ಕೊಪ್ಪಳ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕೊಪ್ಪಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು ರೈತ ಸಂಘಟನೆ ಮುಖಂಡರು ಬೆಳಿಗ್ಗೆಯಿಂದ ರಸ್ತೆಗಿಳಿದು ಹೋರಾಟ ಆರಂಭಿಸಿದ್ದಾರೆ.
ಕೊಪ್ಪಳ ಕೇಂದ್ರಿಯ ಬಸ್ ನಿಲ್ದಾಣದ ಮುಂದೆ ಟೈರ್ಗೆ ಬೆಂಕಿ ಹಚ್ಚಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬೈಕ್ನಲ್ಲಿ ತೆರಳಿ ಅಂಗಡಿ-ಮುಗ್ಗಟ್ಟು ಬಂದ್ ಮಾಡಿಸುತ್ತಿರುವ ದೃಷ್ಯ ಅಲ್ಲಲ್ಲಿ ಕಂಡು ಬರುತ್ತಿದೆ.
ಜತೆಗೆ ರೈತ ಸಂಘಟನೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
ಕಾಮನ್ವೆಲ್ತ್ ಗೇಮ್ಸ್ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...








