ಅಮರಾವತಿ: ಆಂಧ್ರಪ್ರದೇಶದ (Andhrapradesh) ವಿಜಯನಗರಂ ಜಿಲ್ಲೆಯಲ್ಲಿ ನಡೆದಿದ್ದ ರೈಲು ದುರಂತದಲ್ಲಿ ಸಾವನ್ನಪ್ಪುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಮೃತರ ಕುಟುಂಬಸ್ಥರಿಗೆ ಆಂಧ್ರ ಸರ್ಕಾರ 10 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 2.5 ಲಕ್ಷ ರೂ. ಪರಿಹಾರ ಘೋಷಿಸಿದೆ. ವಿಶಾಖಪಟ್ಟಣಂ-ರಾಯಗಢ (Visakhapatnam to Rayagada) ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ 11 ಜನ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಘಟನೆಗೆ ಆಂಧ್ರ ಸಿಎಂ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.








