ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೊರೊನಾ ಸೋಂಕು ತಗುಲಿದ 10 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಶನಿವಾರ ಮನೆಗೆ ವಾಪಾಸ್ಸಾಗಿದೆ. ಮಗುವಿನ ಜೊತೆ ಇದ್ದ ಮಗುವಿನ ತಾಯಿ ಮತ್ತು ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಎಂದು ಬಂದಿದ್ದು, ಇವರು ಕೂಡ ಮಗುವಿನ ಜೊತೆ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆ.
ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಗುವನ್ನು ಮಾರ್ಚ್ 23ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಕೊರೋನಾ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿತ್ತು. ಮಾರ್ಚ್ 26ರಂದು ಬಂದ ವರದಿ ಮಗುವಿಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿತು.
10 ತಿಂಗಳ ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ರಾಜ್ಯದಲ್ಲೇ ಮೊದಲ ಪ್ರಕರಣವಾಗಿದ್ದು, ಎದೆ ಹಾಲು ಕುಡಿಯುವ ಕಂದಮ್ಮನಿಗೆ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ವೈದ್ಯರಿಗೂ ಕೂಡ ಸವಾಲಾಗಿ ಪರಿಣಮಿಸಿತ್ತು. ಆದರೆ ಸವಾಲನ್ನು ಯಶಸ್ವಿಯಾಗಿ ಎದುರಿಸಿದ ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ.
ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿದ್ದು, ಗ್ರಾಮಸ್ಥರು ಬಹಳ ಉತ್ತಮ ಸಹಕಾರ ನೀಡಿದ್ದರು. ಈ ಸಮಯದಲ್ಲಿ ಜಿಲ್ಲಾಡಳಿತವೇ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸಿತ್ತು. ಗ್ರಾಮದಲ್ಲೂ ಕೊರೊನಾ ಸೋಂಕು ಯಾರಿಗೂ ಹರಡದಿರುವುದು ಕೂಡ ಸಮಾಧಾನಕರ ವಿಷಯವಾಗಿದೆ.
ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...








