ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಚೀನಾ ಹೆಸರು ಹೇಳಲು ಯಾಕೆ ಹೆದರುತ್ತಿದ್ದಾರೆ ಎಂದು ಸಂಸದ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿ ವಾಹಿನಿ ಜೊತೆ ಮಾತನಾಡಿದ ಓವೈಸಿ, ದೇಶ ಕಷ್ಟ ಕಾಲದಲ್ಲಿದ್ದು, ಕೊರೊನಾದಿಂದ ಸಾವುಗಳು ಆಗುತ್ತಿವೆ. ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಚೀನಾ ದೇಶದೊಳಗೆ ನುಗ್ಗಿದೆ. ಈ ಎಲ್ಲ ವಿಷಯಗಳ ಮೇಲೆ ಚರ್ಚೆ ನಡೆಯಬೇಕು ಎಂಬುವುದು ನಮ್ಮೆಲ್ಲರ ಇಚ್ಛೆ. ಆದ್ರೆ ಸರ್ಕಾರ ಪ್ರಶ್ನಾವಳಿ ಸಮಯವನ್ನ ರದ್ದುಗೊಳಿಸುವ ಮೂಲಕ ವಿಪಕ್ಷಗಳ ಧ್ವನಿ ಅಡಗಿಸುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಕೇಂದ್ರ ಸರ್ಕಾರ ಬೆನ್ನು ತೋರಿಸಿ ಓಡುವ ಕೆಲಸವನ್ನು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಚೀನಾ ವಿಚಾರವಾಗಿ ಮೋದಿ ವಿರುದ್ಧ ಗುಡುಗಿದ ಅಸಾದುದ್ದೀನ್, ಪ್ರಧಾನಿಗಳು ಯಾರು ದೇಶದ ಗಡಿ ಒಳ ಪ್ರವೇಶಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಚೀನಾ ಸೇನೆ ಸಾವಿರ ಕಿಲೋ ಮೀಟರ್ ನಷ್ಟು ಒಳಪ್ರವೇಶಿಸಿದೆ. ಈ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರಧಾನಿಗಳು ಚೀನಾದ ಹೆಸರು ಯಾಕೆ ಹೆದರುತ್ತಿದ್ದಾರೆ ಎಂಬುವುದು ತಿಳಿಯುತ್ತಿಲ್ಲ. ಪ್ರಧಾನಿಗಳು ದೇಶದ ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುವಲ್ಲಿ ನಿರತರಾಗಿದ್ದಾರೆ. ನಾವು ದೇಶದ ಸೇನೆಯ ಜೊತೆಯಲ್ಲಿದ್ದೇವೆ. ಚೀನಾ ವಿಷಯದಲ್ಲಿ ಸರ್ಕಾರ ದೇಶದ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
https://youtu.be/eUpiOvdy6yI