ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದು, ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ನಂತರ, ರಾಮನ ಬಂಟ ಹನುಮಂತನ ಜನ್ಮಸ್ಥಳ ಅಂಜನಾದ್ರಿ ಅಭಿವೃದ್ದಿ ಮಾಡುವಂತೆ ದೊಡ್ಡ ಮಟ್ಟದ ಆಗ್ರಹವಿತ್ತು. ಹಿಂದಿನ ಬಿಜೆಪಿ ಸರ್ಕಾರ ಅನುಧಾನ ನೀಡಿದ್ದರೂ ಬಿಡುಗಡೆಯಾಗಿರಲಿಲ್ಲ. ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಅಂಜನಾದ್ರಿಯ ಅಭಿವೃದ್ದಿಗೆ ಗ್ರೀನ್ ಸಿಗ್ನಲ್ ನೀಡಿದೆ. ಪೌರಾಣಿಕ ಮತ್ತು ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ದಿ ಪಡಿಸಲು 100 ಕೋಟಿ ರೂ. ಹಣ ನೀಡಿದೆ.
ಸಿದ್ದರಾಮಯ್ಯ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ್ ರಾಯರೆಡ್ಡಿ ಕ್ಷೇತ್ರಕ್ಕೆ ಸಿಎಂ ಹೆಚ್ಚಿನ ಅನುಧಾನವನ್ನು ನೀಡಿದ್ದು, ಆಪ್ತ ಸ್ನೇಹಿತನಿಗೆ ಉಡುಗರೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ 50 ಕೋಟಿ ವೆಚ್ಚದಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಶೀಥಲಗೃಹ ನಿರ್ಮಾಣಕ್ಕೆ ಹಣ ನೀಡಿದೆ. ಯಲಬುರ್ಗಾ ಮತ್ತು ಕುಕನೂರು ತಾಲೂಕಿನ 38 ಕೆರಗಳಲ್ಲಿ ಕುಡಿಯುವ ನೀರು ಮತ್ತು ಅಂತರ್ಜಲ ಅಭಿವೃದ್ದಿಗೆ ಕೆರೆ ತುಂಬಿಸುವ ಯೋಜನೆಯಡಿ, 970 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಅಲ್ಲದೇ, ಹಲವು ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.