ಕಲಬುರಗಿ: ನೆರೆ ರಾಜ್ಯಗಳಿಗೆ ಬಸ್ ಸಂಚರಿಸುವ ನಿಟ್ಟಿನಲ್ಲಿ ನೆರೆಯ ಆಂಧ್ರ ಪ್ರದೇಶಕ್ಕೆ ಮೊದಲನೇಯದಾಗಿ ಬಸ್ ಸಂಚಾರ ಶುರು ಮಾಡಲಾಗುತ್ತಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಕಲಬುರಗಿಯ ಈ ಸಂಬಂಧ ಮಾತನಾಡಿರುವ ಅವರು ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಸಂಬಂಧ ಮಹಾರಾಷ್ಟ್ರ ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶದ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈ ಸಂಬಂಧ ಈಗಾಗಲೇ ನೆರೆಯ ರಾಜ್ಯಗಳಾದ ತಮಿಳುನಾಡು, ಪಾಂಡಿಚೇರಿ, ಕೇರಳ, ತೆಲಂಗಾಣಕ್ಕೆ ಪತ್ರ ಬರೆಯಲಾಗಿದೆ. ಅದರಂತೆ ಆಂಧ್ರಪ್ರದೇಶ ತನ್ನ ಒಪ್ಪಿಗೆ ಸೂಚಿಸಿರುವ ಹಿನ್ನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.