777 ಚಾರ್ಲಿ… ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾದಲ್ಲಿ ಚಾರ್ಲಿ ಪಾತ್ರದಲ್ಲಿ ನಟಿಸಿರುವ ನಾಯಿಯ ಪಾತ್ರ ಹೈಲೇಟ್.. ಈ ಸಿನಿಮಾ ಜನರ ಜೊತೆಗೆ ಭಾವನಾತ್ಮಕವಾಗಿ ಕನೆಕ್ಟ್ ಆಗಿದ್ದು , ಆಡಿಯನ್ಸ್ ಕಣ್ಣಲ್ಲಿ ನೀರು ತರಿಸುತ್ತಿದೆ.. ಅಂತೆಯೇ ಸಿನಿಮಾ ವೀಕ್ಷಣೆ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ತುಂಬಾ ಎಮೋಷನಲ್ ಆಗಿ ಕಣ್ಣೀರಿಟ್ಟಿದ್ದರು..
ಆದ್ರೀಗ ಇದೇ ವಿಚಾರಕ್ಕೆ ನಟ ಚೇತನ್ ಅಹಿಂಸಾ ಅವರು ಪ್ರತಿಕ್ರಿಯೆ ನೀಡಿದ್ದು , ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ ಜನ ಅವರ ಸರ್ಕಾರ ನೋಡಿ ಕಣ್ಣೀರಿಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ..
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು “ಕನ್ನಡ ಚಿತ್ರವೊಂದನ್ನು ತೆರೆ ಮೇಲೆ ನೋಡಿ ಸಿಎಂ ಬೊಮ್ಮಾಯಿ ಅವರು ಕಣ್ಣೀರು ಹಾಕಿದರೆ, ಬೊಮ್ಮಾಯಿ ಅವರ ಆಡಳಿತವನ್ನು ನೋಡಿ ಕರ್ನಾಟಕದ ಜನತೆ ಕಣ್ಣೀರು ಹಾಕುತ್ತಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.. ಅವರ ಈ ಪೋಸ್ಟ್ ಗೆ ಪರ ವಿರೋಧ ವ್ಯಕ್ತವಾಗ್ತಿದೆ..