ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪರಿಷತ್ ಸಭಾಪತಿ ಫೈಟ್: ಧರ್ಮೇಗೌಡರನ್ನು ಎಳೆದಾಡಿದ ಕಾಂಗ್ರೆಸ್, ಗದ್ದಲ, ಕೋಲಾಹಲ, ಮತ್ತೆ ಮುಂದೂಡಿಕೆ..!?

Kariyappa N by Kariyappa N
December 15, 2020
in Newsbeat, Politics, Samagra karnataka, ರಾಜ್ಯ
couclil
Share on FacebookShare on TwitterShare on WhatsappShare on Telegram

ಬೆಂಗಳೂರು: ಹಿರಿಯ ಸದನ ಎಂದೇ ಖ್ಯಾತವಾಗಿರುವ ರಾಜ್ಯ ವಿಧಾನಪರಿಷತ್ ಇಂದು ರಾಜ್ಯ ರಾಜಕೀಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಸಭಾಪತಿ ಹುದ್ದೆಗಾಗಿ ಭಾರಿ ಫೈಟ್‍ಗೆ ಸಾಕ್ಷಿಯಾಯಿತು.
ವಿಧಾನಪರಿಷತ್ ಕಲಾಪ ಆರಂಭಿಸಲು ಬೆಲ್ ಹಾಕಲಾಗಿತ್ತು. ನಿಯಮದ ಪ್ರಕಾರ ಬೆಲ್ ನಿಲ್ಲುವ ಮೊದಲೇ ಉಪಸಭಾಪತಿ ಧರ್ಮೇಗೌಡರನ್ನು ಬಿಜೆಪಿ ಸದಸ್ಯರು ಸಭಾಪತಿ ಪೀಠಕ್ಕೆ ತಂದು ಕೂರಿಸಿದ್ದೇ ಇಷ್ಟೇಲ್ಲಾ ರಾದ್ಧಾಂತಕ್ಕೆ ಕಾರಣವಾಯಿತು.

council
ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಕಳೆದ ವಾರ ಪರಿಷತ್ ಕಲಾಪ ದಿಢೀರ್ ಅನಿರ್ಧಿಷ್ಟಾವಧಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಸಭಾಪತಿ ವಿರುದ್ಧ ಮತ್ತೆ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಇಂದು ಒಂದು ದಿನದ ವಿಶೇಷ ಅಧಿವೇಶನ ಕರೆದಿದೆ.
ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್‍ನಿಂದ ಸಭಾಪತಿ ಸ್ಥಾನಕ್ಕೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿತ್ತು. ಹೀಗಾಗಿ ಇಂದು ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಅನುಮೋದನೆ ಪಡೆದು ಕಾಂಗ್ರೆಸ್‍ಗೆ ಟಕ್ಕರ್ ಕೊಡಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿತ್ತು.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

council
ನಿಯಮದ ಪ್ರಕಾರ ಯಾವುದೇ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಅರ್ಜಿ ಸಲ್ಲಿಸಿದರೆ ಕಲಾಪ ಆರಂಭಿಸುವುದು ಸಭಾಪತಿಗಳೇ ಎನ್ನಲಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆ ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಹೀಗಾಗಿ ಕಲಾಪ ಮುಂದುವರೆಸುವಂತೆ ಉಪಸಭಾಪತಿಗಳನ್ನು ಕರೆದು ಸಭಾಪತಿ ಸ್ಥಾನ ಅಲಂಕರಿಸಲು ಸೂಚಿಸಲಾಗುತ್ತದೆ. ಆನಂತರ ಉಪಸಭಾಪತಿಗಳು ಕಲಾಪವನ್ನು ಮುನ್ನಡೆವುದು ನಿಯಮ.
ಆದರೆ, ಇಂದು ಆಗಿದ್ದೇ ಬೇರೆ. ವಿಧಾನಪರಿಷತ್ ಕಲಾಪ ಆರಂಭಕ್ಕೂ ಮುನ್ನ ಬೆಲ್ ಹಾಕಲಾಗಿತ್ತು. ಕೆಲವೇ ಕ್ಷಣಗಳಲ್ಲಿ ಸದನ ಆರಂಭವಾಗುತ್ತದೆ ಎಂಬುದನ್ನು ಸೂಚಿಸಲು ಬೆಲ್ ಹಾಕಲಾಗುತ್ತದೆ.


ಸದನ ಆರಂಭವಾಗುತ್ತದೆ ಎಂಬ ಕಾರಣಕ್ಕೆ ಎಲ್ಲಾ ಪಕ್ಷಗಳ ಸದಸ್ಯರು ಬಂದು ತಮ್ಮ ಆಸನಗಳಲ್ಲಿ ಕುಳಿತಿದ್ದರು. ಉಪಸಭಾಪತಿ ಧರ್ಮೇಗೌಡ ಕೂಡ ತಮ್ಮ ಸ್ಥಾನದಲ್ಲಿ ಕುಳಿತಿದ್ದರು. ಆದರೆ, ಬೆಲ್ ನಿಲ್ಲುವ ಮೊದಲೇ, ಮಾರ್ಷಲ್‍ಗಳು ಬಂದು ಸಭಾಪತಿಗಳು ಬರುತ್ತಾರೆಂದು ಹೇಳುವ ಮೊದಲೇ ಬಿಜೆಪಿ ಸದಸ್ಯರು ಸಭಾಪತಿ ಬರುವ ಬಾಗಿಲು ಬಂದ್ ಮಾಡಿ, ಸಭಾಪತಿ ಸ್ಥಾನಕ್ಕೆ ಉಪಸಭಾಪತಿ ಧರ್ಮೇಗೌಡರನ್ನು ತಂದು ಕೂರಿಸಿದರು. ಜತೆಗೆ ಸಭಾಪತಿ ಕೊಠಡಿಯಿಂದ ಪ್ರತಾಪ್ ಚಂದ್ರ ಶೆಟ್ಟಿ ಸದನ ಪ್ರವೇಶಿಸದಂತೆಯೂ ಬಿಜೆಪಿ ಸದಸ್ಯರು ಬಾಗಿಲು ಬಂದ್ ಮಾಡಿ ತಡೆದಿದ್ದರು.


ದಿಢೀರ್ ಆದ ಈ ಬೆಳವಣಿಗೆಯಿಂದ ಮೊದಲೇ ಸಜ್ಜಾಗಿ ಬಂದಿದ್ದ ಕಾಂಗ್ರೆಸ್ ಸದಸ್ಯರು, ಸಭಾಪತಿ ಪೀಠದಲ್ಲಿ ಕುಳಿತಿದ್ದ ಧರ್ಮೇಗೌಡರನ್ನು ಎಳೆದಾಡಿದರು. ಈ ವೇಳೆ ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ತಳ್ಳಾಟ, ನೂಕಾಟ ನಡೆದು, ಗದ್ದಲ, ಕೋಲಾಹಲವೇ ನಡೆಯಿತು. ಕಾಂಗ್ರೆಸ್-ಬಿಜೆಪಿ ಸದಸ್ಯರು ಪರಸ್ಪರ ಧಿಕ್ಕಾರದ ಘೋಷಣೆ ಕೂಗಿದರು. ತಳ್ಳಾಟ-ನೂಕಾಟ ತಡೆಯಲು ಬಂದ್ ಮಾರ್ಷಲ್‍ಗಳನ್ನೂ ಸದಸ್ಯರು ಎಳೆದಾಡಿದರು. ಈ ವೇಳೆ ಸಭಾಪತಿ ಪೀಠದ ಮುಂದೆ ಹಾಕಿದ ಕೋವಿಡ್ ಶೀಲ್ಡ್ ಒಡೆದು ಹೋಯಿತು.
ಕೊನೆಗೂ ಸಭಾಪತಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಎಳೆದು ತಂದು ಮೂಲ ಸ್ಥಾನದಲ್ಲಿ ಕೂರಿಸಿದರು. ಜತೆಗೆ ಆ ಸ್ಥಾನದಲ್ಲಿ ಹಿರಿಯ ಸದಸ್ಯ ಚಂದ್ರಶೇಖರ ಅವರನ್ನು ಕೂರಿಸಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಧಿಕ್ಕಾರದ ಘೋಷಣೆಗಳೂ ಮೊಳಗಿದವು.


ಈ ಹೈಡ್ರಾಮ ನಡೆಯುತ್ತಿರುವಾಗಲೇ ಬಿಜೆಪಿ ಸದಸ್ಯರು ಸಭಾಪತಿ ಪ್ರವೇಶ ದ್ವಾರಕ್ಕೆ ಮಾಡಿದ್ದ ಬಾಗಿಲನ್ನು ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಓಪನ್ ಮಾಡಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಸದನಕ್ಕೆ ಬರಲು ಅವಕಾಶ ಮಾಡಿಕೊಟ್ಟರು.
ಸಭಾಪತಿ ಪೀಠದಲ್ಲಿ ಕುಳಿತ ಪ್ರತಾಪಚಂದ್ರ ಶೆಟ್ಟಿ, ಮತ್ತೆ ವಿಧಾನಪರಿಷತ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿ ನಿರ್ಗಮಿಸಿದರು.
ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ, ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರೂ ಬಿಜೆಪಿ-ಕಾಂಗ್ರೆಸ್ ಸದಸ್ಯರ ಧಿಕ್ಕಾರದ ಘೋಷಣೆಗಳು ಮುಂದುವರೆದವು.

ಕಾಂಗ್ರೆಸ್-ಬಿಜೆಪಿ ಆರೋಪ ಪ್ರತ್ಯಾರೋಪ
ವಿಧಾನಪರಿಷತ್‍ನ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಮಾರಾಮಾರಿ ಬಗ್ಗೆ ಕಾಂಗ್ರೆಸ್, ಬಿಜೆಪಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಈ ಗಲಾಟೆಗೆ ಬಿಜೆಪಿಯೇ ನೇರ ಕಾರಣ. ಹೀಗಾಗಿ ಬಿಜೆಪಿ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇಂತಹ
ಬಿಜೆಪಿ ಸರ್ಕಾರ ಕಾನೂನುನ್ನು ಗಾಳಿಗೆ ತೂರಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ಸಂವಿಧಾನದ ರೀತಿ ನಡೆದುಕೊಳ್ಳದೆ ಕಾಂಗ್ರೆಸ್ ವರ್ತನೆ ಸಂಸದೀಯ ವ್ಯವಸ್ಥೆಗೆ ಕಪ್ಪು ಚುಕ್ಕೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚರ್ಚೆ
ವಿಧಾನಪರಿಷತ್‍ನಲ್ಲಿ ನಡೆದ ಮಾರಾಮಾರಿ ವಿಚಾರವಾಗಿ ಕಾಂಗ್ರೆಸ್ ಸದಸ್ಯರು ನಡೆದುಕೊಂಡ ರೀತಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಸಚಿವರು, ಶಾಸಕರು ಹಾಗೂ ಮುಖಂಡರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ರಾಜ್ಯಪಾರಿಗೆ ದೂರು ನೀಡುವುದರ ಜತೆ ಮುಂದಿನ ಕಾನೂನು ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: adjournedChairperson FightCongress-bjp galatekarnataka Vidhana Parishad
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram