ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಂ.ಟಿ.ಬಿ. ಆರ್.ಶಂಕರ್, ಹೆಚ್. ವಿಶ್ವನಾಥ್ ಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ಸಹಮತ : ಅಂತಿಮ ತೀರ್ಮಾನ ಕೇಂದ್ರಕ್ಕೆ ಬಿಟ್ಟಿದ್ದು

admin by admin
June 16, 2020
in Newsbeat, ರಾಜಕೀಯ
Share on FacebookShare on TwitterShare on WhatsappShare on Telegram

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಬೆಂಗಳೂರು : ಎಂ.ಟಿ.ಬಿ ನಾಗರಾಜ್, ಆರ್.ಶಂಕರ್, ಹಾಗೂ ಹೆಚ್. ವಿಶ್ವನಾಥ್ ಗೆ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಯಾರಿಗೆ ನೀಡಬೇಕು ಎಂದು ಚರ್ಚಿಸಲು ಬಿಜೆಪಿಯ ಕೊರ್ ಕಮಿಟಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಂ.ಟಿ.ಬಿ ನಾಗರಾಜ್, ಆರ್.ಶಂಕರ್,  ಹೆಚ್. ವಿಶ್ವನಾಥ್ , ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ  ಸುಧೀರ್ಘ ಚರ್ಚೆ ನಡೆದಿದೆ.

ಈ ವೇಳೆ ಹೆಚ್. ವಿಶ್ವನಾಥ್ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಯಾಕೆಂದರೆ ಆರ್, ಶಂಕರ್ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ಎಂ.ಟಿ.ಬಿ ನಾಗರಾಜ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಎದರು ಸೋಲು ಕಂಡಿದ್ದಾರೆ. ಒಂದು ವೇಳೆ ಬಂಡಾಯ ಅಭ್ಯರ್ಥಿ ಇಲ್ಲದಿದ್ದರೆ ಗೆದ್ದು ಬರುತ್ತಿದ್ದರು. ಆದರೆ ವಿಶ್ವನಾಥ್ ಉಪಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದರೂ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೊಡುವುದ ಸರಿಯಲ್ಲ ಎಂಬ ಅಭಿಪ್ರಾಯ  ಸಭೆಯಲ್ಲಿ ವ್ಯಕ್ಯವಾಗಿದೆ ಎನ್ನಲಾಗಿದೆ.

ಸಾಕಷ್ಟು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ  ಎಂ.ಟಿ.ಬಿ ನಾಗರಾಜ್, ಆರ್.ಶಂಕರ್, ಹೆಚ್. ವಿಶ್ವನಾಥ್, ಮಾಜಿ ಶಾಸಕ ಸುನೀಲ್ ವಲ್ಲ್ಯಾಪುರೆ  ಟಿಕೆಟ್ ನೀಡುವ ವಿಚಾರಕ್ಕೆ ಸಭೆ ಸಹಮತ ವ್ಯಕ್ತಪಡಿಸಿದೆ. ಜೊತೆಗೆ ರಾಜ್ಯಸಭೆ ಟಿಕೆಟ್ ಆಯ್ಕೆಯಲ್ಲಿ ಕೇಂದ್ರ ಸಮಿತಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ರಾಜ್ಯ ಕೋರ್ ಕಮಿಟಿ ಸಹಮತ ವ್ಯಕ್ತಪಡಿಸಿದ ಹೆಸರುಗಳನ್ನು ಅಂತಿಮ ಮಾಡುವಂತೆ ಕೇಂದ್ರ ಸಮಿತಿ ಮೇಲೆ ಒತ್ತಡ ಹಾಕಲು ತಂತ್ರ ರೂಪಿಸಿದೆ. ಅದಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ನಾಯಕರಾದ ಪ್ರಹ್ಲಾದ್ ಜೋಶಿ, ಡಿ.ವಿ ಸದಾನಂದಗೌಡ  ಸೇರಿ ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ತೀರ್ಮಾನಕ್ಕೆ ಕೋರ್ ಕಮಿಟಿ ಸಭೆ ಬಂದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವರಸೆ ಬದಲಿಸಿದ ರಾಜ್ಯ ಬಿಜೆಪಿ

ಯಾವುದೇ ಚುನಾವಣೆ ಆಗಲಿ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ  ಚರ್ಚೆ ನಡೆಸುತ್ತದೆ. ಸಭೆ ಬಳಿಕ ಚರ್ಚಿತವಾದ ಹೆಸರುಗಳನ್ನು ಲಿಖಿತ ರೂಪದಲ್ಲಿ ಕೇಂದ್ರಕ್ಕೆ ರವಾನೆ ಮಾಡುತ್ತದೆ. ಆದರೆ ಈ ಬಾರಿ ರಾಜ್ಯ ಬಿಜೆಪಿ ತನ್ನ ವರಸೆ ಬದಲಿಸಿದೆ. ರಾಜ್ಯಸಭೆ ಟಿಕೆಟ್ ವಿಷಯದಲ್ಲಿ ರಾಜ್ಯ ಕೋರ್ ಕಮಿಟಿ ಹೆಸರುಗಳನ್ನು ಫೈನಲ್ ಮಾಡಿ ಕೇಂದ್ರಕ್ಕೆ ಕಳಿಸಿತ್ತು. ಆದರೆ ಕೇಂದ್ರ ಸಮಿತಿ ಅಂತಿಮ ಕ್ಷಣದಲ್ಲಿ ಕಳಿಸಿರುವ ಲಿಖಿತ ಪಟ್ಟಿಗೆ ಮನ್ನಣೆ ನೀಡದೆ. ಪಕ್ಷದ ಸಾಮಾನ್ಯ ಕಾರ್ಯಕರ್ತರ ಹೆಸರುಗಳನ್ನು ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯ ಬಿಜೆಪಿ ಮುಖಭಂಗ ಅನುಭವಿಸಿತ್ತು. ಇದೀಗ ರಾಜ್ಯ ವಿಧಾನ ಪರಿಷತ್ ಟಿಕೆಟ್ ವಿಚಾರದಲ್ಲಿ ಅದೆ ಮಾದರಿ ಮುಖಭಂಗ  ಅನುಭವಿಸಬಾರದು ಎಂಬ ಕಾರಣಕ್ಕೆ ಹೆಸರುಗಳನ್ನು ಲಿಖಿತ ರೂಪದಲ್ಲಿ ಕಳಿಸಿಲ್ಲ . ಆದರೆ ಚರ್ಚಿತವಾದ ಹೆಸರುಗಳನ್ನು ಕೇಂದ್ರ ನಾಯಕರ  ಮುಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಸ್ತಾಒ ಮಾಡಬೇಕು ಎಂದು ಸಭೆ ತೀರ್ಮಾನ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: BJP...MLC
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram