ಪರಿಸ್ಥಿತಿ ನಿಭಾಯಿಸೋಕೆ ಆಗದಿದ್ರೆ ಯಾಕಿರ್ಬೇಕು,ಕೂಡಲೇ ರಾಜೀನಾಮೆ ನೀಡಲಿ: ಡಿ.ಕೆ. ಶಿವಕುಮಾರ್ ಗುಡುಗು
ಬೆಂಗಳೂರು : ಕೊರೊನಾ ವೈರಸ್ ನಿಂದ ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಹೇಳಿಕೆ ಭಾರಿ ಟೀಕೆಗಳಿಗೆ ಗುರಿಯಾಗುತ್ತಿದೆ. ಇದೀಗ ಸಚಿವರ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ನಿಭಾಯಿಸೋಕೆ ಆಗದಿದ್ದೇ ಯಾಕೀರಬೇಕು, ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಬಿಜೆಪಿಯವರು ಏನೇನೋ ಮಾಡಿದರು. ಈಗ ಅಧಿಕಾರ ನಡೆಸೋಕೆ ನಮ್ಮ ಕೈಯಲ್ಲಿ ಆಗಲ್ಲ ಅಂತ ಹೇಳ್ತಾರೆ. ಶ್ರೀರಾಮುಲು ಹೇಳಿಕೆ ಎಲ್ಲೆಲ್ಲಿಗೋ ಹೋಗುತ್ತಿದೆ. ಇದು ಶ್ರೀರಾಮುಲು ಅವರ ವೈಯಕ್ತಿಕ ಹೇಳಿಕೆ ಅಲ್ಲ, ಸರ್ಕಾರದ ಸ್ಥಿತಿಯನ್ನು ಸಚಿವರು ಬಹಿರಂಗವಾಗಿ ಹೇಳಿದ್ದಾರೆ ಎಂದರು.
ಮುಂದುವರಿದು, ಜನರ ಆರೋಗ್ಯ ರಕ್ಷಣೆ ಮಾಡಲು ನಿಮ್ಮಿಂದ ಸಾಧ್ಯವಾಗಿದಿದ್ರೆ ರಾಜೀನಾಮೆ ನೀಡಿ ಹೊರಡಿ. ರಾಜ್ಯಪಾಲ ಆಳ್ವಿಕೆ ಬರಲಿ ಎಂದು ಆಗ್ರಹಿಸಿದ ಡಿಕೆಶಿ, ಒಬ್ಬರು ದೇವರ ಮೇಲೆ ಭಾರ ಹಾಕಿದ್ದಾರೆ. ಇನ್ನೊಬ್ಬರು ಸಭೆಗೆ ಹೋದಾಗೆಲಲ್ಲ ದೇವರ ಕಥೆ ಹೇಳುತ್ತಾರೆ. ಸರ್ಕಾರ ಕೊರೊನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಗುಡುಗಿದರು.