ವಿಜಯಲಕ್ಷ್ಮಿ ಖಾತೆಗೆ ಹರಿದು ಬಂತು ಲಕ್ಷ ಲಕ್ಷ..! ಇಷ್ಟು ಹಣ ನನಗೆ ಬೇಡ ಎಂದ ನಟಿ..!
ಇತ್ತೀಚೆಗೆ ನಟಿ ವಜಯಲಕ್ಷ್ಮಿ ತಾಯಿ ನಿಧನರಾದ ಬಳಿಕ ಕರ್ನಾಟಕ್ಕೆ ವಾಪಸ್ ಬಂದಿರುವ ನಟಿ , ಎಲ್ಲರ ಸಹಾಯ ಬೇಕು, ಭಿಕ್ಷೆ ಅಂತ ಆದರೂ ಹೇಳಿ ಪರವಾಗಿಲ್ಲ ಎಂದು ಕೇಳಿಕೊಂಡು ಕಣ್ಣೀರಿಟ್ಟಿದ್ದರು. ಮಾಧ್ಯಮದವರೊಂದಿಗೆ ಮಾತನಾಡಿ ಚೆನ್ನೈಯಲ್ಲಿ ಸಮಸ್ಯೆ ಆಗಿ ತಾಯಿ, ಅಕ್ಕನನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದೇನೆ. ಅಕ್ಕ, ತಾಯಿ ನನ್ನ ಮಕ್ಕಳ ಸಮ. ಅಮ್ಮ ಮೃತಪಟ್ಟಿದ್ದು, ನನಗೆ ಆಘಾತ ಆಗಿದೆ. ಜೀವನದಲ್ಲಿ ಸಾಕಷ್ಟು ಹೊಡೆತ ತಿಂದಿದ್ದೇನೆ. ನನ್ನ ಅಕ್ಕ ಉಷಾ ಅವರಿಗೆ ಚಿಕಿತ್ಸೆ ಕೊಡಬೇಕು. ನನ್ನ ಅಕ್ಕನಿಗೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ನಾನು ಮಾತನಾಡೋದು ಒರಟು ಅನ್ನಿಸಬಹುದು. ಅಕ್ಕನಿಗೆ ಎಲ್ಲಾ ರೀತಿಯ ಸೇವೆ ನಾನು ಮಾಡುತ್ತಿದ್ದೇನೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಅಲ್ಲದೇ ಅಮ್ಮ ಬಿಟ್ಟು ಹೋದ ಮೇಲೆ ನಾನು ಬದಲಾಗುತ್ತೇನೆ. ನಾನು ಇನ್ನು ಮುಂದೆ ತಮಿಳುನಾಡಿಗೆ ಹೋಗಲ್ಲ. ಇಲ್ಲೇ ಇರುತ್ತೇನೆ ಇಲ್ಲೇ ಜೀವನ ಸಾಗಿಸುತ್ತೇನೆ. ಅಕ್ಕನಿಗೆ ಸಮಸ್ಯೆ ಆದ ಮೇಲೆ ಅಮ್ಮ ಮಾನಸಿಕವಾಗಿ ನೊಂದಿದ್ದರು. ನೀವೆಲ್ಲಾ ಇದ್ದೀರ, ನಾನು ಧೈರ್ಯವಾಗಿ ಇರುತ್ತೇನೆ ಎಂದಿದ್ದರು.
ಈಗ ವಿಜಯಲಕ್ಷ್ಮಿಗೆ ಸಾಕಷ್ಟು ಜನರು ನೆರವಾಗಿದ್ದಾರೆ. ವಿಜಯಲಕ್ಷ್ಮಿ ಖಾತೆಗೆ ಸುಮಾರು 6 ಲಕ್ಷಕ್ಕೂ ಹೆಚ್ಚು ಹಣವನ್ನು ಕಳಿಸಿದ್ದಾರೆ. ಈ ಬಗ್ಗೆ ವಿಜಯಲಕ್ಷ್ಮಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ನನ್ನ ಜೀವನದಲ್ಲಿ ಇಷ್ಟೊಂದು ಹಣ ನೋಡಿಲ್ಲ. ನನಗೆ ಕರ್ನಾಟಕದವರು ಬಹಳ ಸಹಾಯ ಮಾಡಿದ್ದಾರೆ. ಶಿವರಾಜ್ ಕುಮಾರ್, ಯಶ್ ಎಲ್ಲರ ಜೊತೆಗೆ ಮಾತನಾಡಿದ್ದೇನೆ, ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದು ವಿಜಯಲಕ್ಷ್ಮಿ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲ 6 ಲಕ್ಷ ಹಣ ನನಗೆ ಬಹಳ ದೊಡ್ಡದು ಹಾಗಾಗಿ ನನಗೆ ಅದು ಬೇಡ ಎಂದು ವಿಜಯಲಕ್ಷ್ಮಿ ಆ ಹಣವನ್ನು ವಾಣಿಜ್ಯ ಮಂಡಳಿ ಮುಖೇನ ಜನಸ್ನೇಹಿ ನಿರಾಶ್ರಿತರ ಆಶ್ರಮಕ್ಕೆ ನೀಡಿದ್ದಾರೆ. ನಾನು ಕರ್ನಾಟಕದಲ್ಲಿ ಭಿಕ್ಷುಕಿ. ನಾನು ಭಿಕ್ಷೆ ಬೇಡುತ್ತೇನೆ ನನಗೆ ಮುಜುಗರವಿಲ್ಲ. ನನ್ನ ಅಕ್ಕ, ಅಮ್ಮನನ್ನು ಉಳಿಸಿಕೊಳ್ಳಲು ನಾನು ಭಿಕ್ಷೆ ಬೇಡಿದೆ. ಕರ್ನಾಟಕದ ಜನ ನನಗೆ ಸಾಕಷ್ಟು ನೀಡಿದ್ದಾರೆ. ಇಷ್ಟೊಂದು ಹಣ ನಾನು ನೋಡಿಲ್ಲ. ನನಗೆ ಈಗ ಇದು ಬೇಡ ಎಂದಿದ್ದಾರೆ. ಬಳಿಕ ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದವನ್ನೂ ತಿಳಿಸಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಮಿಂಚಿದ್ದ ವಿಜಯಲಕ್ಷ್ಮಿ ನಂತರ ತಮಿಳಿನಲ್ಲಿ ಅವಕಾಶಗಳು ಹೆಚ್ಚಾದ ಬೆನ್ನಲ್ಲೇ ಅಲ್ಲಿಗೆ ಹೋಗಿ ತಮಿಳುನಾಡಿನಲ್ಲಿಯೇ ಉಳಿದುಕೊಂಡಿದ್ದರು. ಎಷ್ಟೋ ವರ್ಷಗಳಿಂದ ಹೆಚ್ಚು ಸುದ್ದಿಯಲ್ಲಿರದ ವಿಜಯಲಕ್ಷ್ಮಿ ಕೆಲ ದಿನಗಳಿಂದ ಬರೀ ವಿವಾದಗಳಿಂದಳೇ ಸುದ್ದಿಯಲ್ಲಿದ್ದಾರೆ. ಆತ್ಮಹತ್ಯೆ ಯತ್ನ , ಮತ್ತು ಹಲವರ ವಿರುದ್ಧ ಆರೋಪಗಳ ಹೊರೆಸುವ ಜೊತೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋದಾಗಿ ಹೇಳುತ್ತಾ ಅನೇಕರ ಬಳಿ ನೆರವಿಗಾಗಿ ಮನವಿ ಮಾಡಿಕೊಳ್ತಾ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗ್ತಿದ್ದಾರೆ.
ಆದ್ರೆ ಅದೆಷ್ಟೋ ಜನ ನೆಟ್ಟಿಗರು ವಿಜಯಲಕ್ಷ್ಮಿಗೆ ಸಹಾಯಾಸ್ತ ಚಾಚಿದ್ದು, ಇನ್ನೂ ಅನೇಕರು ಆಕೆಯದ್ದು ಬರೀ ಇದೇ ಗೋಳಾಯ್ತು. ಸಿನಿಮಾರಂಗದಲ್ಲಿ ಸಂಪಾದನೆ ಮಾಡಿದ್ದೆಲ್ಲಾ ಎಲ್ಲಿಗೆ ಹೋಯ್ತು ಅಂತೆಲ್ಲಾ ಟ್ರೋಲ್ ಮಾಡ್ತಾಯಿದ್ದಾರೆ. ಅಷ್ಟೇ ಅಲ್ಲ ಇತ್ತೀಚೆಗೆ ವಿಜಯಲಕ್ಷ್ಮಿ ಮತ್ತೊಮ್ಮೆ ಟ್ರೋಲ್ ಆಗುವಂತಾಗಿತ್ತು.