ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಎಂಥಾ ಸಾವ್ ಮಾರಾಯ…! ಏನ್ ಗುರು.. ಹಿಂಗಾಡ್ತಾರೋ..! ಬಿಡೋ.. ಈ ಬಾರಿಯೂ ಕಪ್ ನಮ್ದಲ್ಲ…!

admin by admin
November 7, 2020
in IPL 2020, Newsbeat, ಕ್ರೀಡೆ
virat kohli rcb ipl 2020 saakshatv
Share on FacebookShare on TwitterShare on WhatsappShare on Telegram

ಎಂಥಾ ಸಾವ್ ಮಾರಾಯ…! ಏನ್ ಗುರು.. ಹಿಂಗಾಡ್ತಾರೋ..! ಬಿಡೋ.. ಈ ಬಾರಿಯೂ ಕಪ್ ನಮ್ದಲ್ಲ…!

rcb team ipl 2020 saakshatvಈ ಬಾರಿಯೂ ಕಪ್ ನಮ್ದಲ್ಲ..! 2020ಯಲ್ಲೂ ಆರ್ ಸಿಬಿಯ ಹಣೆ ಬರೆಹ ಬದಲಾಗಿಲ್ಲ. ಪ್ಲೇ ಆಫ್ ನಲ್ಲಿ ಡೇವಿಡ್ ವಾರ್ನರ್ ಬಳಗ ವಿರಾಟ್ ಪಡೆಯನ್ನು ಗೆಲ್ಲಲು ಬಿಡಲಿಲ್ಲ. ಆದ್ರೂ ಆರ್ ಸಿಬಿ ಅಭಿಮಾನಿಗಳ ಅಭಿಮಾನ ಕಮ್ಮಿಯಾಗಿಲ್ಲ. ಮುಂದಿನ ಸಲ ಕಪ್ ನಮ್ದೆ ಅಂತ ಹೇಳುವ ಪರಿಪಾಠ ಮುಗಿಯುವುದಿಲ್ಲ.
ಅಂದ ಹಾಗೇ ಆರ್ ಸಿಬಿ ಎಡವಿದ್ದು ಎಲ್ಲಿ..?
ನಡೆಯಲಿಲ್ಲ ವಿರಾಟ್ ಕೊಹ್ಲಿಯ ಯುಕ್ತಿ. ಸಾಕಾಗಲಿಲ್ಲ ಎಬಿಡಿಯ ಶಕ್ತಿ. ಸಾಲು ಸಾಲು ಸೋಲುಗಳಿಂದ ತಂಡಕ್ಕೆ ಒಲಿಯಲಿಲ್ಲ ಗೆಲುವಿನ ಸ್ಪೂರ್ತಿ. ಕಳಪೆ ಆಟದಿಂದ ಮಂಕಾಗಿ ಹೋಗುತ್ತಿದೆ ಆರ್‍ಸಿಬಿಯ ಕೀರ್ತಿ. ಹಾಗಂತ ತಂಡದ ಪ್ರದರ್ಶನದಿಂದ ನಿರಾಸೆ ಅನುಭವಿಸಿದ್ರೂ ಕಡಿಮೆಯಾಗಲಿಲ್ಲ ಅಭಿಮಾನಿಗಳ ಪ್ರೀತಿ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಅಭಿಮಾನಿಗಳು ಇಟ್ಟಿರುವ ಭಕ್ತಿ..!
ಹೌದು, ಕಳೆದ 13 ವರ್ಷಗಳಿಂದ ಆರ್ ಸಿಗೆ ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಬಾರಿಯೂ ಕಪ್ ನಮ್ದೆ ಅಂತ ಬೀಗುತ್ತಿರುವ ಅಭಿಮಾನಿಗಳಿಗೆ ವಿರಾಟ್ ಬಳಗ ನಿರಾಸೆ ಮೂಡಿಸುತ್ತನೇ ಇದೆ.
ಹಾಗಿದ್ರೆ ವಿರಾಟ್ ಕೊಹ್ಲಿ ಪಡೆ ಕಪ್ ಗೆಲ್ಲಲು ಯಾಕೆ ಸಾಧ್ಯವಾಗುತ್ತಿಲ್ಲ ? ಈ ಪ್ರಶ್ನೆಗೆ ನಿಖರವಾದ ಉತ್ತರವಿಲ್ಲ. ಬದಲಾಗಿ ಪ್ರಶ್ನೆಗೆ ಮರು ಪ್ರಶ್ನೆ ಹುಟ್ಟಿಕೊಳ್ಳುತ್ತಿದೆ.
AB de Villiers rcb saakshatv ipl 2020ಮುಖ್ಯವಾಗಿ ಟೀಮ್ ಮ್ಯಾನೇಜ್‍ಮೆಂಟ್. ತಂಡದ ಆಯ್ಕೆಯ ವಿಚಾರದಲ್ಲಿ ಸತತವಾಗಿ ಎಡವುತ್ತಿದೆ. ಬಲಿಷ್ಠ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲು ಆರ್ ಸಿಬಿ ಮ್ಯಾನೇಜ್ ಮೆಂಟ್‍ಗೆ ಸಾಧ್ಯವಾಗುತ್ತಿಲ್ಲ.
ಅಲ್ಲದೆ ಆರ್ ಸಿಬಿ ತಂಡ ಹೆಚ್ಚು ಅವಲಂಬಿತವಾಗಿರೋದು ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಮೇಲೆ. ಇನ್ನುಳಿದ ಆಟಗಾರರು ಹೆಸರಿಗೆ ತಕ್ಕಂತೆ ಆಡುತ್ತಿಲ್ಲ. ಪ್ರತಿ ಪಂದ್ಯದಲ್ಲೂ ವಿರಾಟ್ ಮತ್ತು ಎಬಿಡಿ ಆಡಲೇ ಬೇಕು. ಒಂದು ವೇಳೆ ಆಡದಿದ್ರೆ ಆರ್ ಸಿಬಿಗೆ ಸೋಲು ಕಟ್ಟಿಟ್ಟ ಬುತ್ತಿ.
ಈ ಬಾರಿ ದೇವದತ್ತ್ ಪಡಿಕ್ಕಲ್ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿದ್ದಾರೆ. ಅದನ್ನು ಬಿಟ್ಟು ಆರ್ ಸಿಬಿಯ ಯಾವೊಬ್ಬ ಬ್ಯಾಟ್ಸ್ ಮೆನ್ ಕೂಡ ತಮ್ಮ ಸಾಮಥ್ರ್ಯಕ್ಕೆ ತಕ್ಕಂತೆ ಆಟ ಆಡಲಿಲ್ಲ.
ರನ್ ಮೇಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಮರುಭೂಮಿಯ ಅಂಗಣದಲ್ಲಿ ಸ್ಟಕ್ ಆಗಿಬಿಟ್ರು. ಆರೋನ್ ಫಿಂಚ್ ಮತ್ತು ಎಬಿಡಿಗೆ ಧೂಳು ಎಬ್ಬಿಸಲು ಸಾಧ್ಯವಾಗಲೇ ಇಲ್ಲ.
ಇನ್ನು ಬೌಲಿಂಗ್ ವಿಭಾಗ. ಕ್ರಿಸ್ ಮೋರಿಸ್ ಗಾಯ, ಮಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಸ್ಥಿರ ಪ್ರದರ್ಶನ ನೀಡಲಿಲ್ಲ. ಚಾಹಲ್ ಜಾದೂ ಹೆಚ್ಚು ವರ್ಕೌಟ್ ಆಗಲಿಲ್ಲ.
ತಂಡದಲ್ಲಿ ಹೆಚ್ಚು ಆಲ್ ರೌಂಡರ್ ಗಳಿದ್ರೂ ಮ್ಯಾಚ್ ಫೀನಿಶರ್‍ಗಳ ಕೊರತೆ ಎದ್ದು ಕಾಣುತ್ತಿತ್ತು.
rcb ipl 2020 devdutt padikkal saakshatvಹೀಗಾಗಿ ತಂಡದಿಂದ ಸಾಂಘಿಕ ಆಟ ಹೊರಬಂದಿಲ್ಲ. ತಂಡ ಬ್ಯಾಲೆನ್ಸ್ ಆಗಿಲ್ಲ. ಆಟಗಾರರ ಆಯ್ಕೆ ವಿಚಾರದಲ್ಲಂತೂ ಆರ್ ಸಿಬಿ ಟೀಮ್ ಮ್ಯಾನೇಜ್ ಮೆಂಟ್ ಪಕ್ಕಾ ಎಡವಿದೆ. ದುಡ್ಡು ಇದ್ರೂ ಆಟಗಾರರನ್ನು ಖರೀದಿ ಮಾಡುವಾಗ ಆರ್ ಸಿಬಿ ಮ್ಯಾನೇಜ್ ಮೆಂಟ್ ನ ಲೆಕ್ಕಚಾರ ಏನು ಅಂತನೇ ಗೊತ್ತಾಗುತ್ತಿಲ್ಲ.
ಇನ್ನು ಕರ್ನಾಟಕದ ಆಟಗಾರರನ್ನು ಕಡೆಗಣಿಸಿರುವುದು ಆರ್ ಸಿಬಿಗೆ ದೊಡ್ಡ ಹೊಡೆತ ಕೊಟ್ಟಿದೆ. ಸ್ಥಳೀಯ ಆಟಗಾರರ ಪ್ರತಿಭೆಗಳ ಮೇಲೆ ನಂಬಿಕೆಯನ್ನಿಟ್ಟುಕೊಳ್ಳದಿರುವುದು ಆರ್ ಸಿಬಿಯ ಹಿನ್ನಡೆಗೆ ಪ್ರಮುಖ ಕಾರಣವಾಗಿದೆ.
ಹಾಗೇ ನೋಡಿದ್ರೆ ಆರ್ ಸಿಬಿ ತಂಡವನ್ನು ನೋಡಿದಾಗ ಯಾರು ಕೂಡ ಪ್ಲೇ ಆಫ್ ಗೆ ಎಂಟ್ರಿಯಾಗುತ್ತೆ ಅಂತ ಅಂದುಕೊಂಡಿರಲಿಲ್ಲ. ಆರ್ ಸಿಬಿ ಅಭಿಮಾನಿಗಳು ಅಭಿಮಾನದಿಂದ ವಿರಾಟ್ ಪಡೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿದ್ದರು.
ಸತತ ನಾಲ್ಕು ಪಂದ್ಯಗಳ ಸೋಲಿನ ನಡುವೆಯೂ ಪ್ಲೇ ಆಫ್ ಗೆ ಎಂಟ್ರಿಯಾಗಿದ್ದು ಪವಾಡವೇ ಸರಿ.
ಆದ್ರೆ ಅದೃಷ್ಟವನ್ನು ಗೆಲುವಾಗಿ ಪರಿವರ್ತಿಸಲು ನಾಯಕ ವಿರಾಟ್ ಕೊಹ್ಲಿ ಎಡವಿದ್ರು. ಏಕಾಂಗಿಯಾಗಿ ಹೋರಾಟ ನಡೆಸುತ್ತಿದ್ದ ವಿರಾಟ್ ಈ ಬಾರಿಯ ಐಪಿಎಲ್ ನಲ್ಲಿ ವೈಫಲ್ಯ ಅನುಭವಿಸಿರೋದು ಆರ್ ಸಿಬಿಗೆ ದೊಡ್ಡ ಹೊಡೆತ.
ಅದೇನೇ ಇರಲಿ, ಈಗ ಆತ್ಮಾವಲೋಕನ ಸಮಯ. ಆರ್ ಸಿಬಿಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಮುಖ್ಯವಾಗಿ ಟೀಮ್ ಮ್ಯಾನೇಜ್ ಮೆಂಟ್ ನಲ್ಲಿ ಮೇಜರ್ ಸರ್ಜರಿಯಾಗಬೇಕಿದೆ.
virat kohli rcb saakshatv ipl 2020ಇಲ್ಲಿ ಆಟಗಾರರನ್ನು ದೂರಿ ಪ್ರಯೋಜನವಿಲ್ಲ. ಪ್ರತಿಯೊಬ್ಬ ಆಟಗಾರನೂ ಗೆಲುವಿಗಾಗಿ ಹೋರಾಟ ನಡೆಸುತ್ತಾನೆ. ಆದ್ರೆ ಆಟಗಾರರನ್ನು ಆಯ್ಕೆ ಮಾಡುವಾಗ ಟೀಮ್ ಮ್ಯಾನೇಜ್ ಮೆಂಟ್ ಯೋಚನೆ, ಯೋಜನೆ ಹಾಕೊಂಡು ಆಟಗಾರರನ್ನು ಖರೀದಿ ಮಾಡಬೇಕು. ಆದ್ರೆ ಆರ್ ಸಿಬಿಯ ಟೀಮ್ ಮ್ಯಾನೇಜ್ ಮೆಂಟ್‍ನ ಲೆಕ್ಕಚಾರ ಏನು ಅಂತನೇ ಗೊತ್ತಾಗುತ್ತಿಲ್ಲ.
ಒಟ್ಟಿನಲ್ಲಿ ಆರ್ ಸಿಬಿ ಸೋತಿದೆ. ಹಾಗಂತ ಸೋತಿರುವುದಕ್ಕೆ ಬೇಸರವಿಲ್ಲ. ಕೆಟ್ಟ ಆಟವನ್ನಾಡಿರುವುದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.
ಏನೇ ಆದ್ರೂ ಈ ಬಾರಿ ಕಪ್ ನಮ್ದಲ್ಲ. ಮುಂದಿನ ಬಾರಿಯಾದ್ರೂ ಕಪ್ ನಮ್ದೆ ಆಗಿರಲಿ. ಅದಕ್ಕೆ ತಕ್ಕಂತೆ ಆರ್ ಸಿಬಿ ತಂಡವನ್ನು ಕಟ್ಟಲಿ. ಇಲ್ಲದೆ ಇದ್ರೆ ಪ್ರತಿ ವರ್ಷ, ಈ ಬಾರಿ ಕಪ್ ನಮ್ದೆ ಅನ್ನುತ್ತಿದ್ದ ಅಭಿಮಾನಿಗಳು ಈ ಬಾರಿಯೂ ಕಪ್ ನಮ್ದಲ್ಲ ಅಂತ ಹೇಳಲೂ ಬಹುದು..

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
Tags: #Devdutt Padikkal#Navdeep Saini#saakshatvAB de Villiersaron finchchahalChris MorrisIPLIPL 2020Mohammad SirajRCBvirat kohli
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram