ಸುಳ್ಯ : ತುರ್ತು ಔಷಧಿಗಾಗಿ ವೃದ್ಧೆಯೊಬ್ಬರು ಬರೋಬ್ಬರಿ 15 ಕಿ.ಮೀ ದೂರ ಕಾಲ್ನಡಿಗೆಯಲ್ಲಿ ಸಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ವೃದ್ಧೆಯೊಬ್ಬರು ಔಷಧಕ್ಕಾಗಿ 15 ಕಿ.ಮೀ. ದೂರದ ಗುತ್ತಿಗಾರಿಗೆ ನಡೆದುಕೊಂಡೇ ಸಾಗಿದ್ದರೆನ್ನಲಾಗಿದೆ. ಈ ವೇಳೆ ತುಂಬಾ ನಿತ್ರಾಣ ಸ್ಥಿತಿಯಲ್ಲಿದ್ದ ಅಜ್ಜಿಯನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದಾಗ ವೃದ್ಧೆ ಎಲ್ಲ ವಿಷಯವನ್ನು ತಿಳಿಸಿದ್ದಾರೆ. ಬಳಿಕ ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರ್, ಪಿಡಿಒ ಶ್ಯಾಮಪ್ರಸಾದ್ ಹಾಗೂ ತುರ್ತು ಕಾರ್ಯಪಡೆ ಸದಸ್ಯರು ಸ್ಥಳಕ್ಕೆ ಆಗಮಿಸಿ ವೃದ್ಧೆಗೆ ಸೂಕ್ತ ಔಷಧದ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ ಖಾಸಗಿ ವಾಹನದಲ್ಲಿ ಮನೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








