ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಈ ಹಿನ್ನೆಲೆ ನಾಳೆ ಸಿಎಂ ಬಿ.ಎಸ್ ಯಡಿಯೂರಪ್ಪ ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ( video conference) ನಡೆಸಿ ಮಾಹಿತಿ ಪಡೆಯಲಿದ್ದಾರೆ.( CM video conference)
ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸಲು ಯುವ ಬ್ರಿಗೇಡ್ ಆರಂಭಿಸಿರುವ ಸ್ಪಾರ್ಕ್ ಯೋಜನೆಗೆ ಸಿಎಂ ಚಾಲನೆ ನೀಡಿದರು. ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ನಾಳೆ ಮಳೆ ಪೀಡಿತ ಜಿಲ್ಲೆಗಳ ಡಿಸಿಗಳ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದೇನೆ.
ಇದನ್ನೂ ಓದಿ : ಸಾಂಸ್ಕೃತಿಕ ನಗರಿಯಲ್ಲಿ ಅ.17ರಿಂದ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ..!
ಈ ವೇಳೆ ಅವರ ಬಳಿ ಮಳೆ ಬಗ್ಗೆ ಮಾಹಿತಿ ಪಡೆಯಲಿದ್ದೇನೆ. ಈಗಾಗಲೇ ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಳೆಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ವರದಿ ಕೊಡಲು ಸೂಚನೆ ನೀಡಿದ್ದೇನೆ.
ಅತ್ಯಾಚಾರಿಗಳ ಜನನಾಂಗ ಕಟ್ ಮಾಡಬೇಕು : ಶ್ರೀ ಬಸವ ಪ್ರಕಾಶ ಸ್ವಾಮೀಜಿ
ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸವಿಸ್ತಾರವಾಗಿ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಭರವಸೆ ನೀಡಿದರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel