ಮೂಡುಬಿದಿರೆ: ಕ್ಷುಲ್ಲಕ ಕಾರಣಕ್ಕೆ ಸ್ವಂತ ಅಣ್ಣನೇ ತಮ್ಮನನ್ನು ಕೊಂದಿರುವ ಘಟನೆ ಕಾರ್ಕಳದ ಕೆಲ್ಲಪುತ್ರಿಗೆಯಲ್ಲಿ ನಡೆದಿದೆ. ರವೀಂದ್ರ ಮೃತ ದುರ್ದೈವಿಯಾಗಿದ್ದಾನೆ. ಭಾನುವಾರ ರಾತ್ರಿ ರವೀಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮೃತ ರವೀಂದ್ರ, ಮೃತನ ಅಣ್ಣ ಶ್ರೀನಿವಾಸ್, ಹಾಗೂ ಇವರಿಬ್ಬರ ಭಾವ ಆನಂದ ನಡುವೆ ಜಗಳವಾಗಿದೆ. ಈ ವೇಳೆ ಶ್ರೀನಿವಾಸ್ ಮತ್ತು ಆನಂದ ಇಬ್ಬರು ಸೇರಿ ರವೀಂದ್ರ ಅವರ ಹೊಟ್ಟೆ ಮೇಲೆ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲೇ ರಕ್ತ ಕಕ್ಕಿ ಅಸ್ವಸ್ಥರಾಗಿದ್ದ ರವೀಂದ್ರ ಅವರನ್ನು ಸ್ಥಳೀಯರು ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ರವೀಂದ್ರ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸದ್ಯ ಈ ಸಂಬಂಧ ಪೊಲೀಸರು ಆರೋಪಿಗಳಾದ ಶ್ರೀನಿವಾಸ್ ಹಾಗೂ ಆನಂದ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








