 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು.

ನಂತರ ಶೇನ್ ವಾಟ್ಸನ್ ಜೊತೆ ಸೇರಿದ ಅಂಬಟಿ ರಾಯುಡು ತಂಡವನ್ನು ಗೆಲುವಿನ ದಡ ಸೇರಿಸುವ ಪ್ರಯತ್ನ ನಡೆಸಿದ್ರು.

ಈ ಹಂತದಲ್ಲಿ 30 ರನ್ ಗಳಿಸಿದ್ದ ಅಂಬಟಿ ರಾಯುಡು ಅವರು ನಾಗರ್ಕೋಟಿ ಅವರಿಗೆ ಬಲಿಯಾದ್ರು. ಹಾಗೇ ಶೇನ್ ವಾಟ್ಸನ್ ಅವರು 50 ರನ್ ಗಳಿಸಿದ್ದಾಗ ಸುನೀಲ್ ನರೇನ್ ಅವರ ಎಲ್‍ಬಿ ಬಲೆಗೆ ಬಿದ್ರು.

ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೆಕೆಆರ್ ಬೌಲರ್ ಗಳು ಕಂಟಕವಾಗಿ ಪರಿಣಮಿಸಿದ್ರು. ಮಹೇಂದ್ರ ಸಿಂಗ್ ಧೋನಿ 11 ರನ್ ಗಳಿಸಿದ್ದಾಗ ವರುಣ್ ಚಕ್ರವರ್ತಿಗೆ ಬೌಲ್ಡಾದ್ರೆ, ಸ್ಯಾಮ್ ಕುರನ್ 17 ರನ್ ಗಳಿಸಿ ಪೆವಿಲಿಯನ್‍ಗೆ ಹಿಂತಿರುಗಿದ್ರು.
ಕೊನೆಯಲ್ಲಿ ಕೇದಾರ್ ಜಾಧವ್12 ಎಸೆತಗಳಲ್ಲಿ ಅಜೇಯ ಏಳು ರನ್ ಹಾಗೂ ರವೀಂದ್ರ ಜಡೇಜಾ ಎಂಟು ಎಸೆತಗಳಲ್ಲಿ 21 ರನ್ ಗಳಿಸಿದ್ರು. ಆದ್ರೆ ಕೆಕೆಆರ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಯ ಮುಂದೆ ಸಿಎಸ್‍ಕೆ ತಂಡದ ಅಬ್ಬರ ನಡೆಯಲಿಲ್ಲ.

ಹೀಗಾಗಿ ಕೆಕೆಆರ್ ತಂಡ 10 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು. ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಕಳೆದುಕೊಂಡು 157 ರನ್ ಗಳಿಸಲಷ್ಟೇ ಶಕ್ತವಾಯ್ತು.
ಸಿಎಸ್‍ಕೆ ಟೂರ್ನಿಯಲ್ಲಿ ನಾಲ್ಕನೇ ಸೋಲು ಕಂಡ್ರೆ, ಕೆಕೆಆರ್ ತಂಡ ಮೂರನೇ ಗೆಲುವು ದಾಖಲಿಸಿತು. ಭರ್ಜರಿ ಬ್ಯಾಟಿಂಗ್ ಮಾಡಿದ್ದ ರಾಹುಲ್ ತ್ರಿಪಾಠಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Tags: #dinesh karthik#shene watsonchennai super kingsCricketcsk fans clubIPLIPL 2020kkr fans clubKolkata Knight RidersMahendra Singh DhoniRahul Tripathiravindra jadejasharukh khan
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram