ನಿರ್ಭಯಾ ಹಂತಕರಿಗೆ ಮಾರ್ಚ್ 20ಕ್ಕೆ ನಾಲ್ಕನೇ ಬಾರಿ ಡೆತ್ ನೋಟಿಸ್ ಜಾರಿ ಮಾಡಿದ್ದು, ಇದೀಗ ಅತ್ಯಾಚಾರಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಗಲ್ಲು ಶಿಕ್ಷೆಯಿಂದ ಪಾರಾಗಲು ಇರುವ ಎಲ್ಲಾ ಕಾನೂನಾತ್ಮಕ ಅವಕಾಶಗಳನ್ನು ಮತ್ತೊಮ್ಮೆ ಮೊದಲಿನಿಂದ ಉಪಯೋಗಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದಾನೆ.
ನನಗೆ ಮೊದಲ ಬಾರಿ ಗಲ್ಲು ಶಿಕ್ಷೆ 2018ರಲ್ಲಿ ಜಾರಿಯಾಗಿತ್ತು. ಕಾನೂನಿನ ಪ್ರಕಾರ ಗಲ್ಲು ಶಿಕ್ಷೆಯಿಂದ ಪಾರಾಗಲು 3 ವರ್ಷಗಳ ಕಾಲಾವಕಾಶವಿದೆ. ಆದರೆ ಕೇಂದ್ರ ಗೃಹ ಇಲಾಖೆ, ದೆಹಲಿ ಸರ್ಕಾರ, ಅಮಿಕಸ್ ಕ್ಯೂರಿಯಾಗಿರುವ ವೃಂದಾ ಗ್ರೋವರ್, ನನಗೆ ತಪ್ಪು ಮಾಹಿತಿ ನೀಡಿ ಕೆಲವು ಕ್ಯುರೇಟಿವ್ ಅರ್ಜಿಗಳಿಗೆ ಹಾಗೂ ಕೆಲವು ಮೇಲ್ಮನವಿಗಳಿಗೆ ತ್ವರಿತವಾಗಿ ನನ್ನ ಸಹಿ ಹಾಕಿಸಿಕೊಂಡು ಅರ್ಜಿಗಳನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದಾರೆ ಎಂದು ಆತ ಅರ್ಜಿಯಲ್ಲಿ ಆರೋಪಿಸಿದ್ದಾನೆ.
ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..
ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...








