ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

admin by admin
September 1, 2026
in Uncategorized
Share on FacebookShare on TwitterShare on WhatsappShare on Telegram

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ ಸ್ಟುಡಿಯೋಸ್ ಬ್ಯಾನರ್‌ಗಳಡಿ ಪೂಜಿತಾ ಕೆ. ಮತ್ತು ಕೆ. ಸೇವಿತಾ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಯುವ ನಿರ್ದೇಶಕ ಹರ್ಷವರ್ಧನ್ ಕಡಿಯಾಲ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಖ್ಯಾತ ತೆಲುಗು ನಿರ್ಮಾಪಕ ದಿಲ್ ರಾಜು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಚಿತ್ರತಂಡಕ್ಕೆ ಶುಭ ಹಾರೈಸಿದರು.

Related posts

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

September 1, 2026
upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

September 1, 2026

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್, ಈ ಚಿತ್ರದ ಭಾಗವಾಗಿರುವುದು ತಮ್ಮ ಅದೃಷ್ಟವೆಂದು ಸಂತಸ ವ್ಯಕ್ತಪಡಿಸಿದರು. “ನಾನು ಈ ಹಿಂದೆ ಬಾಲಕೃಷ್ಣ ಅವರ ‘ಗೌತಮೀಪುತ್ರ ಶಾತಕರ್ಣಿ’ ಹಾಗೂ ಇತ್ತೀಚೆಗೆ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದಲ್ಲಿ ನಟಿಸಿದ್ದೇನೆ. ಈಗ ‘ಕೂರ್ಮಾವತಾರ’ದಂತಹ ವಿಭಿನ್ನ ಕಥೆಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿರುವುದು ಖುಷಿ ತಂದಿದೆ. ನಾನು ಯಾವತ್ತೂ ಹೊಸಬರು-ಹಳಬರು ಎಂದು ಭೇದಭಾವ ಮಾಡುವುದಿಲ್ಲ; ಕಥೆ ಮತ್ತು ನಿರ್ದೇಶಕರ ಮೇಲಿನ ನಂಬಿಕೆಯೇ ನನ್ನ ಆಯ್ಕೆ. ಈ ಚಿತ್ರದಲ್ಲಿ ಗೆಳೆಯ ಸಾಯಿಕುಮಾರ್ ಅವರೊಂದಿಗೆ ಮತ್ತೊಮ್ಮೆ ತೆರೆ ಹಂಚಿಕೊಂಡಿರುವುದು ವಿಶೇಷ ಅನುಭವ ನೀಡಿದೆ” ಎಂದು ಶಿವಣ್ಣ ಮೆಚ್ಚುಗೆ ಸೂಚಿಸಿದರು.

ಟೀಸರ್ ವೀಕ್ಷಿಸಿದ ಬಳಿಕ ಮಾತನಾಡಿದ ನಿರ್ಮಾಪಕ ದಿಲ್ ರಾಜು, ಚಿತ್ರದ ದೃಶ್ಯವೈಭವ ಅದ್ಭುತವಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು. “ನಿರ್ದೇಶಕ ಹರ್ಷ ತಮ್ಮ ಕೆಲಸದ ಮೂಲಕ ಎಲ್ಲರಿಗೂ ದೊಡ್ಡ ಸರ್‌ಪ್ರೈಸ್ ನೀಡಿದ್ದಾರೆ. ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಾಣಲಿ. ಶಿವರಾಜ್‌ಕುಮಾರ್ ನಿಜವಾದ ಸೂಪರ್‌ಸ್ಟಾರ್; ಇತ್ತೀಚೆಗೆ ನಾನು ಕೇಳಿದ ಕಥೆಯೊಂದಕ್ಕೆ ಶಿವಣ್ಣ ಅವರೇ ಸೂಕ್ತ ಎಂದು ಭಾವಿಸಿದ್ದು, ಶೀಘ್ರದಲ್ಲೇ ನಮ್ಮ ತಂಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ” ಎಂಬ ಮಹತ್ವದ ಸುಳಿವು ನೀಡಿದರು.

ಖ್ಯಾತ ನಟ ಸಾಯಿಕುಮಾರ್ ಮಾತನಾಡಿ, “ಶಿವಣ್ಣ ಈ ಸಿನಿಮಾ ಒಪ್ಪಿಕೊಂಡಿರುವುದೇ ಒಂದು ದೈವಸಂಕಲ್ಪ. ಅವರೊಂದಿಗೆ ಮತ್ತೊಮ್ಮೆ ನಟಿಸುವ ಅವಕಾಶ ಸಿಕ್ಕಿರುವುದು ನನಗೆ ಹೆಮ್ಮೆಯ ವಿಷಯ. ನನ್ನ ತಾಯಿ ಡಾ. ರಾಜ್‌ಕುಮಾರ್ ಅವರೊಂದಿಗೆ ನಟಿಸಿದ್ದರು, ನನ್ನ ತಂದೆ ತೆಲುಗಿನಲ್ಲಿ ರಾಜ್‌ಕುಮಾರ್ ಅವರಿಗೆ ಧ್ವನಿ ನೀಡುತ್ತಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ‘ಪೊಲೀಸ್ ಸ್ಟೋರಿ’ ಚಿತ್ರದ ಮೂಲಕ ನನ್ನನ್ನು ನಾಯಕನನ್ನಾಗಿ ಮಾಡಿ, ನಮ್ಮ ಇಡೀ ಕುಟುಂಬಕ್ಕೆ ಬದುಕು ನೀಡಿದ್ದೇ ಕರ್ನಾಟಕ. ಹೀಗಾಗಿ ಡಾ. ರಾಜ್ ಕುಟುಂಬದ ಜೊತೆಗೆ ನನಗೆ ಎಂದಿಗೂ ಬಿಡಿಸಲಾರದ ಅವಿನಾಭಾವ ನಂಟಿದೆ” ಎಂದು ಹಳೆಯ ದಿನಗಳನ್ನು ನೆನೆದರು.

ಈ ಚಿತ್ರದಲ್ಲಿ ಶಿವರಾಜ್‌ಕುಮಾರ್ ಮತ್ತು ಸಾಯಿಕುಮಾರ್ ಅವರ ಜೊತೆಗೆ ವರಲಕ್ಷ್ಮಿ ಶರತ್‌ಕುಮಾರ್, ರಾಜ್ ತರುಣ್, ಶಿವಾಜಿ, ಆತಿರಾ ರಾಜ್, ರಾಜಾ ರವೀಂದ್ರ, ಬಾಲನಟಿ ಲೌಕ್ಯ ಸಾಯಿ, ಸಪ್ತಗಿರಿ, ತಾಗುಬೋತು ರಮೇಶ್, ಶತ್ರು, ವಿಟಿವಿ ಗಣೇಶ್, ಗೆಟಪ್ ಶ್ರೀನು ಹಾಗೂ ಮಹೇಶ್ ವಿಟ್ಟಾ ಸೇರಿದಂತೆ ಬಹುದೊಡ್ಡ ತಾರಾಗಣವಿದೆ.

ಚಿತ್ರಕ್ಕೆ ಜಗದೀಶ್ ಚೀಕಟಿ ಛಾಯಾಗ್ರಹಣವಿದ್ದು, ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ, ರಾಘವೇಂದ್ರ ನಾಗರದೋಣ ಕಲಾ ನಿರ್ದೇಶನ ಹಾಗೂ ಲೇಖಕ್ ರಾಮ್ ಅವರ ಚಿತ್ರಕಥೆ-ಸಂಭಾಷಣೆ ಚಿತ್ರಕ್ಕಿದೆ. ಪಿ. ಸ್ನಿಗ್ಧಾ ರೆಡ್ಡಿ ಸಹ-ನಿರ್ಮಾಣ ಹಾಗೂ ಅನಿಲ್ ಕುಮಾರ್ ಮೈಲಾಪುರ್ ಅವರ ಕಾರ್ಯಕಾರಿ ನಿರ್ಮಾಣದಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಅತೀ ಶೀಘ್ರದಲ್ಲೇ ಈ ಸಿನಿಮಾ ರಿಲೀಸ್‌ ಆಗಲಿದೆ.

ShareTweetSendShare
Join us on:

Related Posts

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

shivarajkumar-bail-movie-teaser-released-pavan-wadeyar-kvn-productions

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್!

by admin
August 28, 2026
0

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್: ಪವನ್ ಒಡೆಯರ್-ಕೆವಿಎನ್ ಕಾಂಬಿನೇಷನ್‌ನಲ್ಲಿ ಸದ್ದು ಮಾಡುತ್ತಿದೆ ಖಾಕಿ ಖದರ್! ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram