ಕಾಂಗ್ರೇಸ್ ಶಾಸಕನ ಪುತ್ರ ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ
ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಕಿರಿಯ ಪುತ್ರ ವಿಭವ್ ಅಲಿಯಾಸ್ ವಿಭು ಗುರುವಾರ, ನವೆಂಬರ್ 11, ಜಬಲ್ಪುರದಲ್ಲಿರುವ ಅವರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಆಸ್ಪತ್ರೆಯವರು ಹೇಳಿದ್ದಾರೆ.
ಮನೆಯಲ್ಲಿ ಡತ್ ನೋಟ್ ವಶಪಡಿಸಿಕೊಂಡಿದ್ದೇವೆ, ಆತ್ಮಹತ್ಯೆಗೆ ಯಾರನ್ನೂ ದೂಷಿಸಲಾಗಿಲ್ಲ ಮತ್ತು ಆತ್ಮಹತ್ಯೆಗೆ ಯಾವುದೇ ನಿರ್ದಿಷ್ಟ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಜಬಲ್ಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ್ ಬಹುಗುಣ ಮಾದ್ಯಮಗಳಿಗೆ ಮಾಹಿತಿ ನೀಡಿದರು.
ಘಟನೆಯ ಮಾಹಿತಿ ತಿಳಿದ ಬರ್ಗಿಯ ಶಾಸಕ ಸಂಜಯ್ ಯಾದವ್ ಕೂಡ ಆಸ್ಪತ್ರೆಗೆ ಆಗಮಿಸಿದರು. 17 ವರ್ಷದ ವಿಭು 12ನೇ ತರಗತಿ ವಿದ್ಯಾರ್ಥಿಯಾಗಿದ್ದು, ಘಟನೆ ನಡೆದಾಗ ಮನೆಯಲ್ಲಿ ಒಬ್ಬನೇ ಇದ್ದ. ಮನೆಯ ಬಾಥ್ ರೂಮನಲ್ಲಿ ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.