ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂದೆ 60 ಸಾವಿರ ಕೋಟಿ ಅವ್ಯವಹಾರ : ಸಿದ್ದು ಬಾಂಬ್

admin by admin
July 16, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ ಹಿಂದೆ 60 ಸಾವಿರ ಕೋಟಿ ಅವ್ಯವಹಾರ : ಸಿದ್ದು ಬಾಂಬ್

ಬೆಂಗಳೂರು ; ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ವಿವಾದಿತ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದಕ್ಕೆ ವಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ಬಗ್ಗೆ ಮಾಜಿ ಸಿಎಂ  ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆಯ ಹಿಂದೆ ಸುಮಾರು 60 ಸಾವಿರ ಕೋಟಿ ರೂಪಾಯಿಯ ವ್ಯವಹಾರವಿದೆ. ಇದು ಗಣಿಹಗರಣಕ್ಕಿಂತ ದೊಡ್ಡ ಭ್ರಷ್ಟಚಾರವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

1961ರ ಭೂ ಸುಧಾರಣಾ ಕಾಯ್ದೆಯನ್ನು ಆಗಿನ ಮುಖ್ಯಮಂತ್ರಿ ದೇವರಾಜ ಅರಸು ಅವರು 1974ರ ಮಾರ್ಚ್ 1ರಲ್ಲಿ ಜಾರಿಗೆ ತಂದರು. ಅಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ಈಗಿನ ಸರ್ಕಾರ ಕಾಯ್ದೆಯಲ್ಲಿದ್ದ ಸೆಕ್ಷನ್ 63, 79ಎ,ಬಿ,ಸಿ ಮತ್ತು 80ನ್ನು ರದ್ದು ಗೊಳಿಸುವ ಸುಗ್ರೀವಾಜ್ಞೆಯನ್ನು ಮಾರ್ಚ್ 13ರಂದು ಜಾರಿಗೆ ತರಲಾಗಿದೆ. ಇದು ಕರಾಳದಿನ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಾಯ್ದೆಯ ಸೆಕ್ಷನ್ 63ರಲ್ಲಿ ಪ್ರತಿಯೊಬ್ಬರು ಭೂಮಿ ಹೊಂದಲು ಮಿತಿ ನಿಗದಿ ಪಡಿಸಲಾಗಿತ್ತು. ನೆರೆಯ ಕೇರಳದಲ್ಲಿ 20, ತಮಿಳುನಾಡಿನಲ್ಲಿ 30, ಆಂಧ್ರಪ್ರದೇಶದಲ್ಲಿ 54 ಎಕರೆ ಹೊಂದಲು ಅವಕಾಶ ಇದೆ. ಕರ್ನಾಟಕದಲ್ಲಿ 118 ಎಕರೆ ಹೊಂದಲು ಅವಕಾಶ ಇತ್ತು. ಅದನ್ನು ಕಾಯ್ದೆ ತಿದ್ದುಪಡಿ ಮೂಲಕ 436 ಎಕರೆಗೆ ಹೆಚ್ಚಿಸಲಾಗಿದೆ ಎಂದ ಸಿದ್ದರಾಮಯ್ಯ, ಸೆಕ್ಷನ್ 79ಎ ಅಡಿಯಲ್ಲಿ ಕೃಷಿಯೇತರ ಆದಾಯ 25 ಲಕ್ಷ ಮೀರಿದವರು ಕೃಷಿ ಭೂಮಿ ಖರೀದಿಸಬಾರದು ಎಂದಿದೆ. ಸೆಕ್ಷನ್ 79ಬಿ ರೈತರಲ್ಲದವರು ಕೃಷಿ ಭೂಮಿ ಖರೀದಿಸಬಾರದು ಎಂದಿದೆ. 97ಸಿ ಭೂಮಿ ಖರೀದಿಸುವವರು ಸಲ್ಲಿಸುವ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದರೆ ಶಿಕ್ಷೆಗೆ ಗುರಿ ಪಡಿಸಲು ಅವಕಾಶ ಇದೆ. ಸೆಕ್ಷನ್ 80 ಕೃಷಿಕರಲ್ಲದವರು ಭೂಮಿ ಖರೀದಿಸುವಂತಿಲ್ಲ ಎಂದಿತ್ತು. ಆದ್ರೆ, ಈಗ ಎಲ್ಲಾ ಸೆಕ್ಷನ್ ಗಳನ್ನು ಪೂರ್ವಾನ್ವಯವಾಗುವಂತೆ ಸಂಪೂರ್ಣವಾಗಿ ರದ್ದು ಮಾಡಿದ್ದಾರೆ ಎಂದರು.

ಇನ್ನು ರಾಜ್ಯದಾದ್ಯಂತ ಸೆಕ್ಷನ್ 79 ಎ,ಬಿ ಅಡಿ 13814 ಪ್ರಕರಣಗಳು ದಾಖಲಾಗಿ ವಿಚಾರಣೆ ನಡೆಯುತ್ತಿದ್ದವು.
ಬೆಂಗಳೂರು ನಗರದಲ್ಲಿ 1080 ಪ್ರಕರಣಗಳು ಬಾಕಿ ಇವೆ. ಈ ಹಿಂದೆ ಕೃಷಿಯೇತರ ಆದಾಯ ಮಿತಿಯನ್ನು 25 ಲಕ್ಷಕ್ಕೆ ಹೆಚ್ಚಿಸುವ ಮುನ್ನಾ 1129 ಹಳೆ ಕೇಸುಗಲಿದ್ದವು, ಆದಾಯ ಮಿತಿ ಹೆಚ್ಚಿಸಿದ ಬಳಿಕ 12685 ಹೊಸ ಕೇಸುಗಳು ದಾಖಲಾಗಿವೆ. ಈಗ ಎಲ್ಲವೂ ರದ್ದಾಗಿವೆ. ಪ್ರತಿ ಪ್ರಕರಣದಲ್ಲಿ 4 ಎಕರೆ ಎಂದು ಅಂದಾಜಿಸಿದರೂ 52 ಸಾವಿರ ಎಕರೆ ಪ್ರದೇಶಗಳ ಭೂ ತಕರಾರುಗಳು ರದ್ದುಗೊಂಡಿವೆ. ಬೆಂಗಳೂರಿನಲ್ಲಿ ಭೂಮಿ ಬೆಲೆ ಕೋಟ್ಯಂತರ ರೂಪಾಯಿ ಇದೆ.
ಒಟ್ಟು ಭೂಮಿಯ ಮೌಲ್ಯ ಸುಮಾರು 45 ರಿಂದ 50 ಸಾವಿರ ಕೋಟಿಯಷ್ಟಿದೆ. ಇನ್ನೂ ಸಹಕಾರ ಸಂಘಗಳು ಮತ್ತು ಮಧ್ಯವರ್ತಿಗಳ ಮೂಲಕ ಅಕ್ರಮವಾಗಿ ಖರೀದಿಸಿರುವ ಭೂಮಿಯ ಬಗ್ಗೆ ಸರ್ಕಾರವೇ ಸಮೀಕ್ಷೆ ನಡೆಸಿದ್ದು, ಅದರ ಮೌಲ್ಯ ಸುಮಾರು 10 ಸಾವಿರ ಕೋಟಿ ರೂಪಾಯಿಯಾಗಲಿದೆ. ಇದು ಗಣಿಹಗರಣಕ್ಕಿಂತ ದೊಡ್ಡ ಭ್ರಷ್ಟಚಾರ ಎಂದು ಆರೋಪಿಸಿದರು.
ಇನ್ನು ಗಣಿಹಗರಣದಲ್ಲಿ ನಿರ್ದೀಷ್ಟ ಆರೋಪಿಗಳಿದ್ದರು. ಇಲ್ಲಿ ಸರ್ಕಾರವೇ ಶಾಮೀಲಾಗಿದೆ. ಶ್ರೀಮಂತರ, ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಬಿಗೆ ಮಣಿದಿದೆ. ಭೂಮಿ ಖರೀದಿಸುವ ಶ್ರೀಮಂತರಿಗೆ ಈ ಕಾಯ್ದೆಯಿಂದ ಲಾಭವಾಗಲಿದೆ. ಕೊರೊನಾ ಸಂದರ್ಭದಲ್ಲಿ ಜನ ಹೋರಾಟ ಮಾಡಲಾಗುವುದಿಲ್ಲ ಎಂಬ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: bengaluruBSYex cm SiddaramaiahkarnatakakarntakaLand Reform Amendment Actstate govt
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram