ಕೊರೊನಾ ನಿಯಂತ್ರಣ ಮಾಡುವುದಕ್ಕೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಘಟನೆ ನಡೆದಿದೆ. ಮಾಜಿ ಶಾಸಕ ಸುರೇಶ್ ಗೌಡ ಇಂದು ತುಮಕೂರಿನ ಹೊನ್ನುಡಿಕೆ ಗ್ರಾಮದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಸಂಸದೆ ಶೋಭಾ ಕರಂದ್ಲಾಜೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನೂರಾರು ಜನ ಮಾಸ್ಕ್ ಧರಿಸಿ ಕುಳಿತಿದ್ದರು. ಅಲ್ಲದೆ ನಿನ್ನೆಯಷ್ಟೇ ಕೇಂದ್ರ ಸರ್ಕಾರ ನೀಡಿದ ಮಾರ್ಗ ಸೂಚಿಯಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳು ನಡೆಸುವಂತಿಲ್ಲ ಎಂದು ಹೇಳಿತ್ತು. ಇದೀಗ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ನಿರ್ಲಕ್ಷ್ಯ ತೋರಿದ್ದಾರೆ. ಆ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.
ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ
ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...








