ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State: 1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ | ಸರಕಾರಕ್ಕೆ ವರದಿ ಸಲ್ಲಿಸಿದ ಸಮಿತಿ

Vivek Biradar by Vivek Biradar
March 25, 2022
in Newsbeat, State, ರಾಜ್ಯ
School Saaksha Tv
Share on FacebookShare on TwitterShare on WhatsappShare on Telegram

1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ | ಸರಕಾರಕ್ಕೆ ವರದಿ ಸಲ್ಲಿಸಿದ ಸಮಿತಿ

ಬೆಂಗಳೂರು: 1-10 ನೇ ತರಗತಿಯ ಪಠ್ಯಗಳು ಪರಿಷ್ಕರಣೆಗೊಳ್ಳುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ, ಸಮಿತಿ ಸರಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ಸಮಿತಿ ವರದಿ ಸಲ್ಲಿಕೆ ಮಾಡಿದೆ.

2022-23 ನೇ ಸಾಲಿನಿಂದ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಕೆಲ ಇತಿಹಾಸ ತಿರುಚಲಾಗಿದೆ .ಟಿಪ್ಪು ಸುಲ್ತಾನ್ ಕುರಿತ ತಿರುಚಿದ ಇತಿಹಾಸ ಕೈ ಬಿಡುವಂತೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ವರ್ಣರಂಜಿತ, ಮತ್ತು ವೈಭವೀಕರಣದ ಅಂಶಗಳನ್ನು ಕೈಬಿಟ್ಟು ನೂತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.

ಪರಿಷ್ಕರಣೆಗೊಂಡ ಪಠ್ಯಪುಸ್ತಕದಲ್ಲಿ ಏನಿದೆ?: 
ಟಿಪ್ಪು ಸುಲ್ತಾನ್ ಪಠ್ಯ ಕೈ ಬಿಟ್ಟಿಲ್ಲ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಬಿದ್ದಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯದಲ್ಲಿ ಹೆಚ್ಚು ವೈಭವೀಕರಿಸಲಾಗಿತ್ತು. ಇದಕ್ಕೆ ರೋಹಿತ್ ಚಕ್ರತೀರ್ಥ ಸಮಿತಿಯಿಂದ ಬ್ರೇಕ್ ಹಾಕಲಾಗಿದೆ.

 ಹಿಂದೂ ಭಾವನೆಗೆ ಧಕ್ಕೆ ತರುವ ಕೆಲ ಅಂಶಗಳ ಪಠ್ಯವನ್ನ ಪರಿಷ್ಕರಣೆ ಮಾಡಲಾಗಿದೆ. ಈಶಾನ್ಯ ಭಾರತದಲ್ಲಿ 600 ವರ್ಷ ಆಳಿದ ಅಹೋಮ್ ಸಾಮ್ರಾಜ್ಯ ಮತ್ತು ಕಾಶ್ಮೀರ ಕಣಿವೆಯನ್ನು 300 ವರ್ಷ ಆಳಿದ ಕಾರ್ಕೋಟ ವಂಶದ ರಾಜರ ಬಗ್ಗೆ ಪಠ್ಯದಲ್ಲಿ ಅಳವಡಿಕೆ ಶಿಫಾರಸು.

 ಬಾಬಾ ಬುಡನ್ ಗಿರಿ ಕುರಿತಾದ ಇತಿಹಾಸಗಳು, ಹಾಗೂ ಬಾಬಾ ಬುಡನ್ ಗಿರಿ ಹೆಸರು ಬದಲಿಗೆ ದತ್ತಪೀಠ ಹೆಸರು ಸೇರ್ಪಡೆಗೆ ಸಮಿತಿಯಿಂದ ಶಿಫಾರಸು. ವೈದಿಕ ಧರ್ಮದ ಲೋಪಗಳಿಂದಾಗಿ ಅನೇಕ ಹೊಸ ಧರ್ಮಗಳು ಉದಯವಾಯಿತು ಎಂಬ ಪಠ್ಯದ ಲೋಪವನ್ನು ಸಮಿತಿ ಸರಿಪಡಿಸಿದೆ

 ಹಿಂದೆ ಯಾಗ-ಯಜ್ಞಗಳನ್ನ ನಡೆಸುವಾಗ ಕೃಷಿಗೆ ಉಪಯೋಗ ಮಾಡುತ್ತಿದ್ದ ಪ್ರಾಣಿಗಳನ್ನು ಬಲಿಕೊಡಲಾಗುತ್ತಿತ್ತು ಎಂಬ ಅಂಶ ಪರಿಷ್ಕರಣೆ ಮಾಡಲಾಗಿದೆ. ದವಸ ಧಾನ್ಯಗಳನ್ನ ಯಜ್ಞ ಕುಂಡದಲ್ಲಿ ಸುಡುತ್ತಿದ್ದರು. ಇದರಿಂದ ಆಹಾರದ ಅಭಾವ ಆಗಿತ್ತು ಎಂಬ ಅಂಶವನ್ನು ಪರಿಷ್ಕರಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಊಹಾಪೋಹಗಳನ್ನು ಹಾಕಬಾರದು. ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ. ಟಿಪ್ಪು ವಿಚಾರವನ್ನ ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು, ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಸೇರಿಸಲು ಮಾಡಲು ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.

ಏನೇನು ದೋಷಗಳು ಆಗಿದ್ದವು, ತಾಂತ್ರಿಕ ತಪ್ಪುಗಳು ಆಗಿದ್ದವು ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಮಕ್ಕಳು ಓದಲೇ ಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

Tags: #Saaksha TVB C Educationeducation departmentstate
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram