ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಪ್ಲೇ ಆಫ್ ನಲ್ಲಿ ಮುಂಬೈ ಇಂಡಿಯನ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ.. ಗೆಲ್ಲೋರು ಯಾರು ?

admin by admin
November 5, 2020
in IPL 2020, Newsbeat, ಕ್ರೀಡೆ
shreyash iyer rohith sharma ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಪ್ಲೇ ಆಫ್ ನಲ್ಲಿ ಮುಂಬೈ ಇಂಡಿಯನ್ಸ್ – ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ.. ಗೆಲ್ಲೋರು ಯಾರು ?

mumbai indians delhi capitals saakshatv ipl 20202020ರ ಐಪಿಎಲ್ ಟೂರ್ನಿಯ ಅಂತಿಮ ಘಟ್ಟದ ಮೊದಲ ಪಂದ್ಯ ಇಂದು ನಡೆಯಲಿದೆ.
ಟೂರ್ನಿಯ ಅಗ್ರ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಆಡಿರುವ 14 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. 5 ಪಂದ್ಯಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಹಂತದ ಏಳು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಹಂತದಲ್ಲಿ ನೀರಸ ಪ್ರದರ್ಶನ ನೀಡಿದೆ.
ಆದ್ರೂ ಟೂರ್ನಿಯ 14 ಪಂದ್ಯಗಳಲ್ಲಿ ಎಂಟು ಪಂದ್ಯಗಳಲ್ಲಿ ಜಯ ಮತ್ತು ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಇದೀಗ ಪ್ಲೇ ಆಫ್ ಪಂದ್ಯ ಮಹತ್ವ ಪಡೆದುಕೊಂಡಿದೆ. ಇಲ್ಲಿ ಸೋತ ತಂಡಕ್ಕೂ ಮತ್ತೊಂದು ಅವಕಾಶವಿದೆ. ಆದ್ರೂ ಅಂತಹ ರಿಸ್ಕ್ ತೆಗೆದುಕೊಳ್ಳಲು ಉಭಯ ತಂಡಗಳು ರೆಡಿ ಇಲ್ಲ. ಹಾಗಾಗಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಉಮೇದಿನಲ್ಲಿವೆ ಎರಡು ತಂಡಗಳು.
ಹಾಗೇ ನೋಡಿದ್ರೆ ಎರಡೂ ತಂಡಗಳು ಬಲಿಷ್ಠವಾಗಿದೆ. ಬ್ಯಾಟಿಂಗ್ – ಬೌಲಿಂಗ್ ನಲ್ಲೂ ಸಮಬಲದ ಹೋರಾಟವನ್ನು ಎದುರು ನೋಡಬಹುದು.
rohith sharma shreyash iyer ipl 2020 saakshatvಮುಂಬೈ ಇಂಡಿಯನ್ಸ್ ತಂಡಕ್ಕೆ ಅನುಭವಿ ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್ ಅವರ ಉತ್ತಮ ಆರಂಭದ ಜೊತೆಗೆ ಸೂರ್ಯ ಕುಮಾರ್ ಯಾದವ್ ಮತ್ತು ಇಶಾನ್ ಕಿಶಾನ್ ಅವರು ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ಹಾಗೇ ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕಿರಾನ್ ಪೊಲಾರ್ಡ್ ಅವರ ಹೊಡಿಬಡಿ ಆಟ ತಂಡಕ್ಕೆ ಬೋನಸ್ ಆಗುತ್ತಿದೆ.
ಮತ್ತೊಂದೆಡೆ ಬೌಲಿಂಗ್ ನಲ್ಲಿ ಜಸ್ಪ್ರಿತ್ ಬೂಮ್ರಾ, ಟ್ರೆಂಟ್ ಬೌಲ್ಟ್ ಮತ್ತು ನಥನ್ ನೇಲ್ ವೇಗ ಹಾಗೂ ಕೃನಾಲ್ ಪಾಂಡ್ಯ ಮತ್ತು ರಾಹುಲ್ ಚಾಹರ್ ಅವರ ಸ್ಪಿನ್ ಜಾದು ಎದುರಾಳಿ ತಂಡಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ.
ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಅನುಭವಿ ಮತ್ತು ಯುವ ಆಟಗಾರರನ್ನೊಳಗೊಂಡಿದೆ. ಯಾವುದೇ ಹಂತದಲ್ಲೂ ತಿರುಗೇಟು ನೀಡುವಂತಹ ಸಾಮಥ್ರ್ಯ ಹೊಂದಿದೆ.
ಆದ್ರೆ ಭರವಸೆ ಮೂಡಿಸಿರುವ ಆಟಗಾರರು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುತ್ತಿಲ್ಲ. ಇದು ತಂಡಕ್ಕೆ ಚಿಂತೆಯನ್ನುಂಟು ಮಾಡುತ್ತಿದೆ.
ಪೃಥ್ವಿ ಶಾ ಮತ್ತು ಶಿಖರ್ ಧವನ್ ಆರಂಭದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ರೆ ತಂಡಕ್ಕೆ ಚಿಂತೆ ಇಲ್ಲ. ಯಾಕಂದ್ರೆ ಮಧ್ಯಮ ಕ್ರಮಾಂಕದಲ್ಲಿ ಅಜ್ಯಂಕ್ಯಾ ರಹಾನೆ, ನಾಯಕ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ತಂಡಕ್ಕೆ ಆಧಾರವಾಗಬಹುದು. ಹಾಗೇ ಆಲ್ ರೌಂಡರ್ ಮಾರ್ಕಸ್ ಸ್ಟೋನಿಸ್ ಅವರ ಅಬ್ಬರದ ಬ್ಯಾಟಿಂಗ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.
ಆದ್ರೆ ಪೃಥ್ವಿ ಶಾ, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಅವರ ಬ್ಯಾಟ್ ನಿಂದ ಇನ್ನೂ ಕೂಡ ದೊಡ್ಡ ಮೊತ್ತದ ರನ್ ಹರಿದು ಬಂದಿಲ್ಲ. ಈ ಮೂವರು ಆಟಗಾರರು ಲಯ ಕಂಡುಕೊಂಡ್ರೆ ಮುಂಬೈ ಬೌಲರ್ ಗಳು ದುಬಾರಿಯಾಗಬಹುದು.
ಇನ್ನು ಡೆಲ್ಲಿ ತಂಡಕ್ಕೆ ಕಾಗಿಸೊ ರಬಾಡ ಮತ್ತು ಆನ್ರಿಚ್ ನೊರ್ಟೆಜ್ ಅವರೇ ಪ್ರಮುಖ ಅಸ್ತ್ರಗಳು. ಜಿದ್ದಿಗೆ ಬಿದ್ದಂತೆ ಬೌಲಿಂಗ್ ಮಾಡುತ್ತಿರುವುದು ಮುಂಬೈ ಬ್ಯಾಟ್ಸ್ ಮೆನ್ ಗಳಿಗೆ ರನ್ ವೇಗಕ್ಕೆ ಅಡ್ಡಿಯನ್ನುಂಟು ಮಾಡಬಹುದು. ಅಲ್ಲದೆ ಡೇನಿಯಲ್ ಸ್ಯಾಮ್ಸ್ ಕೂಡ ಹೆಚ್ಚುವರಿ ಬೌಲರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇನ್ನು ಸ್ಪಿನ್ ಬೌಲಿಂಗ್ ನಲ್ಲಿ ಅಕ್ಷರ್ ಪಟೇಲ್ ಮತ್ತು ಆರ್. ಅಶ್ವಿನ್ ಅತ್ಯುತ್ತಮ ಲಯದಲ್ಲಿದ್ದಾರೆ.
ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಕಾದಾಟ ರೋಚಕವಾಗಿ ಅಂತ್ಯಗೊಳ್ಳಬಹುದು.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026
Tags: #Kagiso Rabada#Marcus Stoinis#Prithvi Shaw#Rishabh Pant.#shikhar dhavanAnrich Nortjedelhi capitalsHardik PandyaIPL 2020 Playoffsjasprith bumrahmumbai indiansQualifier 1Rohit SharmaShreyas Iyer.Suryakumar Yadav
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram