ಬೆಂಗಳೂರು: ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯ ಮತದಾನ ಆರಂಭವಾಗಿದೆ.
7 ಗಂಟೆಯಿಂದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಅಂತ್ಯಗೊಳ್ಳಲಿದೆ.
ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಟಿ.ಬಿ ಜಯಚಂದ್ರ, ಜೆಡಿಎಸ್ನ ಅಮ್ಮಾಜಮ್ಮ, ಬಿಜೆಪಿಯಿಂದ ರಾಜೇಶ್ ಅವರ ಭವಿಷ್ಯವನ್ನು ಮತದಾರರ ಪ್ರಭುಗಳು ಮತಯಂತ್ರಗಳಲ್ಲಿ ಭದ್ರಪಡಿಸುತ್ತಿದ್ದಾರೆ.
ಅದೇ ರೀತಿ, ಆರ್.ಆರ್ ನಗರದಲ್ಲೂ ಕೊರೊನಾ ಭೀತಿಯ ನಡುವೆಯೂ ಮತದಾನ ಆರಂಭವಾಗಿದ್ದು, ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ನ ಕುಸುಮಾ ಹಾಗೂ ಜೆಡಿಎಸ್ನ ಕೃಷ್ಣಮೂರ್ತಿ ಅವರ ರಾಜಕೀಯ ಭವಿಷ್ಯವನ್ನು ಮತದಾರ ಪ್ರಭುಗಳು ಭದ್ರಪಡಿಸುತ್ತಿದ್ದಾರೆ. ರಾಜ್ಯ ರಾಜಕೀಯದ ಮಟ್ಟಿಗೆ ಈ ಉಪಚುನಾಣೆ ಭಾರಿ ನಿರೀಕ್ಷೆಗಳನ್ನು ಹುಟ್ಟಿಸಿದೆ.
ಸಿಎಂ ಭ್ರಮೆಯಲ್ಲಿರೋ ಡಿಕೆಶಿಗೆ ಸೋಲಿನ ಭಯ..?
ಉಪ ಚುನಾವಣೆ ಗೆದ್ದರೆ ಮುಖ್ಯಮಂತ್ರಿ ಆಗುವ ಭ್ರಮೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆರ್.ಆರ್ ನಗರ ಹಾಗೂ ಶಿರಾ ಉಪಚುನಾವಣೆಯ ಸೋಲಿನ ಭಯ ಕಾಡುತ್ತಿದೆ ಎಂದು ಸಚಿವ ಶ್ರೀರಾಮುಲು ಟೀಕಿಸಿದ್ದಾರೆ.
ಶಿರಾದಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ಉಸ್ತುವಾರಿ ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಹೋದ ಕಡೆ ಸೋಲು ಇಲ್ಲ. ಆದ್ರೆ ಶಿರಾದ ಜನತೆ ಮಾತ್ರ ಬಿಜೆಪಿಗೆ ಮತ ನೀಡಲಿದ್ದಾರೆ. ಈ ಹಿಂದೆ ಕೆ.ಆರ್.ಪೇಟೆ ಗೆಲುವಿಗೆ ಶ್ರಮಿಸಿದ್ದರು ಎಂದರು.
ಕಾಂಗ್ರೆಸ್ ಪಕ್ಷ ಒಳ ಜಗಳದಿಂದಲೇ ಸೋಲು ಅನುಭವಿಸುತ್ತದೆ. ಸಿದ್ದರಾಮಯ್ಯ ಶಿರಾ ಕ್ಷೇತ್ರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಡಿ.ಕೆ.ಸುರೇಶ್ ಆರ್.ಆರ್. ನಗರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಪ್ರಚಾರ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಇಬ್ಬರಿಗೂ ನಾನು ಶುಭ ಹಾರೈಸುತ್ತೇನೆ, ಆದ್ರೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಆರ್.ಆರ್.ನಗರ ಕ್ಷೇತ್ರವನ್ನ ಉಳಿಸಿಕೊಳ್ಳಲು ಡಿಕೆ ಸೋದರರು ವಿಫಲವಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಸೂಕ್ತವೇ ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಸಿಎಂ ಆಗೋ ಕನಸಿನನಲ್ಲಿರುವ ಡಿ.ಕೆ.ಶಿವಕುಮಾರ್ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ವ್ಯಾಪ್ತಿಯ ಕ್ಷೇತ್ರ ಸೋತರೆ ರಾಜ್ಯವನ್ನ ಡಿಕೆಶಿ ಹೇಗೆ ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಉದ್ಭವವಾಗುತ್ತೆ ರಾಮುಲು ವ್ಯಂಗ್ಯವಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel