ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋಟ್ಲಾ ಮೈದಾನದಲ್ಲಿ ಪರ್ಫೆಕ್ಟ್ ಟೆನ್ ವಿಕೆಟ್ಸ್ ಪಡೆದ ಬಗ್ಗೆ ಅನಿಲ್ ಕುಂಬ್ಳೆ ಹೇಳೋದು ಏನು ?

admin by admin
July 24, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋಟ್ಲಾ ಮೈದಾನದಲ್ಲಿ ಪರ್ಫೆಕ್ಟ್ ಟೆನ್ ವಿಕೆಟ್ಸ್ ಪಡೆದ ಬಗ್ಗೆ ಅನಿಲ್ ಕುಂಬ್ಳೆ ಹೇಳೋದು ಏನು ?

ಫೆಬ್ರವರಿ 7, 1999. ದೆಹಲಿಯ ಆಗಿನ ಫೀರೋಜ್ ಶಾ ಕೋಟ್ಲಾ ಮೈದಾನ ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಿತ್ತು. ಟೆಸ್ಟ್ ಕ್ರಿಕೆಟ್ ನ ಒಂದು ಇನಿಂಗ್ಸ್ ನ ಹತ್ತು ವಿಕೆಟ್‍ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋದು ನಮ್ಮ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ. ಅಷ್ಟೇ ಅಲ್ಲ, ವಿಶ್ವ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿರುವ ಎರಡನೇ ಬೌಲರ್ ಆಗಿಯೂ ಹೊರಹೊಮ್ಮಿದ್ರು. ಕುಂಬ್ಳೆ ಈ ಸಾಧನೆ ಮಾಡಿ 21 ವರ್ಷಗಳಾಗಿವೆ. ಆದ್ರೆ ಇಲ್ಲಿಯವರೆಗೆ ಇಂತಹುದ್ದೊಂದು ಸಾಧನೆ ಮತ್ತೆ ಮರುಕಳಿಸಿಲ್ಲ.
ಇದೀಗ ಅನಿಲ್ ಕುಂಬ್ಳೆ ಈ ಸಾಧನೆ ಬಗ್ಗೆ ಮಾತನಾಡಿದ್ದಾರೆ. ಪರ್ಫೆಕ್ಟ್ ಟೆನ್ ಬಗ್ಗೆ ಮತ್ತೊಮ್ಮೆ ನೆನಪು ಮಾಡಿಕೊಂಡಿದ್ದಾರೆ. ಆ ಪಂದ್ಯದಲ್ಲಿ ಹತ್ತು ವಿಕೆಟ್‍ಗಳನ್ನು ಪಡೆಯಲು ಹೇಗೆ ಸಾಧ್ಯವಾಯ್ತು ? ಶ್ರೀನಾಥ್ ವೈಡ್ ಬಾಲ್ ಹಾಕಿರುವುದು…ಹಾಗೇ ಪಾಕ್ ತಂಡದ ಒಂದೊಂದು ವಿಕೆಟ್‍ಗಳು ಹೇಗೆ ಪತನಗೊಂಡಿದ್ದವು ಎಂಬುದನ್ನು ಜಿಂಬಾಬ್ವೆಯ ಪೊಮ್ಮಿಯ್ ಎಂಬ್ವಾಗ್ ಜೊತೆಗಿನ ಲೈವ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.
ಪಂದ್ಯದ ಟೀ ನಂತರ ನನಗೆ ಏಳು, ಎಂಟು ಮತ್ತು ಒಂಬತ್ತನೇ ವಿಕೆಟ್ ಸಿಕ್ಕಿತ್ತು. ನಾನು ನನ್ನ ಓವರ್ ಅನ್ನು ಮುಗಿಸಿದೆ. ಬಳಿಕ ಜಾವಗಲ್ ಶ್ರೀನಾಥ್ ಬೌಲಿಂಗ್ ಮಾಡಿದ್ದರು. ಬಹುಶಃ ಆ ಒಂದು ಓವರ್ ಮಾಡುವುದಕ್ಕೆ ಶ್ರೀನಾಥ್‍ಗೆ ತುಂಬಾ ಕಷ್ಟಕರವಾಗಿತ್ತು. ಅವರು ಕಲಿಯಲು ಅಗತ್ಯವಿಲ್ಲದ ಎಸೆತಗಳನ್ನು ಹಾಕಿದ್ದರು. ಅದ್ರಲ್ಲಿ ವೈಡ್ ಕೂಡ ಇತ್ತು. ಹಾಗಂತ ನಾನು ಅವರಲ್ಲಿ ಏನು ಕೇಳಿಲ್ಲ. ಹೇಳಿಲ್ಲ. ವಾಸೀಮ್ ಅಕ್ರಮ್ ಸಿಂಗಲ್ ರನ್ ತೆಗೆಯುತ್ತಾರೆ ಅಂತ ನಾನು ಭಾವಿಸಿದ್ದೆ. ಆದ್ರೆ ನನಗೆ ಒಂದು ವಿಕೆಟ್ ಪಡೆಯಲು ಒಂದು ಓವರ್ ಸಾಕು ಎಂದು ಯೋಚಿಸುತ್ತಿದೆ. ಆದ್ರೆ ಶ್ರೀನಾಥ್ ಬಳಿ ಕೇಳಲು ನನಗೆ ಮುಜುಗರವಾಗಿತ್ತು ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.
ಅದಕ್ಕಿಂತ ಮುಂಚೆ ಚೆನ್ನೈನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಕೇವಲ 12 ರನ್ ಗಳಿಂದ ಸೋತಿತ್ತು. ಭಾರತಕ್ಕೆ ದೆಹಲಿ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿ ಸಮಗೊಳಿಸುವ ಅಗತ್ಯವಿತ್ತು. ಪಾಕ್‍ಗೆ ಗೆಲ್ಲಲು 420 ರನ್‍ಗಳು ಬೇಕಿದ್ದವು. ಆರಂಭಿಕರಾದ ಸೈಯ್ಯದ್ ಅನ್ವರ್ ಮತ್ತು ಶಾಹೀದ್ ಆಫ್ರಿಧಿ 101 ರನ್‍ಗಳ ಜೊತೆಯಾಟವನ್ನು ಅಡಿದ್ದರು.. ಆಗ ಭಾರತ ತಂಡದ ನಾಯಕನಾಗಿದ್ದ ಮಹಮ್ಮದ್ ಅಜರುದ್ದೀನ್ ಅನಿಲ್ ಕುಂಬ್ಳೆ ಕೈಯಲ್ಲಿ ಸತತವಾಗಿ ಬೌಲಿಂಗ್ ಮಾಡಿಸಿದ್ದರು. ಆದ್ರೆ ಮೊದಲ ವಿಕೆಟ್ ಜೊತೆಯಾಟಕ್ಕೆ ಬ್ರೇಕ್ ಹಾಕಿದ್ದ ನಂತರ ಕೋಟ್ಲಾ ಮೈದಾನದಲ್ಲಿ ಅನಿಲ್ ಕುಂಬ್ಳೆಯವರನ್ನು ಹಿಡಿಯಲು ಯಾರಿಂದಲೂ ಸಾಧ್ಯವಾಗಿಲ್ಲ.
ಇದೊಂದು ವಿಶೇಷ ದಿನವಾಗಿತ್ತು. ಹಾಗೇ ಸಾಕಷ್ಟು ಒತ್ತಡವೂ ಇತ್ತು. ಯಾಕಂದ್ರೆ ಸುಮಾರು ವರ್ಷಗಳ ನಂತರ ಪಾಕಿಸ್ತಾನ ಭಾರತ ಪ್ರವಾಸ ಮಾಡಿತ್ತು. ನಾವು ಕೋಟ್ಲಾ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಬೌನ್ಸಿ ಪಿಚ್ ನಲ್ಲಿ ನಾನು ಸಾಕಷ್ಟು ಪರಿಣಾಮಕಾರಿಯಾಗುತ್ತೇನೆ ಅನ್ನೋ ನಂಬಿಕೆ ನನಗಿತ್ತು. ಭೋಜನ ವಿರಾಮದ ತನಕ ಪಾಕ್ ತಂಡ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ ಒಂದು ವಿಕೆಟ್ ಉರುಳಿಸಬೇಕು ಪಂದ್ಯದ ಗತಿ ಬದಲಾಗುತ್ತೆ ಅನ್ನೋ ವಿಶ್ವಾಸವೂ ಇತ್ತು. ಭೋಜನ ವಿರಾಮದ ನಂತರ ನಾನು ಬೌಲಿಂಗ್ ತುದಿಯನ್ನು ಬದಲಾಣೆ ಮಾಡಿಕೊಂಡೆ. ಹಾಗೇ ಮೊದಲ ವಿಕೆಟ್ ಸಿಕ್ಕಿತ್ತು. ಎರಡನೇ ವಿಕೆಟ್ ಸಿಕ್ಕಿತ್ತು. ಬಳಿನ ನಾನು ನಿರಂತರವಾಗಿ ಬೌಲಿಂಗ್ ಮಾಡಿದ್ದೆ. ಹಾಗೇ ತುಂಬಾ ಆಯಾಸಗೊಂಡಿದ್ದೆ. ಅದೇ ರೀತಿ ನನಗೆ ಬೌಲಿಂಗ್ ಸಾಧನೆಯನ್ನು ಉತ್ತಮ ಪಡಿಸುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬ ಯೋಚನೆಯಲ್ಲಿದೆ ಎಂದು 21 ವರ್ಷಗಳ ನಡೆದಿದ್ದ ಪಂದ್ಯದ ಕ್ಷಣಗಳನ್ನು ಅನಿಲ್ ಕುಂಬ್ಳೆ ನೆನಪು ಮಾಡಿಕೊಂಡ್ರು.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
Tags: anil 10 wicketsAnil KumblebcciICCindia -pakisthanIndian cricketjavagal shrinathmohammad azaruddinpakisthanPCBtest match
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram