ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನ ಈಡೇರಿಸದೇ ಇದ್ದರೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭೋಪಾಲ್ ನಲ್ಲಿ ಮಾತನಾಡಿದ ಸಿಂಧಿಯಾ ಕಾಂಗ್ರೆಸ್ ಭರವಸೆ ನೀಡಿದ ಮೇಲೆ ಅದನ್ನು ಈಡೇರಿಸದೆ ಇರುವುದಿಲ್ಲ. ಹಾಗಾಗಿ ಮುಖ್ಯಮಂತ್ರಿ ಕಮಲ್ ನಾಥ್ ಪ್ರಣಾಳಿಕೆಯಲ್ಲಿ ವಾಗ್ದಾನ ನೀಡಿದಂತೆ ರೈತರ ಸಾಲ, ಶಿಕ್ಷಕರ ಬೇಡಿಕೆ ಈಡೇರಿಸಬೇಕಾಗಿದೆ. ಇಲ್ಲದಿದ್ದರೆ ರೈತರ ಜೊತೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಕೆಲ ದಿನಗಳ ಮೊದಲು ಪಕ್ಷದ ನಾಯಕ ಗೋವಿಂದ್ ಸಿಂಗ್ ಸಾಲ ಮನ್ನಾ ಮಾಡಲು ಅಸಾಧ್ಯ ಎಂದಿದ್ದರು.
ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...








